Homeಕರ್ನಾಟಕKarnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

'ಎಸ್‌ಸಿಎಸ್‌ಪಿ-ಟಿಎಸ್‌ಪಿ'ಗೆ 44,632ಕೋಟಿ ರೂ. ನಿಗದಿ

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು.

“ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಲ್ಲಿ ನಾಲ್ಕು ಪ್ರಮುಖ ದಿಕ್ಕುಗಳಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕೈಗೊಂಡಿದೆ” ಎಂದು ಹೇಳಿದ್ದಾರೆ.

ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ:

“75 ಲಕ್ಷ ವಿದ್ಯಾರ್ಥಿಗಳಿಗೆ 2,676 ಕೋಟಿ ರೂ.ಗಳ ವಿದ್ಯಾರ್ಥಿವೇತನ, 2,231 ವಿದ್ಯಾರ್ಥಿಗಳಿಗೆ 389 ಕೋಟಿ ರೂ.ಗಳ ಶೈಕ್ಷಣಿಕ ಸಾಲ ಮತ್ತು 18 ಲಕ್ಷ ವಿದ್ಯಾರ್ಥಿಗಳಿಗೆ 1,273 ಕೋಟಿ ರೂ.ಗಳಷ್ಟು ಶುಲ್ಕ ಮರುಪಾವತಿ ಮಾಡಲಾಗಿದೆ. ರಾಜ್ಯದಲ್ಲಿ 5,306 ವಿದ್ಯಾರ್ಥಿನಿಲಯ ಮತ್ತು 1,258 ವಸತಿ ಶಾಲೆಗಳನ್ನು ಹಾಗೂ 300 ಮೌಲಾನಾ ಆಜಾದ್ ಶಾಲೆಗಳಲ್ಲಿ 13.30 ಲಕ್ಷ ಮಕ್ಕಳ ಶಿಕ್ಷಣಕ್ಕಾಗಿ 15,081 ಕೋಟಿ ರೂ. ಒದಗಿಸಲಾಗಿದೆ” ಎಂದು ಹೇಳಿದರು.

ಕೌಶಲ್ಯ ಮತ್ತು ಜೀವನೋಪಾಯಕ್ಕೆ ನೆರವು:

“ಸಬ್ಸಿಡಿ ಆಧಾರಿತ ಸಣ್ಣ ಉದ್ಯಮಗಳಿಂದ ಸುಸ್ಥಿರ ಆದಾಯ ಮೂಲಗಳನ್ನು ಸೃಜಿಸುವ ಉದ್ಯಮಶೀಲತೆಗೆ ಉತ್ತೇಜನೆ ಮತ್ತು ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡುವುದು. ಸ್ವಾವಲಂಬಿ ಸಾರಥಿ ಯೋಜನೆಯಡಿ 8,195 ಫಲಾನುಭವಿಗಳಿಗೆ 249 ಕೋಟಿ ರೂ.ಗಳ ಸಾಲ, ಗಂಗಾಕಲ್ಯಾಣ ಯೋಜನೆಯಡಿ 21,556 ಫಲಾನುಭವಿಗಳಿಗೆ 637 ಕೋಟಿ ರೂ.ಗಳು ಮತ್ತು 2,928 ಫಲಾನುಭವಿಗಳಿಗೆ ಭೂಮಿ ಒದಗಿಸಲು 421 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡುವುದರ ಮೂಲಕ ಬಡಜನರ ಜೀವನ ಮಟ್ಟವನ್ನು ಸುಧಾರಿಸುವ ಕಾರ್ಯಕ್ರಮಗಳು:

  1. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 1,332 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
  2. ಅರಣ್ಯಹಾಗೂಅರಣ್ಯದಂಚಿನಲ್ಲಿವಾಸಿಸುತ್ತಿರುವ 11 ಸಮುದಾಯಗಳವಸತಿರಹಿತ 6,257 ಕುಟುಂಬಗಳಿಗೆ
    4.50 ಲಕ್ಷರೂ.ಗಳಘಟಕವೆಚ್ಚದಲ್ಲಿಒಟ್ಟು 282 ಕೋಟಿರೂ.ಗಳಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು 1,635 ಕೋಟಿ ರೂ.ಗಳ ವೆಚ್ಚದಲ್ಲಿ 3,662 ಕಾಮಗಾರಿಗಳನ್ನು ಅನುಮೋದಿಸಲಾಗಿದೆ.
  3. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಗಳಲ್ಲಿ 1,650 ಸಮುದಾಯ ಭವನ/ವಾಲ್ಮೀಕಿ ಭವನ/ಶಾದಿ ಮಹಲ್ ಗಳ ನಿರ್ಮಾಣಕ್ಕಾಗಿ 822 ಕೋಟಿ ರೂ.ಗಳನ್ನು ಮಂಜೂರು ಮಾಡಿ 732 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
  4. ನಾಯಕತ್ವ ಮತ್ತು ಪ್ರಾತಿನಿಧ್ಯ: ಸರ್ಕಾರದ ನೀತಿ ನಿರೂಪಣೆ ಹಾಗೂ ಅನುಷ್ಠಾನದಲ್ಲಿ ಹಿಂದುಳಿದವರಿಗೆ ಸೂಕ್ತ ಪ್ರಾತಿನಿಧ್ಯತೆಯನ್ನು ಕಲ್ಪಿಸುವುದು.
  5. ಒಟ್ಟು 26,821 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ/ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕೌಶಲ್ಯಾಭಿವೃದ್ಧಿಗೆ ತರಬೇತಿಯನ್ನು ನೀಡಲು 841 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.

    ‘ಎಸ್‌ಇಎಸ್‌ಪಿ-ಟಿಎಸ್‌ಪಿ’ಗೆ 44,632ಕೋಟಿ ರೂ. ನಿಗದಿ

“ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2026-27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ 31,804ಕೋಟಿ ರೂ. ಹಾಗೂ ಬುಡಕಟ್ಟು ಉಪಯೋಜನೆಗೆ 12,828ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 44,632ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ಇತರೆ ನಿರ್ವಹಣಾ ವೆಚ್ಚದ ದರಗಳನ್ನು ಪರಿಷ್ಕರಿಸಲು 56 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು. ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳಾದ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್, ಸೋಲಾರ್ ವಾಟರ್ ಹೀಟರ್ ಮತ್ತು ಡೈನಿಂಗ್ ಟೇಬಲ್‌ಗಳನ್ನು ಒದಗಿಸಲು 25 ಕೋಟಿ ರೂ.ಗಳನ್ನು ಮೀಸಲಿರಿಸಿದೆ.

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪ್ರತಿ ಜಿಲ್ಲೆಗೆ 150 ಸಂಖ್ಯಾಬಲದ ಒಂದು ಬಾಲಕಿಯರ ಮತ್ತು ಒಂದು ಬಾಲಕರ ಒಟ್ಟು 62 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.

ಶಿಕ್ಷಣ ಹಕ್ಕು ಕಾಯ್ದೆ (Right To Education Act) ರಡಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶ ಪಡೆದ ಶಾಲೆಗಳಲ್ಲಿಯೇ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಲು 19 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣಕ್ಕೆ ಅನುವು ಮಾಡಿಕೊಡಲು ಒಟ್ಟು 31 ವಸತಿ ಶಾಲೆಗಳನ್ನು ಉನ್ನತೀಕರಿಸಲಾಗುವುದು. ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಒಟ್ಟು 40 ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ಕ್ರೈಸ್‌ ವಸತಿ ಶಾಲೆಗಳಿಗೆ ಅಗತ್ಯವಿರುವ ಡೆಸ್ಕ್, ಬೆಂಚ್‌, ಪೀಠೋಪಕರಣಗಳು, ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌ ಮತ್ತು ವಿಜ್ಞಾನ ಪ್ರಯೋಗಾಲಯ, ಹಾಸಿಗೆ-ಹೊದಿಕೆ, ಟೂ ಟಯರ್‌ ಕಾಟ್, ಸೋಲಾರ್‌ ವಾಟರ್‌ ಹೀಟರ್, ಡೈನಿಂಗ್ ಟೇಬಲ್, ಸಿಸಿಟಿವಿ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ನೀಡಲು‌ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಪರಿಶಿಷ್ಟ ಜಾತಿಯ 20, ಪರಿಶಿಷ್ಟ ಪಂಗಡದ 5 ಮತ್ತು ಹಿಂದುಳಿದ ವರ್ಗಗಳ 5 ವಸತಿ ಶಾಲೆಗಳು ಸೇರಿದಂತೆ ನಿವೇಶನ ಲಭ್ಯವಿರುವ ಒಟ್ಟು 30 ಕ್ರೈಸ್‌ ವಸತಿ ಶಾಲೆಗಳಿಗೆ 22 ಕೋಟಿ ರೂ. ಘಟಕ ವೆಚ್ಚದಲ್ಲಿ ಒಟ್ಟಾರೆ 660 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಎರಡು, ಪರಿಶಿಷ್ಟ ಪಂಗಡದ ಒಂದು ಮತ್ತು ಹಿಂದುಳಿದ ವರ್ಗಗಳ ಒಂದು ಸೇರಿದಂತೆ ಒಟ್ಟು ನಾಲ್ಕು ಕೈಸ್ ವಸತಿ ಶಾಲೆಗಳನ್ನು
ಕೆ-ಸೆಟ್/ಜೆಇಇ/ಎನ್‌ಇಇಟಿ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ‘Centre of Excellence’ಗಳನ್ನಾಗಿ ಉನ್ನತೀಕರಿಸಲಾಗುವುದು. ಈ ಶಾಲೆಗಳಿಗೆ ಪ್ರತ್ಯೇಕವಾದಪ್ರವೇಶ ಪರೀಕ್ಷೆಯ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕಾಗಿ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.

ನಮ್ಮ ಸರ್ಕಾರವು ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಸಲು ಪ್ರಾಯೋಗಿಕವಾಗಿ 50 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ, ಅಲ್ಲಿನ ವಿದ್ಯಾರ್ಥಿಗಳ ಮುಂದಾಳತ್ವದಲ್ಲಿ ಮೆಸ್ ಸಮಿತಿಯೊಂದನ್ನು ರಚಿಸಿ ಕಾಲಕಾಲಕ್ಕೆ ಅಗತ್ಯ ಅನುದಾನವನ್ನು ಮುಂಗಡವಾಗಿ ನೀಡಿ, ಪಾರದರ್ಶಕತೆ ಹಾಗೂ ಜವಾಬ್ದಾರಿಯುತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಮುಂದುವರೆದು, ಈ ಪ್ರಯೋಗದ ಕಲಿಕೆಗಳನ್ನು ಅಳವಡಿಸಿಕೊಂಡು ಹಂತ ಹಂತವಾಗಿ ವಿಸ್ತರಿಸಲಾಗುವುದು.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಿಂದ 6,562 ವಸತಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪ್ರಸ್ತುತ 8.50 ಲಕ್ಷ ನಿಲಯಾರ್ಥಿಗಳಿದ್ದು, ಇವುಗಳ ನಿರ್ವಹಣೆಯಲ್ಲಿ ಸುಧಾರಣೆ ತರಲು ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾಬಲದ 10 ವಸತಿ ನಿಲಯಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪ್ರಾರಂಭಿಸಲಾಗುವುದು.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಡಿ ಬರುವ ನಿಗಮಗಳಲ್ಲಿ ಮೈಕ್ರೊ ಕ್ರೆಡಿಟ್‌ ಪ್ರೇರಣಾ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆದ ಮಹಿಳಾ ಸ್ವ-ಸಹಾಯ ಸಂಘಗಳು ಸಾಲವನ್ನು ಸಕಾಲದಲ್ಲಿ ಪೂರ್ಣವಾಗಿ ಮರುಪಾವತಿಸಿದ ಸಂಘಗಳಿಗೆ ಎರಡನೇ ಬಾರಿಗೆ ಸಾಲ ಮತ್ತು ಸಹಾಯಧನ ಮಂಜೂರು ಮಾಡಲಾಗುವುದು.

ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿ ಕಂದಾಯ ವಿಭಾಗಕ್ಕೆ ಒಂದರಂತೆ ನಾಲ್ಕು ವಿಶೇಷ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಡಾ||ಬಿ.ಆರ್.ಅಂಬೇಡ್ಕರ್‌ ರವರು ಭೇಟಿ ನೀಡಿದ ಸ್ಥಳಗಳಾದ ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅವರಹೆಸರಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದನಾಲ್ಕು ಕ್ರೈಸ್ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ಸಮಾಜ ಕಲ್ಯಾಣ ಇಲಾಖೆಯಡಿ ಬೌದ್ಧ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಗಳ ಅಡಿಯಲ್ಲಿ ಬರುವ ನಿಗಮಗಳು ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಕೊಳವೆ ಬಾವಿಗಳ ವಿದ್ಯುದೀಕರಣಕ್ಕಾಗಿ ಪಾವತಿಸುವ ಮೊತ್ತವನ್ನು 75,000 ರೂ.ಗಳಿಂದ 1,50,000 ರೂ.ಗಳಿಗೆ ಹೆಚ್ಚಿಸಲಾಗುವುದು.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 2026-27ನೇ ಸಾಲಿನಲ್ಲಿ 1,500 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

    ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

    ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

    ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

    ‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

    ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

    ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

    “ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

    Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

    2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

    ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

    ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

    Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

    Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

    "ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

    ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

    ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...

    ಮತಾಂತರ ವಿರೋಧಿ ಮಸೂದೆಗೆ ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ

    ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರಗಳನ್ನು ಗುರಿಯಾಗಿಸಿಕೊಂಡು ರಚಿಸಲಾದ 'ಧರ್ಮ ಸ್ವಾತಂತ್ರ್ಯ ಆಡಳಿತ, 2026' ಕರಡನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ. ಇದು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5...