Homeಕರ್ನಾಟಕಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

'ಸಾರ್ವಜನಿಕ ಹೂಡಿಕೆಯಿಂದ ಸರ್ಕಾರ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ'

- Advertisement -
- Advertisement -

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು ಪರಿಗಣಿಸಿರುವ ಸರ್ಕಾರ ಸಾರ್ವಜನಿಕ ಹೂಡಿಕೆಯಿಂದ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ.

ಉನ್ನತ ಶಿಕ್ಷಣದ ಕುರಿತು ಹೇಳುವುದಾದರೆ ಬಜೆಟ್ ಹಂಚಿಕೆ ನಿರಾಶದಾಯಕವಾಗಿದೆ. ಉನ್ನತ ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.2.1ರಷ್ಟು ಮಾತ್ರ ಹಂಚಿಕೆ ಮಾಡಿದ್ದಾರೆ. ಇದು ಈಗಿನ ಹಣಕಾಸಿನ ಕೊರತೆಗೆ ಯಾವುದೇ ರೀತಿಯಲ್ಲೂ ಪರಿಹಾರವಲ್ಲ. ಸಾರ್ವಜನಿಕ ಹೂಡಿಕೆ ಇಲ್ಲದೆ ಉನ್ನತ ಶಿಕ್ಷಣ ಉಳಿಸಲು ಸಾಧ್ಯವಿಲ್ಲ.. ತಮಾಶೆಯೆಂದರೆ ಕಳೆದ ಮೂರು ವರ್ಷಗಳಿಂದ ಪ್ರತಿ ಬಜೆಟ್‌ನಲ್ಲಿಯೂ 2000 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಾ ಬಂದಿದ್ದಾರೆ. ಇದುವರೆಗೂ ಅದರ ಆರಂಭಿಕ ಚಟುವಟಿಕೆಗಳು ಪ್ರಾರಂಭವಾಗಿಲ್ಲ… ಇದೊಂದು ಮರೆಮೋಸವಷ್ಟೆ.

ಇಂದು 430 ಪದವಿ ಕಾಲೇಜುಗಳಲ್ಲಿ ಮಾನವಿಕ ವಿಭಾಗಗಳು ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿವೆ. ಖಾಸಗಿ ವಿವಿಗಳ ಲಿಬರಲ್ ಆರ್ಟ್ಸ್, ಬಹುಶಿಸ್ತೀಯ ವ್ಯಾಸಂಗ ಕ್ರಮದ ಎದುರು ತುಂಬಾ ಪೇಲವವಾಗಿ ಕಾಣುತ್ತಿದೆ. ಈ ಬಿಕ್ಕಟ್ಟನ್ನು ಸಮಗ್ರವಾಗಿ ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳುವ ಯಾವುದೇ ಕಾರ್ಯಯೋಜನೆ ಇಲ್ಲ..

1000 ವಿದ್ಯಾರ್ಥಿಗಳಿಗಿಂತ ಹೆಚ್ಚಿರುವ 50 ಪದವಿ ಕಾಲೇಜುಗಳ ಉನ್ನತೀಕರಣ. ಇದು ಬಾಯಿ ಮಾತಿನ ಹೇಳಿಕೆಯಷ್ಟೆ. ಇದಕ್ಕೆ ಯಾವುದೇ ನೀಲನಕ್ಷೆ ಇಲ್ಲ. ಇಂದು ಮಾರ್ಚ್ 7, ಆರು ತಿಂಗಳ ನಂತರ ಇದೇ ಉನ್ನತೀಕರಣದ ವಿಚಾರ ಎಲ್ಲಿಗೆ ಬಂದು ನಿಂತಿದೆ ಎಂದು ಕಾದು ನೋಡಿ ಪರಿಶೀಲಿಸಬಹುದು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಕಲ್ಬುರ್ಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕರ್ಕೇರಾ, ರಾಯಚೂರು ಜಿಲ್ಲೆಯ ಅಂಬಾಪುರ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಇದು ಸ್ವಾಗತಾರ್ಹ. ಆದರೆ ಕೆಕೆಆರ್‌ಡಿಬಿ ಕಾರ್ಯಕ್ಷಮತೆ ತುಂಬಾ ನಿರಾಶದಾಯಕವಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ಯಾವುದೇ ಬಗೆಯ ರಚನಾತ್ಮಕ ಕೆಲಸ ಮಾಡಿದ ಉದಾಹರಣೆಗಳಿಲ್ಲ. ಇದರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಇಂತಹ ಮಂಡಳಿಯಿಂದ ಹೊಸ ಪದವಿ ಕಾಲೇಜುಗಳ ಸ್ಥಾಪನೆ ಮತ್ತು ನಿರ್ವಹಣೆ ಕುರಿತು ಭರವಸೆ ಇಲ್ಲ; ಆದರೆ ಕಾದು ನೋಡಬೇಕಿದೆ.

ಸರ್ಕಾರಿ ಪದವಿ ಕಾಲೇಜು ಹಾಗೂ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ಸೌಲಭ್ಯ ನೀಡಿರುವುದು ಸ್ವಾಗತಾರ್ಹವಾಗಿದೆ.

ಆದರೆ, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಪ್ರಾರಂಭಿಸಲು 25 ಎಕರೆ ಭೂಮಿ ಕೊಡುವ ಪ್ರಸ್ತಾಪವು ಒಂದು ಹಗರಣ ಎಂದೇ ಕರೆಯಬೇಕಾಗುತ್ತದೆ. ಏಕೆಂದರೆ, ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಜಮೀನು ಕೊಡುವುದು ಭ್ರಷ್ಟಾಚಾರ ಎನಿಸಿಕೊಳ್ಳುತ್ತದೆ. ಮತ್ತು ಈ ರೀತಿ ಖಾಸಗಿಯವರಿಗೆ ಪ್ರೋತ್ಸಾಹಿಸುವುದು ಸಾಧಕವಲ್ಲ, ಬಾಧಕ ಎಂದು ವಿಷಾದದಿಂದ ಹೇಳಬೇಕಿದೆ.

ಇನ್ನು ಹಾಸ್ಟೆಲ್‌ಗಳಿಗೆ ಅನುದಾನ ಮುಂತಾದವುಗಳು ಸಹಜವಾದ ಆಡಳಿತಾತ್ಮಕ ಕರ್ತವ್ಯಗಳು. ಇದರಲ್ಲಿ ಹೆಚ್ಚುಗಾರಿಕೆ ಏನಿಲ್ಲ.

ಆದರೆ, ರಾಜ್ಯ ಶಿಕ್ಷಣ ನೀತಿ ಕುರಿತು ಯಾವುದೇ ಪ್ರಸ್ತಾಪವಿಲ್ಲ.. ಸಂಶೋಧನೆ ಕುರಿತು ಸಮಗ್ರ ನೀತಿಯಿಲ್ಲ. ಇಲ್ಲಿ ರಾಜ್ಯ ಶಿಕ್ಷಣ ನೀತಿಯೂ ಇಲ್ಲ, ರಾಷ್ಟ್ರೀಯ ಶಿಕ್ಷಣ ನೀತಿಯೂ ಇಲ್ಲ.. ಈ ಸರ್ಕಾರದ ಅವಧಿ ಇನ್ನು ಎರಡು ವರ್ಷ ಮಾತ್ರ. ಥೋರಟ್ ಆಯೋಗ ಸಲ್ಲಿಸಿದ ಶಿಫಾರಸ್ಸುಗಳ ವರದಿ ಮುಂಬರುವ ಆಗಸ್ಟ್ ತಿಂಗಳಿಗೆ ಒಂದು ವರ್ಷವಾಗುತ್ತದೆ. ಇದುವರೆಗೂ ಅದನ್ನು ಸಾರ್ವಜನಿಕವಾಗಿ ಪ್ರಕಟಿಸಲಿಲ್ಲ.. ವಿಧಾನಮಂಡಲದ ಎರಡೂ ಸದನಗಳಲ್ಲಿಯೂ ಮಂಡಿಸಲಿಲ್ಲ. ಇದು ಬಿಡಿ ಕ್ಯಾಬಿನೆಟ್ ಸಭೆಯಲ್ಲೂ ಚರ್ಚೆ ಮಾಡಲಿಲ್ಲ… ಈ ಬಾರಿ ಬಜೆಟ್‌ನಲ್ಲಿಯೂ ಪ್ರಸ್ತಾಪವಿಲ್ಲ. ಇದು ಬೇಜವಾಬ್ದಾರಿಯಲ್ಲವೇ? ಇನ್ನುಳಿದ ಎರಡು ವರ್ಷಗಳಲ್ಲಿ ಈ ಎಸ್‌ಇಪಿ ಪರಾಮರ್ಶೆಯಾಗಿ, ಅಗತ್ಯವಿದ್ದರೆ ಸೂಕ್ತ ತಿದ್ದುಪಡಿಯಾಗಿ ಹಂತ ಹಂತವಾಗಿ ಅನುಷ್ಠಾನಗೊಳಿಸಲು ಸಾಧ್ಯವೇ? ಇದ್ಯಾವುದೂ ಆಗದೆ 2028ರ ಚುನಾವಣೆಯಲ್ಲಿ ಬೇರೊಂದು ಪಕ್ಷ ಅಧಿಕಾರಕ್ಕೆ ಬಂದರೆ, ಅದು ಎಸ್‌ಇಪಿಯನ್ನು ಖಂಡಿತಾ ತಿರಸ್ಕರಿಸುತ್ತದೆ. ಆಗ ಇಲ್ಲಿನ ವಿದ್ಯಾರ್ಥಿಗಳ ಭವಿಷ್ಯವೇನು?

ರೋಹಿತ್ ವೇಮುಲ ಕಾಯ್ದೆ ಜಾರಿ ಕುರಿತು ಪ್ರಸ್ತಾಪ ಸ್ವಾಗತಾರ್ಹ. ಆದರೆ ಇದನ್ನು ಅನುಷ್ಠಾನಗೊಳಿಸುವ ರಾಜಕೀಯ ಇಚ್ಛಾಶಕ್ತಿ ಬೇಕು. ಏಕೆಂದರೆ ಕಳೆದ ಒಂದು ವರ್ಷದಿಂದ ಇದರ ಕುರಿತು ಸಾಕಷ್ಟು ಚರ್ಚೆ, ಸಂವಾದ ಮಾಡಿದ್ದೇವೆ. ಇಲ್ಲಿನ ಪ್ರಗತಿಪರ ಲೇಖಕರು, ನ್ಯಾಯವಾದಿಗಳು, ಪ್ರಾಧ್ಯಾಪಕರ ತಂಡವು ಸತತವಾಗಿ ಅಧ್ಯಯನ ಮಾಡಿ ಇದರ ಕರಡು ಪ್ರತಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಕ್ಯಾಬಿನೆಟ್ ಸಭೆಯಲ್ಲೂ ಇದರ ಕುರಿತು ಚರ್ಚೆ ನಡೆಸಲಿಲ್ಲ. ಕೇವಲ ಪ್ರಿಯಾಂಕ್ ಖರ್ಗೆಯವರು ಮಾತ್ರ ಇದರ ಕುರಿತು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ಉನ್ನತ ಶಿಕ್ಷಣ ಸಚಿವರು ಮತ್ತು ಕಾನೂನು ಸಚಿವರು ಆಸಕ್ತಿ ತೋರಿಸುತ್ತಿಲ್ಲ. ಇದು ಕಳೆದ ಒಂದು ವರ್ಷದ ಬೆಳವಣಿಗೆ.. ಈ ಬಾರಿಯಾದರೂ ಅನುಮೋದನೆ ದೊರಕಬಹುದು, ನೋಡೋಣ.

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಿರ್ಧಾರ ಮೇಲ್ನೋಟಕ್ಕೆ ಸ್ವಾಗತಾರ್ಹವಾದರೂ ನಿರ್ದಿಷ್ಟ ಮಾರ್ಗಸೂಚಿಗಳಿಲ್ಲದೇ ಹೋದರೆ, ಸೈದ್ಧಾಂತಿಕ ಸ್ಪಷ್ಟತೆಯಿಲ್ಲದೇ ಹೋದರೆ ಕ್ಯಾಂಪಸ್‌ಗಳು ಎಬಿವಿಪಿಯ ಆಡೊಂಬಲವಾಗುವುದರಲ್ಲಿ ಅನುಮಾನವಿಲ್ಲ..

ಒಟ್ಟಾರೆ ಉನ್ನತ ಶಿಕ್ಷಣದ ಕುರಿತು ಯಾವುದೇ ದೂರದರ್ಶಿತ್ವ ಮತ್ತು ಧ್ಯೇಯ (ವಿಷನ್ & ಪ್ಯಾಶನ್) ಇಲ್ಲದ ಈ ಬಜೆಟ್ ಕೇವಲ ಕಾಮಗಾರಿಗಳ ಘೋಷಣೆಯಷ್ಟೆ. ವಾಸ್ತವದಲ್ಲಿ ಸರ್ಕಾರವು ಉನ್ನತ ಶಿಕ್ಷಣದ ಜೊತೆಗೆ ಎಂಗೇಜ್ ಆಗಬೇಕು. ಆದರೆ ಈಗ ಕೇವಲ ಮಧ್ಯಸ್ಥಿಕೆ ವಹಿಸುತ್ತಿದೆ. ಇದು ಕೇವಲ ಫೈರ್ ಫೈಟಿಂಗ್ ಅಷ್ಟೇ.. ಅಥವಾ ಅದೂ ಅಲ್ಲ. ಜಾಗತಿಕವಾಗಿ ಉನ್ನತ ಶಿಕ್ಷಣ ಯಾವ ಹಂತದಲ್ಲಿದೆ? ನಾವೆಲ್ಲಿದ್ದೇವೆ ಎನ್ನುವ ಕನಿಷ್ಠ ಕಾಳಜಿಯೂ ಇಲ್ಲದೇ ಹೋದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...