Homeಕರ್ನಾಟಕKarnataka Budget | ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಇಲ್ಲಿದೆ...

Karnataka Budget | ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಇಲ್ಲಿದೆ ಮುಖ್ಯಾಂಶಗಳು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಇಂದು (ಮಾ.7) ವಿಧಾನಸಭೆಯಲ್ಲಿ ಮಂಡಿಸಿದರು.

ಈ ಬಾರಿ ರೂ. 4 ಲಕ್ಷ  ಕೋಟಿ (409549) ಗಾತ್ರದ ಆಯವ್ಯಯ ಮಂಡನೆಯಾಗಿದ್ದು, ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ.

ಬಜೆಟ್ ಮುಖ್ಯಾಂಶಗಳು ಇಲ್ಲಿವೆ : 

  • ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂಪಾಯಿ ಮೀಸಲು
  • ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ‘ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ’ ಎಂಬ ಹೊಸ ಯೋಜನೆ
  • ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂಪಾಯಿ ಅನುದಾನ
  • ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ‘ಬ್ರ್ಯಾಂಡ್‌ ಬೆಂಗಳೂರು’ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ
  • ಪ್ರಾದೇಶಿಕ ಅಸಮಾನತೆಯ ನಿವಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸುಗಮ ಸಾರಿಗೆ  ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾಯಿಸಲು ಹೊಸ ಕಾರ್ಯತಂತ್ರಗಳಿಗೆ ಹೆಚ್ಚು ಆದ್ಯತೆ
  • ರೈತ ಕಲ್ಯಾಣದ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಒಟ್ಟು 51,339 ಕೋಟಿ ರೂಪಾಯಿ ಅನುದಾನ
  • 2030ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ
  • ಅತಿಹೆಚ್ಚು ಉದ್ಯೋಗ ಸೃಷ್ಟಿಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ
  • ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು 13,692 ಕೋಟಿ ಆರ್ಥಿಕ ನೆರವು ಮತ್ತು ಸಹಾಯಧನ
  • ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ‘ಬಿ’ ಮತ್ತು ‘ಸಿ’ ವೃಂದಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ
  • ಎಸ್‌, ಎಸ್‌ಟಿ ವಸತಿ ನಿಲಯದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವೆಚ್ಚವಾಗಿ ಪ್ರತಿ ತಿಂಗಳು 3,500 ರೂ.
  • ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂಪಾಯಿ ಅನುದಾನ.
  • ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ.
  • ಕೈಗಾರಿಕಾ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1, 2ಎ ಮತ್ತು 2ಬಿ (ಮುಸ್ಲಿಂ) ಗೆ ಶೇಕಡಾ 20 ಮೀಸಲಾತಿ
  • ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್​​​ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ.
  • ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
  • ಅತ್ಯಂತ ಹಿಂದುಳಿದ 46 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
  •  ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.
  •  IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.
  • 2024-25ನೇ ಸಾಲಿಗೆ ರಾಜಸ್ವ ಸ್ವೀಕೃತಿಗಳು ವಾರ್ಷಿಕ ಶೇ 10.3 ರಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆ.
  • 2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ 14,500 ಕೋಟಿ ಗಳು ಸಂಗ್ರಹವಾಗುವ ನಿರೀಕ್ಷೆ

ಬೆಂಗಳೂರು ಅರಮನೆ ಮೈದಾನ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...