Homeಕರ್ನಾಟಕಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

ಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

- Advertisement -
- Advertisement -

ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್, ’ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ. ಅನುಮಾನವಿದ್ದರೆ ಎದೆ ಬಗೆದು ನೋಡಿ’ ಎಂದಿದ್ದಾರೆ.

’ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್.ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ’ ಎಂದು ಹೇಳಿದ್ದಾರೆ.

’ಟಿಪ್ಪು ಸುಲ್ತಾನರಿಗೆ ವೀರಾಧಿವೀರ, ಶೂರಾಧಿ ಶೂರ, ಮಹಾನ್ ಪರಾಕ್ರಮಿ, “ಮೈಸೂರಿನ ಹುಲಿ” ಎಂಬ ಬಿರುದುಗಳನ್ನ ಕಾಂಗ್ರೆಸ್ ಪಕ್ಷ ನೀಡಿದ್ದಲ್ಲ ಸ್ವಾಮಿ ಇತಿಹಾಸಕಾರರು. ಅದನ್ನ ಎಥಾವತ್ತು ಟಿಪ್ಪುವಿನ ಪರಾಕ್ರಮವನ್ನ, ಧೈರ್ಯ, ಸಾಹಸ, ದೇಶಪ್ರೇಮದ ಕಥನಗಳನ್ನ 425 ಪುಟಗಳ ಪುಸ್ತಕವನ್ನ ಪ್ರಕಟಿಸಿದ್ದು ಬಿಜೆಪಿ ಸರ್ಕಾರ ಎಂಬುದು ಅಷ್ಟು ಬೇಗ ಮರೆತು ಹೋಯಿತಾ..? ಪುಸ್ತಕದ ಮುನ್ನುಡಿಯಲ್ಲಿ 2012-13ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಗೋವಿಂದ ಕಾರಜೋಳರು ಪುಸ್ತಕದಲ್ಲಿ ಬರೆದಿರುವ ಮುನ್ನಡಿಯನ್ನ ಕೋಮುವಾದದ ಕನ್ನಡಕ ತೆಗದು ಓದಿ’ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಕರ್ನಾಟಕ ಇತಿಹಾಸದಲ್ಲಿ 1782-1799ರ ನಡುವಿನ ಅವಧಿಯು ವಿಶಿಷ್ಟವಾದದ್ದು. ಈ ಅವಧಿಯಲ್ಲಿ ಮೈಸೂರು ಸಾಮ್ರಾಜ್ಯ ಟಿಪ್ಪು ಸುಲ್ತಾನನ ಆಡಳಿತಕ್ಕೆ ಒಳಪಟ್ಟಿತ್ತು. ಏಕಾಂಗಿಯಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ತೀವ್ರವಾಗಿ ಹೋರಾಡಿ, ಅವರಿಗೆ ಸೋಲಿನ ರುಚಿಯನ್ನು ತೋರಿಸುವಲ್ಲೂ ಯಶಸ್ವಿಯಾಗಿದ್ದ. ಅದು ಕೂಡಾ ಒಂದು ಬಾರಿ ಅಲ್ಲ, ಎರಡು ಬಾರಿ. ಅದಾಗ್ಯೂ ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದಲ್ಲಿ ಬ್ರಿಟಿಷರ ವಿರುದ್ಧ ಕೊನೆಯವರೆಗೂ ಹೋರಾಡಿ ರಣರಂಗದಲ್ಲೇ ವೀರಮರಣವನ್ನಪ್ಪಿದ. ಈ ವಾಕ್ಯಗಳನ್ನ ಸರ್ಕಾರವೇ ಪ್ರಕಟಿಸಿದ ಪುಸ್ತಕದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಮುನ್ನುಡಿಯಲ್ಲಿ ಬರೆದಿದ್ದಾರೆ. ಪುಸ್ತಕ ಖಾಲಿಯಾಗಿದ್ದರೆ ಇನ್ನೊಮ್ಮೆ ಪ್ರಕಟಿಸಿ ತೊಂದರೆ ಇಲ್ಲ. ಇತಿಹಾಸದ ಅರಿವು ನಿಮಗೆ ತೀರಾ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಬಿಜೆಪಿಯವರು ಇತ್ತೀಚೆಗೆ ಇತಿಹಾಸ ಅಷ್ಟೇ ಬದಲಾಯಿಸುತ್ತಿಲ್ಲ, ತಾವೇ ಹೇಳಿದ್ದ ಹೇಳಿಕೆಗಳನ್ನು, ಪ್ರಕಟಿಸಿದ್ದ ಪುಸ್ತಕಗಳ ಬಗ್ಗೆಯೂ ಸುಳ್ಳನ್ನ ಹೇಳಲು ಆರಂಭಿಸಿದ್ದಾರೆ. ಬಹುಶಃ ವಾಟ್ಸಪ್ ಯುನಿವರ್ಸಿಟಿಯ ಪ್ರಾರಂಭ ಆಗಿದ್ದು 2014ರಲ್ಲಿ, ಜಗದೀಶ್ ಶೆಟ್ಟರ್ ಸಿಎಂ ಆಗಿದ್ದು 2012-13ರಲ್ಲಿ. ಹೀಗಾಗಿ 2014 ಮೊದಲ ಎಲ್ಲಾ ಇತಿಹಾಸವೂ ಬಿಜೆಪಿಗೆ ಸುಳ್ಳಂತೆ ಭಾವಿಸುತ್ತಿದೆ. ಇತ್ತೀಚೆಗೆ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ ವಾಟ್ಸಪ್ ಮಾಹಿತಿ ಹಾಕಿ ತಮ್ಮ ಇತಿಹಾಸ ತಿಳುವಳಿಕೆಯನ್ನ ಜಗಜ್ಜಾಹೀರು ಮಾಡಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

’ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಪ್ರಮಾದಗಳಿಗೆ ಉತ್ತರ ಕೊಡಲು ಶಿಕ್ಷಣ ಸಚಿವರು ಅಸಮರ್ಥರು ಎಂಬುದನ್ನ ಸಾಬೀತು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಬಗ್ಗೆ ಕಂದಾಯ ಸಚಿವರು ಉತ್ತರ ನೀಡುತ್ತಿರುವುದು ಸಂದೇಶವೇನು..? ಮಾಜಿ ಪ್ರಧಾನಿ ದೇವೇಗೌಡರಾದಿಯಾಗಿ, ಈ ನಾಡಿನ ಶಿಕ್ಷಣ ಪ್ರೇಮಿಗಳು, ಸಾಹಿತಿ ಚಿಂತಕರು, ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಕನಿಷ್ಠ ಸೌಜನ್ಯಕ್ಕೂ ಸಿಎಂ ಸಭೆ ಕರೆದು ಸ್ಪಷ್ಟಿಕರಣ ನೀಡಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವ ನಡೆಯಲ್ಲ. ಈಗಲು ಕಾಲ ಮಿಂಚಿಲ್ಲ, ಕೂಡಲೇ ಅವಿವೇಕಿಯೊಬ್ಬ ಮಾತ್ರ ಮಾಡಿರುವ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಕೂಡಲೇ ಹಿಂದಿನ ಪಠ್ಯ ಪುಸ್ತಕವನ್ನೇ ಭೋದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಬಿಜೆಪಿ ನಾಯಕರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ”ಕಂದಾಯ ಸಚಿವ ಆರ್ ಅಶೋಕ್ ಅವರೇ ಈ ಫೋಟೋ ನೆನಪಿದ್ಯಾ..? ಇದು ಟಿಪ್ಪುವಿನ ಪೋಷಕು ಧರಿಸಿ ಆಗಿನ ಸಿಎಂ ಶೆಟ್ಟರ್ ಜೊತೆಗೆ ಪೋಸ್ ನೀಡಿದವರು ತಾವೇ ಅಲ್ಲವೇ..? ಆಗ ಮೈಮೇಲಷ್ಟೆಯಲ್ಲ, ತಲೆ ಮೇಲೆ ಹೊತ್ತು ಮೆರೆಸಿದ್ದನ್ನ ಮರೆತಿದ್ದೀರಾ..? ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತೆ ಹುಶಾರ್…!’ ಎಂದಿದ್ದಾರೆ.

 


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....