Homeಕರ್ನಾಟಕಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

'ಸಾರ್ವಜನಿಕ ಹೂಡಿಕೆಯಿಂದ ಸರ್ಕಾರ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ'

- Advertisement -
- Advertisement -

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು ಪರಿಗಣಿಸಿರುವ ಸರ್ಕಾರ ಸಾರ್ವಜನಿಕ ಹೂಡಿಕೆಯಿಂದ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ.

ಉನ್ನತ ಶಿಕ್ಷಣದ ಕುರಿತು ಹೇಳುವುದಾದರೆ ಬಜೆಟ್ ಹಂಚಿಕೆ ನಿರಾಶದಾಯಕವಾಗಿದೆ. ಉನ್ನತ ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.2.1ರಷ್ಟು ಮಾತ್ರ ಹಂಚಿಕೆ ಮಾಡಿದ್ದಾರೆ. ಇದು ಈಗಿನ ಹಣಕಾಸಿನ ಕೊರತೆಗೆ ಯಾವುದೇ ರೀತಿಯಲ್ಲೂ ಪರಿಹಾರವಲ್ಲ. ಸಾರ್ವಜನಿಕ ಹೂಡಿಕೆ ಇಲ್ಲದೆ ಉನ್ನತ ಶಿಕ್ಷಣ ಉಳಿಸಲು ಸಾಧ್ಯವಿಲ್ಲ.. ತಮಾಶೆಯೆಂದರೆ ಕಳೆದ ಮೂರು ವರ್ಷಗಳಿಂದ ಪ್ರತಿ ಬಜೆಟ್‌ನಲ್ಲಿಯೂ 2000 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಾ ಬಂದಿದ್ದಾರೆ. ಇದುವರೆಗೂ ಅದರ ಆರಂಭಿಕ ಚಟುವಟಿಕೆಗಳು ಪ್ರಾರಂಭವಾಗಿಲ್ಲ… ಇದೊಂದು ಮರೆಮೋಸವಷ್ಟೆ.

ಇಂದು 430 ಪದವಿ ಕಾಲೇಜುಗಳಲ್ಲಿ ಮಾನವಿಕ ವಿಭಾಗಗಳು ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿವೆ. ಖಾಸಗಿ ವಿವಿಗಳ ಲಿಬರಲ್ ಆರ್ಟ್ಸ್, ಬಹುಶಿಸ್ತೀಯ ವ್ಯಾಸಂಗ ಕ್ರಮದ ಎದುರು ತುಂಬಾ ಪೇಲವವಾಗಿ ಕಾಣುತ್ತಿದೆ. ಈ ಬಿಕ್ಕಟ್ಟನ್ನು ಸಮಗ್ರವಾಗಿ ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳುವ ಯಾವುದೇ ಕಾರ್ಯಯೋಜನೆ ಇಲ್ಲ..

1000 ವಿದ್ಯಾರ್ಥಿಗಳಿಗಿಂತ ಹೆಚ್ಚಿರುವ 50 ಪದವಿ ಕಾಲೇಜುಗಳ ಉನ್ನತೀಕರಣ. ಇದು ಬಾಯಿ ಮಾತಿನ ಹೇಳಿಕೆಯಷ್ಟೆ. ಇದಕ್ಕೆ ಯಾವುದೇ ನೀಲನಕ್ಷೆ ಇಲ್ಲ. ಇಂದು ಮಾರ್ಚ್ 7, ಆರು ತಿಂಗಳ ನಂತರ ಇದೇ ಉನ್ನತೀಕರಣದ ವಿಚಾರ ಎಲ್ಲಿಗೆ ಬಂದು ನಿಂತಿದೆ ಎಂದು ಕಾದು ನೋಡಿ ಪರಿಶೀಲಿಸಬಹುದು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಕಲ್ಬುರ್ಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕರ್ಕೇರಾ, ರಾಯಚೂರು ಜಿಲ್ಲೆಯ ಅಂಬಾಪುರ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಇದು ಸ್ವಾಗತಾರ್ಹ. ಆದರೆ ಕೆಕೆಆರ್‌ಡಿಬಿ ಕಾರ್ಯಕ್ಷಮತೆ ತುಂಬಾ ನಿರಾಶದಾಯಕವಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ಯಾವುದೇ ಬಗೆಯ ರಚನಾತ್ಮಕ ಕೆಲಸ ಮಾಡಿದ ಉದಾಹರಣೆಗಳಿಲ್ಲ. ಇದರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಇಂತಹ ಮಂಡಳಿಯಿಂದ ಹೊಸ ಪದವಿ ಕಾಲೇಜುಗಳ ಸ್ಥಾಪನೆ ಮತ್ತು ನಿರ್ವಹಣೆ ಕುರಿತು ಭರವಸೆ ಇಲ್ಲ; ಆದರೆ ಕಾದು ನೋಡಬೇಕಿದೆ.

ಸರ್ಕಾರಿ ಪದವಿ ಕಾಲೇಜು ಹಾಗೂ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ಸೌಲಭ್ಯ ನೀಡಿರುವುದು ಸ್ವಾಗತಾರ್ಹವಾಗಿದೆ.

ಆದರೆ, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಪ್ರಾರಂಭಿಸಲು 25 ಎಕರೆ ಭೂಮಿ ಕೊಡುವ ಪ್ರಸ್ತಾಪವು ಒಂದು ಹಗರಣ ಎಂದೇ ಕರೆಯಬೇಕಾಗುತ್ತದೆ. ಏಕೆಂದರೆ, ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಜಮೀನು ಕೊಡುವುದು ಭ್ರಷ್ಟಾಚಾರ ಎನಿಸಿಕೊಳ್ಳುತ್ತದೆ. ಮತ್ತು ಈ ರೀತಿ ಖಾಸಗಿಯವರಿಗೆ ಪ್ರೋತ್ಸಾಹಿಸುವುದು ಸಾಧಕವಲ್ಲ, ಬಾಧಕ ಎಂದು ವಿಷಾದದಿಂದ ಹೇಳಬೇಕಿದೆ.

ಇನ್ನು ಹಾಸ್ಟೆಲ್‌ಗಳಿಗೆ ಅನುದಾನ ಮುಂತಾದವುಗಳು ಸಹಜವಾದ ಆಡಳಿತಾತ್ಮಕ ಕರ್ತವ್ಯಗಳು. ಇದರಲ್ಲಿ ಹೆಚ್ಚುಗಾರಿಕೆ ಏನಿಲ್ಲ.

ಆದರೆ, ರಾಜ್ಯ ಶಿಕ್ಷಣ ನೀತಿ ಕುರಿತು ಯಾವುದೇ ಪ್ರಸ್ತಾಪವಿಲ್ಲ.. ಸಂಶೋಧನೆ ಕುರಿತು ಸಮಗ್ರ ನೀತಿಯಿಲ್ಲ. ಇಲ್ಲಿ ರಾಜ್ಯ ಶಿಕ್ಷಣ ನೀತಿಯೂ ಇಲ್ಲ, ರಾಷ್ಟ್ರೀಯ ಶಿಕ್ಷಣ ನೀತಿಯೂ ಇಲ್ಲ.. ಈ ಸರ್ಕಾರದ ಅವಧಿ ಇನ್ನು ಎರಡು ವರ್ಷ ಮಾತ್ರ. ಥೋರಟ್ ಆಯೋಗ ಸಲ್ಲಿಸಿದ ಶಿಫಾರಸ್ಸುಗಳ ವರದಿ ಮುಂಬರುವ ಆಗಸ್ಟ್ ತಿಂಗಳಿಗೆ ಒಂದು ವರ್ಷವಾಗುತ್ತದೆ. ಇದುವರೆಗೂ ಅದನ್ನು ಸಾರ್ವಜನಿಕವಾಗಿ ಪ್ರಕಟಿಸಲಿಲ್ಲ.. ವಿಧಾನಮಂಡಲದ ಎರಡೂ ಸದನಗಳಲ್ಲಿಯೂ ಮಂಡಿಸಲಿಲ್ಲ. ಇದು ಬಿಡಿ ಕ್ಯಾಬಿನೆಟ್ ಸಭೆಯಲ್ಲೂ ಚರ್ಚೆ ಮಾಡಲಿಲ್ಲ… ಈ ಬಾರಿ ಬಜೆಟ್‌ನಲ್ಲಿಯೂ ಪ್ರಸ್ತಾಪವಿಲ್ಲ. ಇದು ಬೇಜವಾಬ್ದಾರಿಯಲ್ಲವೇ? ಇನ್ನುಳಿದ ಎರಡು ವರ್ಷಗಳಲ್ಲಿ ಈ ಎಸ್‌ಇಪಿ ಪರಾಮರ್ಶೆಯಾಗಿ, ಅಗತ್ಯವಿದ್ದರೆ ಸೂಕ್ತ ತಿದ್ದುಪಡಿಯಾಗಿ ಹಂತ ಹಂತವಾಗಿ ಅನುಷ್ಠಾನಗೊಳಿಸಲು ಸಾಧ್ಯವೇ? ಇದ್ಯಾವುದೂ ಆಗದೆ 2028ರ ಚುನಾವಣೆಯಲ್ಲಿ ಬೇರೊಂದು ಪಕ್ಷ ಅಧಿಕಾರಕ್ಕೆ ಬಂದರೆ, ಅದು ಎಸ್‌ಇಪಿಯನ್ನು ಖಂಡಿತಾ ತಿರಸ್ಕರಿಸುತ್ತದೆ. ಆಗ ಇಲ್ಲಿನ ವಿದ್ಯಾರ್ಥಿಗಳ ಭವಿಷ್ಯವೇನು?

ರೋಹಿತ್ ವೇಮುಲ ಕಾಯ್ದೆ ಜಾರಿ ಕುರಿತು ಪ್ರಸ್ತಾಪ ಸ್ವಾಗತಾರ್ಹ. ಆದರೆ ಇದನ್ನು ಅನುಷ್ಠಾನಗೊಳಿಸುವ ರಾಜಕೀಯ ಇಚ್ಛಾಶಕ್ತಿ ಬೇಕು. ಏಕೆಂದರೆ ಕಳೆದ ಒಂದು ವರ್ಷದಿಂದ ಇದರ ಕುರಿತು ಸಾಕಷ್ಟು ಚರ್ಚೆ, ಸಂವಾದ ಮಾಡಿದ್ದೇವೆ. ಇಲ್ಲಿನ ಪ್ರಗತಿಪರ ಲೇಖಕರು, ನ್ಯಾಯವಾದಿಗಳು, ಪ್ರಾಧ್ಯಾಪಕರ ತಂಡವು ಸತತವಾಗಿ ಅಧ್ಯಯನ ಮಾಡಿ ಇದರ ಕರಡು ಪ್ರತಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಕ್ಯಾಬಿನೆಟ್ ಸಭೆಯಲ್ಲೂ ಇದರ ಕುರಿತು ಚರ್ಚೆ ನಡೆಸಲಿಲ್ಲ. ಕೇವಲ ಪ್ರಿಯಾಂಕ್ ಖರ್ಗೆಯವರು ಮಾತ್ರ ಇದರ ಕುರಿತು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ಉನ್ನತ ಶಿಕ್ಷಣ ಸಚಿವರು ಮತ್ತು ಕಾನೂನು ಸಚಿವರು ಆಸಕ್ತಿ ತೋರಿಸುತ್ತಿಲ್ಲ. ಇದು ಕಳೆದ ಒಂದು ವರ್ಷದ ಬೆಳವಣಿಗೆ.. ಈ ಬಾರಿಯಾದರೂ ಅನುಮೋದನೆ ದೊರಕಬಹುದು, ನೋಡೋಣ.

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಿರ್ಧಾರ ಮೇಲ್ನೋಟಕ್ಕೆ ಸ್ವಾಗತಾರ್ಹವಾದರೂ ನಿರ್ದಿಷ್ಟ ಮಾರ್ಗಸೂಚಿಗಳಿಲ್ಲದೇ ಹೋದರೆ, ಸೈದ್ಧಾಂತಿಕ ಸ್ಪಷ್ಟತೆಯಿಲ್ಲದೇ ಹೋದರೆ ಕ್ಯಾಂಪಸ್‌ಗಳು ಎಬಿವಿಪಿಯ ಆಡೊಂಬಲವಾಗುವುದರಲ್ಲಿ ಅನುಮಾನವಿಲ್ಲ..

ಒಟ್ಟಾರೆ ಉನ್ನತ ಶಿಕ್ಷಣದ ಕುರಿತು ಯಾವುದೇ ದೂರದರ್ಶಿತ್ವ ಮತ್ತು ಧ್ಯೇಯ (ವಿಷನ್ & ಪ್ಯಾಶನ್) ಇಲ್ಲದ ಈ ಬಜೆಟ್ ಕೇವಲ ಕಾಮಗಾರಿಗಳ ಘೋಷಣೆಯಷ್ಟೆ. ವಾಸ್ತವದಲ್ಲಿ ಸರ್ಕಾರವು ಉನ್ನತ ಶಿಕ್ಷಣದ ಜೊತೆಗೆ ಎಂಗೇಜ್ ಆಗಬೇಕು. ಆದರೆ ಈಗ ಕೇವಲ ಮಧ್ಯಸ್ಥಿಕೆ ವಹಿಸುತ್ತಿದೆ. ಇದು ಕೇವಲ ಫೈರ್ ಫೈಟಿಂಗ್ ಅಷ್ಟೇ.. ಅಥವಾ ಅದೂ ಅಲ್ಲ. ಜಾಗತಿಕವಾಗಿ ಉನ್ನತ ಶಿಕ್ಷಣ ಯಾವ ಹಂತದಲ್ಲಿದೆ? ನಾವೆಲ್ಲಿದ್ದೇವೆ ಎನ್ನುವ ಕನಿಷ್ಠ ಕಾಳಜಿಯೂ ಇಲ್ಲದೇ ಹೋದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...