Homeಕರ್ನಾಟಕKarnataka Budget-2021 | ರಾಜ್ಯದ ಸಾಲ 3 ಲಕ್ಷ ಕೋಟಿ; 2.5 ಲಕ್ಷ ಕೋಟಿ ಬಜೆಟ್!

Karnataka Budget-2021 | ರಾಜ್ಯದ ಸಾಲ 3 ಲಕ್ಷ ಕೋಟಿ; 2.5 ಲಕ್ಷ ಕೋಟಿ ಬಜೆಟ್!

ಬಜೆಟ್ ವಿರೋಧಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿದೆ. ಬಜಟ್ ಮುಖ್ಯಾಂಶಗಳು ಹೀಗಿವೆ...

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿ 2021-22ನೇ ಸಾಲಿನ ರಾಜ್ಯ ಬಜೆಟ್‌‌ ಅನ್ನು ಮಂಡನೆ ಪ್ರಾರಂಭಿಸಿದ್ದಾರೆ. ಆದರೆ ಈ ನಡುವೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದ್ದಾರೆ.

ರಾಜ್ಯವು ಈಗಾಗಲೆ ಮೂರು ಲಕ್ಷ ಕೋಟಿ ಸಾಲದಲ್ಲಿದ್ದು, ಜೊತೆಗೆ ಕೇಂದ್ರದಿಂದ ಸಿಗಬೇಕಾಗಿದ್ದ ಜಿಎಸ್‌ಟಿ ಪರಿಹಾರ ರಾಜ್ಯಕ್ಕೆ ಸಿಕ್ಕಿಲ್ಲ. ಈ ನಡುವೆ ಕೊರೊನಾದಿಂದಾಗಿ ಉಂಟಾದ ಆರ್ಥಿಕ ಕುಸಿತದ ಒತ್ತಡವು ರಾಜ್ಯದ ಮೇಲೆ ಇದೆ. ಬಜೆಟ್ ಮಂಡನೆಯು ಪೂರ್ಣಗೊಂಡ ಬಳಿಕ ಉಭಯ ಸದನಗಳಲ್ಲಿ ಏಪ್ರಿಲ್ 1 ರವರೆಗೂ ಬಜೆಟ್ ಕುರಿತು ಚರ್ಚೆಗಳನ್ನು ನಡೆಸಲಾಗುತ್ತದೆ.

ಕೊರೊನಾ ನಿಯಂತ್ರಣ, ಲಸಿಕೆ ಹಂಚಿಕೆಯಲ್ಲಿ ರಾಜ್ಯದ ಕಾರ್ಯಕ್ರಮ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಭಾರತದ ಪಾತ್ರಕ್ಕೆ ಜಾಗತಿಕ ಮನ್ನಣೆ ಸಿಕ್ಕಿದೆ ಎಂದು ಬಜೆಟ್ ಮಂಡನೆಯ ಸಮಯದಲ್ಲಿ ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

ಸಾಂಕ್ರಾಮಿಕವನ್ನು ಎದುರಿಸಲು ರಾಜ್ಯದಾದ್ಯಂತ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗಿದ್ದು, ಕೊರೊನಾ ದುಃಸ್ವಪ್ನ, ಜೀವನವಿಡೀ ನೆನಪಿಸಿಕೊಳ್ಳುವಂತದ್ದಾಗಿದ್ದು, ಈ ಸಮರದಲ್ಲಿ ಮಾನವಕುಲ ಜಯಿಸಿದೆ. ಸವಾಲುಗಳನ್ನೇ ಅವಕಾಶವಾಗಿ ಪರಿವರ್ತಿಸಲು ನಮ್ಮ ಸರ್ಕಾರ ಪ್ರಯತ್ನಿಸಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಜಜೆಟ್-2021 ಮುಖ್ಯಾಂಶಗಳು:

ಈ ಬಾರಿ ರಾಜ್ಯದ ಒಟ್ಟು ಬಜೆಟ್ 2.5 ಲಕ್ಷ ಕೋಟಿಯಾಗಿದೆ. ರಾಜ್ಯದಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು. ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ವನಿತಾ ಸಂಗಾತಿ ಬಸ್ ಪಾಸ್ ವ್ಯವಸ್ಥೆ. ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ.ವರೆಗೆ 4% ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

  • ಪೆಟ್ರೋಲ್- ಡೀಸೆಲ್ ಮೇಲೆ ಯಾವುದೆ ಹೊಸ ತೆರಿಗೆ ಇಲ್ಲ, ಜೊತೆಗೆ ತೆರಿಗೆಯ ಇಳಿಕೆಯು ಇಲ್ಲ.
  • ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.
  • 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೆಷ್ಮೆ ಮಾರುಕಟ್ಟೆ ನಿರ್ಮಿಸಲಾಗುವುದು.
  • 100 ತಾಲೂಕು ಆಸ್ಪತ್ರೆಗಳಲ್ಲಿ 6 ಹಾಸಿಗೆಯ ಐಸಿಯು ನಿರ್ಮಾಣ
  • ಮಹಿಳಾ ಸ್ವ ಸಹಾಯ ಸಂಘ ಉತ್ಪನ್ನಗಳಿಗೆ ಮಾರುಕಟ್ಟೆ
  • ವೀರಶೈವ ಲಿಂಗಾಯತರಿಗೆ 500 ಕೋಟಿ ರೂ.
  • ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂ.
  • ಮಹಿಳೆಯರ ಕಲ್ಯಾಣಕ್ಕಾಗಿ 37188 ಕೋಟಿ ರೂ.
  • ಮಹಿಳೆಯರಿಗೆ ಆರು ತಿಂಗಳು ಹೇರಿಗೆ ರಜೆ ಮತ್ತು ಆರು ತಿಂಗಳು ಮಕ್ಕಳ ಆರೈಕೆಯ ರಜೆ
  • ಮೈಸೂರಿನಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆಗೆ ನಿರ್ಮಾಣಕ್ಕೆ 10 ಕೋಟಿ ರೂ.
  • ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ 10ರಷ್ಟು ಮೀಸಲಾತಿ
  • ಗೊಬ್ಬರ ವಿತರಣೆಗೆ 10 ಕೋಟಿ ರೂ. ಅನುದಾನ
  • ಪ್ರತಿಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ
  • ಕಿರು ಆಹಾರ ಸಂಸ್ಕರಣೆಗೆ ಉದ್ಯಮಕ್ಕೆ 50 ಕೋಟಿ
  • 6 ಕೋಟಿ ರೂ. ವೆಚ್ಚದಲ್ಲಿ ಮೌಲ್ಯ ವರ್ಧನಾ ಕೇಂದ್ರಗಳ ಸ್ಥಾಪನೆ
  • ಪ್ರಧಾನ ಮಂತ್ರಿ ಮತ್ಸ್ಯ ಸಂಪ್ರದಾ ಯೋಜನೆಗೆ 62 ಕೋಟಿ ರೂ.

  • ಹೊಸದಾಗಿ 52 ಬಸ್ ನಿಲ್ದಾಣಗಳ ಸ್ಥಾಪನೆ
  • ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ
  • ಉತ್ತಪ ಪ್ರದೇಶದ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ
  • ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ.
  • ಬೀಚ್‌ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ
  • ಮಾಶಾಸನ ಮನೆ ಬಾಗಿಲಿಗೆ ಅಭಿಯಾನ.
  • ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂ.
  • ಭೂಕಂದಾಯ ಅಧಿನಿಯಮಕ್ಕೆ ತಿದ್ದುಪಡಿ.
  • ಉಪನಗರ ರೈಲು ಯೋಜನೆಗೆ 15,767 ಕೋಟಿ ರೂ.
  • ಸ್ಮಾರ್ಟ್ ಕ್ಲಾಸ್ ರೂಮುಗಳಿಗಾಗಿ 50 ಕೋಟಿ ರೂ
  • ರಾಜ್ಯದಾದ್ಯಂತ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರದ ಸ್ಥಾಪನೆ
  • 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ
  • ಕೃಷಿ ಸಂಚಯ್ ಯೋಜನೆಗೆ 835 ಕೋಟಿ.
  • ಸಾವಯವ ಕೃಷಿಗೆ ಉತ್ತೇಜನಕ್ಕೆ 300 ಕೋಟಿ.
  • ಕಾಲುದಾರಿ ನಿರ್ಮಾಣಕ್ಕೆ 100 ಕೋಟಿ ರೂ.
  • ಎಸ್ ಎಲ್ ಭೈರಪ್ಪನವರ ಪರ್ವ ನಾಟಕ ಪ್ರದರ್ಶನಕ್ಕೆ ಒಂದು ಕೋಟಿ ರೂ.
  • ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ.
  •  ಶಾಲಾ ಕಾಲೇಜುಗಳ ಶೌಚಾಲಯ ಅಭಿವೃದ್ಧಿಗೆ 100 ಕೋಟಿ.
  • ಅಲ್ಪಸಂಖ್ಯಾತರ ಅಭಿವೃದ್ಧಿಗೆ 1,500 ಕೋಟಿ ರೂ. ಮೀಸಲು. ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗೆ 200ಕೋಟಿ ರೂ. ಜೈನ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ 50ಕೋಟಿ ರೂ.
  • ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆಗೆ 2ಕೋಟಿ ರೂ.
  • ಪೇಜಾವರ ವಿಶ್ವೇಶ್ವರತೀರ್ಥ ಶ್ರೀಗಳ ಸ್ಮೃತಿ ವನ ಸ್ಥಾಪಿಸಲು 2 ಕೋಟಿ.
  • ಮಹದಾಯಿ ಯೋಜನೆಗೆ 1677ಕೋಟಿ ರೂ.
  • ಉಪ್ಪಿನಕಾಯಿ ಮಾರುವ ಮಹಿಳೆಯರಿಗೆ 25 ಸಾವಿರ ರೂ. ಸಹಾಯಧನ
  • ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ
  • ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ.
  • ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯವುಳ್ಳ ಮತ್ತು 10 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯವುಳ್ಳ ಐಸಿಯು ಸೌಲಭ್ಯಕ್ಕೆ 60 ಕೋಟಿ ರೂ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...