Homeಕರ್ನಾಟಕಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

'ಸಾರ್ವಜನಿಕ ಹೂಡಿಕೆಯಿಂದ ಸರ್ಕಾರ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ'

- Advertisement -
- Advertisement -

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು ಪರಿಗಣಿಸಿರುವ ಸರ್ಕಾರ ಸಾರ್ವಜನಿಕ ಹೂಡಿಕೆಯಿಂದ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ.

ಉನ್ನತ ಶಿಕ್ಷಣದ ಕುರಿತು ಹೇಳುವುದಾದರೆ ಬಜೆಟ್ ಹಂಚಿಕೆ ನಿರಾಶದಾಯಕವಾಗಿದೆ. ಉನ್ನತ ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.2.1ರಷ್ಟು ಮಾತ್ರ ಹಂಚಿಕೆ ಮಾಡಿದ್ದಾರೆ. ಇದು ಈಗಿನ ಹಣಕಾಸಿನ ಕೊರತೆಗೆ ಯಾವುದೇ ರೀತಿಯಲ್ಲೂ ಪರಿಹಾರವಲ್ಲ. ಸಾರ್ವಜನಿಕ ಹೂಡಿಕೆ ಇಲ್ಲದೆ ಉನ್ನತ ಶಿಕ್ಷಣ ಉಳಿಸಲು ಸಾಧ್ಯವಿಲ್ಲ.. ತಮಾಶೆಯೆಂದರೆ ಕಳೆದ ಮೂರು ವರ್ಷಗಳಿಂದ ಪ್ರತಿ ಬಜೆಟ್‌ನಲ್ಲಿಯೂ 2000 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಾ ಬಂದಿದ್ದಾರೆ. ಇದುವರೆಗೂ ಅದರ ಆರಂಭಿಕ ಚಟುವಟಿಕೆಗಳು ಪ್ರಾರಂಭವಾಗಿಲ್ಲ… ಇದೊಂದು ಮರೆಮೋಸವಷ್ಟೆ.

ಇಂದು 430 ಪದವಿ ಕಾಲೇಜುಗಳಲ್ಲಿ ಮಾನವಿಕ ವಿಭಾಗಗಳು ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿವೆ. ಖಾಸಗಿ ವಿವಿಗಳ ಲಿಬರಲ್ ಆರ್ಟ್ಸ್, ಬಹುಶಿಸ್ತೀಯ ವ್ಯಾಸಂಗ ಕ್ರಮದ ಎದುರು ತುಂಬಾ ಪೇಲವವಾಗಿ ಕಾಣುತ್ತಿದೆ. ಈ ಬಿಕ್ಕಟ್ಟನ್ನು ಸಮಗ್ರವಾಗಿ ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳುವ ಯಾವುದೇ ಕಾರ್ಯಯೋಜನೆ ಇಲ್ಲ..

1000 ವಿದ್ಯಾರ್ಥಿಗಳಿಗಿಂತ ಹೆಚ್ಚಿರುವ 50 ಪದವಿ ಕಾಲೇಜುಗಳ ಉನ್ನತೀಕರಣ. ಇದು ಬಾಯಿ ಮಾತಿನ ಹೇಳಿಕೆಯಷ್ಟೆ. ಇದಕ್ಕೆ ಯಾವುದೇ ನೀಲನಕ್ಷೆ ಇಲ್ಲ. ಇಂದು ಮಾರ್ಚ್ 7, ಆರು ತಿಂಗಳ ನಂತರ ಇದೇ ಉನ್ನತೀಕರಣದ ವಿಚಾರ ಎಲ್ಲಿಗೆ ಬಂದು ನಿಂತಿದೆ ಎಂದು ಕಾದು ನೋಡಿ ಪರಿಶೀಲಿಸಬಹುದು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಕಲ್ಬುರ್ಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕರ್ಕೇರಾ, ರಾಯಚೂರು ಜಿಲ್ಲೆಯ ಅಂಬಾಪುರ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಇದು ಸ್ವಾಗತಾರ್ಹ. ಆದರೆ ಕೆಕೆಆರ್‌ಡಿಬಿ ಕಾರ್ಯಕ್ಷಮತೆ ತುಂಬಾ ನಿರಾಶದಾಯಕವಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ಯಾವುದೇ ಬಗೆಯ ರಚನಾತ್ಮಕ ಕೆಲಸ ಮಾಡಿದ ಉದಾಹರಣೆಗಳಿಲ್ಲ. ಇದರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಇಂತಹ ಮಂಡಳಿಯಿಂದ ಹೊಸ ಪದವಿ ಕಾಲೇಜುಗಳ ಸ್ಥಾಪನೆ ಮತ್ತು ನಿರ್ವಹಣೆ ಕುರಿತು ಭರವಸೆ ಇಲ್ಲ; ಆದರೆ ಕಾದು ನೋಡಬೇಕಿದೆ.

ಸರ್ಕಾರಿ ಪದವಿ ಕಾಲೇಜು ಹಾಗೂ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ಸೌಲಭ್ಯ ನೀಡಿರುವುದು ಸ್ವಾಗತಾರ್ಹವಾಗಿದೆ.

ಆದರೆ, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಪ್ರಾರಂಭಿಸಲು 25 ಎಕರೆ ಭೂಮಿ ಕೊಡುವ ಪ್ರಸ್ತಾಪವು ಒಂದು ಹಗರಣ ಎಂದೇ ಕರೆಯಬೇಕಾಗುತ್ತದೆ. ಏಕೆಂದರೆ, ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಜಮೀನು ಕೊಡುವುದು ಭ್ರಷ್ಟಾಚಾರ ಎನಿಸಿಕೊಳ್ಳುತ್ತದೆ. ಮತ್ತು ಈ ರೀತಿ ಖಾಸಗಿಯವರಿಗೆ ಪ್ರೋತ್ಸಾಹಿಸುವುದು ಸಾಧಕವಲ್ಲ, ಬಾಧಕ ಎಂದು ವಿಷಾದದಿಂದ ಹೇಳಬೇಕಿದೆ.

ಇನ್ನು ಹಾಸ್ಟೆಲ್‌ಗಳಿಗೆ ಅನುದಾನ ಮುಂತಾದವುಗಳು ಸಹಜವಾದ ಆಡಳಿತಾತ್ಮಕ ಕರ್ತವ್ಯಗಳು. ಇದರಲ್ಲಿ ಹೆಚ್ಚುಗಾರಿಕೆ ಏನಿಲ್ಲ.

ಆದರೆ, ರಾಜ್ಯ ಶಿಕ್ಷಣ ನೀತಿ ಕುರಿತು ಯಾವುದೇ ಪ್ರಸ್ತಾಪವಿಲ್ಲ.. ಸಂಶೋಧನೆ ಕುರಿತು ಸಮಗ್ರ ನೀತಿಯಿಲ್ಲ. ಇಲ್ಲಿ ರಾಜ್ಯ ಶಿಕ್ಷಣ ನೀತಿಯೂ ಇಲ್ಲ, ರಾಷ್ಟ್ರೀಯ ಶಿಕ್ಷಣ ನೀತಿಯೂ ಇಲ್ಲ.. ಈ ಸರ್ಕಾರದ ಅವಧಿ ಇನ್ನು ಎರಡು ವರ್ಷ ಮಾತ್ರ. ಥೋರಟ್ ಆಯೋಗ ಸಲ್ಲಿಸಿದ ಶಿಫಾರಸ್ಸುಗಳ ವರದಿ ಮುಂಬರುವ ಆಗಸ್ಟ್ ತಿಂಗಳಿಗೆ ಒಂದು ವರ್ಷವಾಗುತ್ತದೆ. ಇದುವರೆಗೂ ಅದನ್ನು ಸಾರ್ವಜನಿಕವಾಗಿ ಪ್ರಕಟಿಸಲಿಲ್ಲ.. ವಿಧಾನಮಂಡಲದ ಎರಡೂ ಸದನಗಳಲ್ಲಿಯೂ ಮಂಡಿಸಲಿಲ್ಲ. ಇದು ಬಿಡಿ ಕ್ಯಾಬಿನೆಟ್ ಸಭೆಯಲ್ಲೂ ಚರ್ಚೆ ಮಾಡಲಿಲ್ಲ… ಈ ಬಾರಿ ಬಜೆಟ್‌ನಲ್ಲಿಯೂ ಪ್ರಸ್ತಾಪವಿಲ್ಲ. ಇದು ಬೇಜವಾಬ್ದಾರಿಯಲ್ಲವೇ? ಇನ್ನುಳಿದ ಎರಡು ವರ್ಷಗಳಲ್ಲಿ ಈ ಎಸ್‌ಇಪಿ ಪರಾಮರ್ಶೆಯಾಗಿ, ಅಗತ್ಯವಿದ್ದರೆ ಸೂಕ್ತ ತಿದ್ದುಪಡಿಯಾಗಿ ಹಂತ ಹಂತವಾಗಿ ಅನುಷ್ಠಾನಗೊಳಿಸಲು ಸಾಧ್ಯವೇ? ಇದ್ಯಾವುದೂ ಆಗದೆ 2028ರ ಚುನಾವಣೆಯಲ್ಲಿ ಬೇರೊಂದು ಪಕ್ಷ ಅಧಿಕಾರಕ್ಕೆ ಬಂದರೆ, ಅದು ಎಸ್‌ಇಪಿಯನ್ನು ಖಂಡಿತಾ ತಿರಸ್ಕರಿಸುತ್ತದೆ. ಆಗ ಇಲ್ಲಿನ ವಿದ್ಯಾರ್ಥಿಗಳ ಭವಿಷ್ಯವೇನು?

ರೋಹಿತ್ ವೇಮುಲ ಕಾಯ್ದೆ ಜಾರಿ ಕುರಿತು ಪ್ರಸ್ತಾಪ ಸ್ವಾಗತಾರ್ಹ. ಆದರೆ ಇದನ್ನು ಅನುಷ್ಠಾನಗೊಳಿಸುವ ರಾಜಕೀಯ ಇಚ್ಛಾಶಕ್ತಿ ಬೇಕು. ಏಕೆಂದರೆ ಕಳೆದ ಒಂದು ವರ್ಷದಿಂದ ಇದರ ಕುರಿತು ಸಾಕಷ್ಟು ಚರ್ಚೆ, ಸಂವಾದ ಮಾಡಿದ್ದೇವೆ. ಇಲ್ಲಿನ ಪ್ರಗತಿಪರ ಲೇಖಕರು, ನ್ಯಾಯವಾದಿಗಳು, ಪ್ರಾಧ್ಯಾಪಕರ ತಂಡವು ಸತತವಾಗಿ ಅಧ್ಯಯನ ಮಾಡಿ ಇದರ ಕರಡು ಪ್ರತಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಕ್ಯಾಬಿನೆಟ್ ಸಭೆಯಲ್ಲೂ ಇದರ ಕುರಿತು ಚರ್ಚೆ ನಡೆಸಲಿಲ್ಲ. ಕೇವಲ ಪ್ರಿಯಾಂಕ್ ಖರ್ಗೆಯವರು ಮಾತ್ರ ಇದರ ಕುರಿತು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ಉನ್ನತ ಶಿಕ್ಷಣ ಸಚಿವರು ಮತ್ತು ಕಾನೂನು ಸಚಿವರು ಆಸಕ್ತಿ ತೋರಿಸುತ್ತಿಲ್ಲ. ಇದು ಕಳೆದ ಒಂದು ವರ್ಷದ ಬೆಳವಣಿಗೆ.. ಈ ಬಾರಿಯಾದರೂ ಅನುಮೋದನೆ ದೊರಕಬಹುದು, ನೋಡೋಣ.

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಿರ್ಧಾರ ಮೇಲ್ನೋಟಕ್ಕೆ ಸ್ವಾಗತಾರ್ಹವಾದರೂ ನಿರ್ದಿಷ್ಟ ಮಾರ್ಗಸೂಚಿಗಳಿಲ್ಲದೇ ಹೋದರೆ, ಸೈದ್ಧಾಂತಿಕ ಸ್ಪಷ್ಟತೆಯಿಲ್ಲದೇ ಹೋದರೆ ಕ್ಯಾಂಪಸ್‌ಗಳು ಎಬಿವಿಪಿಯ ಆಡೊಂಬಲವಾಗುವುದರಲ್ಲಿ ಅನುಮಾನವಿಲ್ಲ..

ಒಟ್ಟಾರೆ ಉನ್ನತ ಶಿಕ್ಷಣದ ಕುರಿತು ಯಾವುದೇ ದೂರದರ್ಶಿತ್ವ ಮತ್ತು ಧ್ಯೇಯ (ವಿಷನ್ & ಪ್ಯಾಶನ್) ಇಲ್ಲದ ಈ ಬಜೆಟ್ ಕೇವಲ ಕಾಮಗಾರಿಗಳ ಘೋಷಣೆಯಷ್ಟೆ. ವಾಸ್ತವದಲ್ಲಿ ಸರ್ಕಾರವು ಉನ್ನತ ಶಿಕ್ಷಣದ ಜೊತೆಗೆ ಎಂಗೇಜ್ ಆಗಬೇಕು. ಆದರೆ ಈಗ ಕೇವಲ ಮಧ್ಯಸ್ಥಿಕೆ ವಹಿಸುತ್ತಿದೆ. ಇದು ಕೇವಲ ಫೈರ್ ಫೈಟಿಂಗ್ ಅಷ್ಟೇ.. ಅಥವಾ ಅದೂ ಅಲ್ಲ. ಜಾಗತಿಕವಾಗಿ ಉನ್ನತ ಶಿಕ್ಷಣ ಯಾವ ಹಂತದಲ್ಲಿದೆ? ನಾವೆಲ್ಲಿದ್ದೇವೆ ಎನ್ನುವ ಕನಿಷ್ಠ ಕಾಳಜಿಯೂ ಇಲ್ಲದೇ ಹೋದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...