Homeಕರ್ನಾಟಕKarnataka Budget-2021 | ರಾಜ್ಯದ ಸಾಲ 3 ಲಕ್ಷ ಕೋಟಿ; 2.5 ಲಕ್ಷ ಕೋಟಿ ಬಜೆಟ್!

Karnataka Budget-2021 | ರಾಜ್ಯದ ಸಾಲ 3 ಲಕ್ಷ ಕೋಟಿ; 2.5 ಲಕ್ಷ ಕೋಟಿ ಬಜೆಟ್!

ಬಜೆಟ್ ವಿರೋಧಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿದೆ. ಬಜಟ್ ಮುಖ್ಯಾಂಶಗಳು ಹೀಗಿವೆ...

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿ 2021-22ನೇ ಸಾಲಿನ ರಾಜ್ಯ ಬಜೆಟ್‌‌ ಅನ್ನು ಮಂಡನೆ ಪ್ರಾರಂಭಿಸಿದ್ದಾರೆ. ಆದರೆ ಈ ನಡುವೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದ್ದಾರೆ.

ರಾಜ್ಯವು ಈಗಾಗಲೆ ಮೂರು ಲಕ್ಷ ಕೋಟಿ ಸಾಲದಲ್ಲಿದ್ದು, ಜೊತೆಗೆ ಕೇಂದ್ರದಿಂದ ಸಿಗಬೇಕಾಗಿದ್ದ ಜಿಎಸ್‌ಟಿ ಪರಿಹಾರ ರಾಜ್ಯಕ್ಕೆ ಸಿಕ್ಕಿಲ್ಲ. ಈ ನಡುವೆ ಕೊರೊನಾದಿಂದಾಗಿ ಉಂಟಾದ ಆರ್ಥಿಕ ಕುಸಿತದ ಒತ್ತಡವು ರಾಜ್ಯದ ಮೇಲೆ ಇದೆ. ಬಜೆಟ್ ಮಂಡನೆಯು ಪೂರ್ಣಗೊಂಡ ಬಳಿಕ ಉಭಯ ಸದನಗಳಲ್ಲಿ ಏಪ್ರಿಲ್ 1 ರವರೆಗೂ ಬಜೆಟ್ ಕುರಿತು ಚರ್ಚೆಗಳನ್ನು ನಡೆಸಲಾಗುತ್ತದೆ.

ಕೊರೊನಾ ನಿಯಂತ್ರಣ, ಲಸಿಕೆ ಹಂಚಿಕೆಯಲ್ಲಿ ರಾಜ್ಯದ ಕಾರ್ಯಕ್ರಮ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಭಾರತದ ಪಾತ್ರಕ್ಕೆ ಜಾಗತಿಕ ಮನ್ನಣೆ ಸಿಕ್ಕಿದೆ ಎಂದು ಬಜೆಟ್ ಮಂಡನೆಯ ಸಮಯದಲ್ಲಿ ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

ಸಾಂಕ್ರಾಮಿಕವನ್ನು ಎದುರಿಸಲು ರಾಜ್ಯದಾದ್ಯಂತ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗಿದ್ದು, ಕೊರೊನಾ ದುಃಸ್ವಪ್ನ, ಜೀವನವಿಡೀ ನೆನಪಿಸಿಕೊಳ್ಳುವಂತದ್ದಾಗಿದ್ದು, ಈ ಸಮರದಲ್ಲಿ ಮಾನವಕುಲ ಜಯಿಸಿದೆ. ಸವಾಲುಗಳನ್ನೇ ಅವಕಾಶವಾಗಿ ಪರಿವರ್ತಿಸಲು ನಮ್ಮ ಸರ್ಕಾರ ಪ್ರಯತ್ನಿಸಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಜಜೆಟ್-2021 ಮುಖ್ಯಾಂಶಗಳು:

ಈ ಬಾರಿ ರಾಜ್ಯದ ಒಟ್ಟು ಬಜೆಟ್ 2.5 ಲಕ್ಷ ಕೋಟಿಯಾಗಿದೆ. ರಾಜ್ಯದಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು. ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ವನಿತಾ ಸಂಗಾತಿ ಬಸ್ ಪಾಸ್ ವ್ಯವಸ್ಥೆ. ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ.ವರೆಗೆ 4% ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

  • ಪೆಟ್ರೋಲ್- ಡೀಸೆಲ್ ಮೇಲೆ ಯಾವುದೆ ಹೊಸ ತೆರಿಗೆ ಇಲ್ಲ, ಜೊತೆಗೆ ತೆರಿಗೆಯ ಇಳಿಕೆಯು ಇಲ್ಲ.
  • ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.
  • 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೆಷ್ಮೆ ಮಾರುಕಟ್ಟೆ ನಿರ್ಮಿಸಲಾಗುವುದು.
  • 100 ತಾಲೂಕು ಆಸ್ಪತ್ರೆಗಳಲ್ಲಿ 6 ಹಾಸಿಗೆಯ ಐಸಿಯು ನಿರ್ಮಾಣ
  • ಮಹಿಳಾ ಸ್ವ ಸಹಾಯ ಸಂಘ ಉತ್ಪನ್ನಗಳಿಗೆ ಮಾರುಕಟ್ಟೆ
  • ವೀರಶೈವ ಲಿಂಗಾಯತರಿಗೆ 500 ಕೋಟಿ ರೂ.
  • ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂ.
  • ಮಹಿಳೆಯರ ಕಲ್ಯಾಣಕ್ಕಾಗಿ 37188 ಕೋಟಿ ರೂ.
  • ಮಹಿಳೆಯರಿಗೆ ಆರು ತಿಂಗಳು ಹೇರಿಗೆ ರಜೆ ಮತ್ತು ಆರು ತಿಂಗಳು ಮಕ್ಕಳ ಆರೈಕೆಯ ರಜೆ
  • ಮೈಸೂರಿನಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆಗೆ ನಿರ್ಮಾಣಕ್ಕೆ 10 ಕೋಟಿ ರೂ.
  • ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ 10ರಷ್ಟು ಮೀಸಲಾತಿ
  • ಗೊಬ್ಬರ ವಿತರಣೆಗೆ 10 ಕೋಟಿ ರೂ. ಅನುದಾನ
  • ಪ್ರತಿಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ
  • ಕಿರು ಆಹಾರ ಸಂಸ್ಕರಣೆಗೆ ಉದ್ಯಮಕ್ಕೆ 50 ಕೋಟಿ
  • 6 ಕೋಟಿ ರೂ. ವೆಚ್ಚದಲ್ಲಿ ಮೌಲ್ಯ ವರ್ಧನಾ ಕೇಂದ್ರಗಳ ಸ್ಥಾಪನೆ
  • ಪ್ರಧಾನ ಮಂತ್ರಿ ಮತ್ಸ್ಯ ಸಂಪ್ರದಾ ಯೋಜನೆಗೆ 62 ಕೋಟಿ ರೂ.

  • ಹೊಸದಾಗಿ 52 ಬಸ್ ನಿಲ್ದಾಣಗಳ ಸ್ಥಾಪನೆ
  • ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ
  • ಉತ್ತಪ ಪ್ರದೇಶದ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ
  • ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ.
  • ಬೀಚ್‌ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ
  • ಮಾಶಾಸನ ಮನೆ ಬಾಗಿಲಿಗೆ ಅಭಿಯಾನ.
  • ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂ.
  • ಭೂಕಂದಾಯ ಅಧಿನಿಯಮಕ್ಕೆ ತಿದ್ದುಪಡಿ.
  • ಉಪನಗರ ರೈಲು ಯೋಜನೆಗೆ 15,767 ಕೋಟಿ ರೂ.
  • ಸ್ಮಾರ್ಟ್ ಕ್ಲಾಸ್ ರೂಮುಗಳಿಗಾಗಿ 50 ಕೋಟಿ ರೂ
  • ರಾಜ್ಯದಾದ್ಯಂತ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರದ ಸ್ಥಾಪನೆ
  • 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ
  • ಕೃಷಿ ಸಂಚಯ್ ಯೋಜನೆಗೆ 835 ಕೋಟಿ.
  • ಸಾವಯವ ಕೃಷಿಗೆ ಉತ್ತೇಜನಕ್ಕೆ 300 ಕೋಟಿ.
  • ಕಾಲುದಾರಿ ನಿರ್ಮಾಣಕ್ಕೆ 100 ಕೋಟಿ ರೂ.
  • ಎಸ್ ಎಲ್ ಭೈರಪ್ಪನವರ ಪರ್ವ ನಾಟಕ ಪ್ರದರ್ಶನಕ್ಕೆ ಒಂದು ಕೋಟಿ ರೂ.
  • ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ.
  •  ಶಾಲಾ ಕಾಲೇಜುಗಳ ಶೌಚಾಲಯ ಅಭಿವೃದ್ಧಿಗೆ 100 ಕೋಟಿ.
  • ಅಲ್ಪಸಂಖ್ಯಾತರ ಅಭಿವೃದ್ಧಿಗೆ 1,500 ಕೋಟಿ ರೂ. ಮೀಸಲು. ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗೆ 200ಕೋಟಿ ರೂ. ಜೈನ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ 50ಕೋಟಿ ರೂ.
  • ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆಗೆ 2ಕೋಟಿ ರೂ.
  • ಪೇಜಾವರ ವಿಶ್ವೇಶ್ವರತೀರ್ಥ ಶ್ರೀಗಳ ಸ್ಮೃತಿ ವನ ಸ್ಥಾಪಿಸಲು 2 ಕೋಟಿ.
  • ಮಹದಾಯಿ ಯೋಜನೆಗೆ 1677ಕೋಟಿ ರೂ.
  • ಉಪ್ಪಿನಕಾಯಿ ಮಾರುವ ಮಹಿಳೆಯರಿಗೆ 25 ಸಾವಿರ ರೂ. ಸಹಾಯಧನ
  • ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ
  • ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ.
  • ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯವುಳ್ಳ ಮತ್ತು 10 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯವುಳ್ಳ ಐಸಿಯು ಸೌಲಭ್ಯಕ್ಕೆ 60 ಕೋಟಿ ರೂ.

ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...