HomeUncategorizedಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

- Advertisement -
- Advertisement -

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಯ ನಂತರ ಅಧಿಕಾರಕ್ಕೆ ಬರುವ ಹೊಸ ಸರಕಾರವು ತನ್ನದೇ ಆದ ಬಜೆಟ್ ಮಂಡಿಸುತ್ತದೆ. ಈ ಕಾರಣಕ್ಕಾಗಿ ಅದಕ್ಕೂ ಎರಡು ತಿಂಗಳ ಮುಂಚೆ ಆಡಳಿತ ನಡೆಸುತ್ತಿರುವ ಸರಕಾರವು ಸಂಪೂರ್ಣ ಬಜೆಟ್ ಬದಲಿಗೆ ’ವೋಟ್ ಆನ್ ಅಕೌಂಟ್ ಮಂಡಿಸಬೇಕಾಗುತ್ತದೆ. ಆದರೆ, ೨೦೦೪ರಲ್ಲಿ ಆಗಿನ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚುನಾವಣೆಗೂ ಮುಂಚೆ ಬಜೆಟ್ ಮಂಡಿಸಿದರು. ನಂತರ ಚುನಾವಣೆ ನಡೆದು ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಹಣಕಾಸು ಮಂತ್ರಿಯಾಗಿದ್ದ ಸಿದ್ಧರಾಮಯ್ಯನವರು ಹೊಸ ಬಜೆಟ್ ಮಂಡಿಸಿದರು. ನಂತರ ಅಧಿಕಾರದಲ್ಲಿರುವ ಪ್ರತಿ ಸರಕಾರವು ಚುನಾವಣೆ ವರ್ಷದಲ್ಲಿ ಬಜೆಟ್ ಮಂಡಿಸುವ ಕೆಟ್ಟ ಪರಂಪರೆ ಮುಂದುವರಿಸುತ್ತಾ ಬರಲಾಗಿದೆ. ಈಗಿನ ಬಿಜೆಪಿ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹ ಎರಡು ತಿಂಗಳ ನಂತರ ಅದರ ಆಸ್ತಿತ್ವ ಇರದ ಚುನಾವಣಾ ಗಿಮಿಕ್ ಆದ ಬಜೆಟ್‌ನ್ನು ಮಂಡಿಸಿದ್ದಾರೆ. ಇದನ್ನು ಬಿಜೆಪಿ ಪಕ್ಷದ ಪ್ರಣಾಳಿಕೆ ಎಂದು ಕರೆಯುವುದು ಸೂಕ್ತ.

ಪ್ರತಿ ಬಜೆಟ್ ಮಂಡನೆಯ ನಂತರ ಅದರ ಖರ್ಚು ಮತ್ತು ವೆಚ್ಚ, ಹಂಚಿಕೆ, ವಿತ್ತೀಯ ಕೊರತೆ ಇತ್ಯಾದಿಗಳ ಚರ್ಚೆ ನಡೆಯುತ್ತದೆ. ಆದರೆ ಬಜೆಟ್ ಮಂಡಿಸುವ ಸರಕಾರವು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರುತ್ತದೆಯೇ ಎನ್ನುವ ಮುಖ್ಯ ಪ್ರಶ್ನೆಯೇ ಚರ್ಚೆಗೆ ಬರುವುದಿಲ್ಲ. ಈ ಬಜೆಟ್ ಎನ್ನುವುದು ಅಂದಾಜು ಲೆಕ್ಕಾಚಾರ ಮಾತ್ರ. ಆದರೆ ಒಂದು ವರ್ಷದ ನಂತರ ಪ್ರಕಟವಾಗುವ ಪರಿಷ್ಕೃತ ಅಂದಾಜು (ಆರ್‌ಇ) ಆಯಾ ವರ್ಷದ ಬಜೆಟ್‌ನ ನಿಜವಾದ ಹಣೆಬರಹವಾಗಿರುತ್ತದೆ. ಎರಡು ವರ್ಷಗಳ ನಂತರ ಮಂಡಿಸುವ ಬಜೆಟ್‌ನಲ್ಲಿ ಎರಡು ವರ್ಷ ಹಿಂದಿನ ಬಜೆಟ್‌ನ ಅಸಲಿಯತ್ತು ಗೊತ್ತಾಗುತ್ತದೆ. ಅಂದರೆ 2203-24ರ ಬಜೆಟ್‌ನಲ್ಲಿ 2021-22ರ ಬಜೆಟ್‌ನ ಕರಾರುವಕ್ಕಾದ ಅಂಕಿಅಂಶಗಳು ಗೊತ್ತಾಗುತ್ತದೆ. ಆದರೆ ಆ ವರ್ಷದ ಬಜೆಟ್‌ನ ಅಂದಾಜು ಮತ್ತು ನಂತರ ಲಭ್ಯವಾಗುವ ಅಸಲಿ ಆಯವ್ಯಯವನ್ನು ತೌಲನಿಕವಾಗಿ ನೋಡಿ ಚರ್ಚೆಯಾಗುವುದಿಲ್ಲ. ಪ್ರತಿ ವರ್ಷ ಮಂಡಿತವಾದ ಬಜೆಟ್ ಕುರಿತು ಚರ್ಚೆಯಲ್ಲಿ ಕಳೆದ ಎರಡು ವರ್ಷಗಳ ಆಶ್ವಾಸನೆಗಳು, ಹಂಚಿಕೆ, ಯೋಜನೆಗಳ ವಾಸ್ತವವೇನು ಎನ್ನುವುದು ಚರ್ಚೆಗೆ ಬರದೆ ಹಿನ್ನಲೆಗೆ ಸರಿಯುತ್ತದೆ.

ಉದಾಹರಣೆಗೆ 2020-21ರ ಬಜೆಟ್‌ನಲ್ಲಿ ಜಿಎಸ್‌ಟಿ ಪರಿಹಾರ 16,116 ಕೋಟಿ ಎಂದು ಅಂದಾಜಿಸಿದ್ದರು. ಆದರೆ ಕೇಂದ್ರ ನೀಡಿದ್ದು 13,798 ಕೋಟಿ. ಶೇ.14ರಷ್ಟು ಕಡಿತವಾಗಿತ್ತು. ಈ ಬಾರಿಯ ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ 2023-24ರಲ್ಲಿ ಜಿಎಸ್‌ಟಿ ಪಾಲು 37,252 ಕೋಟಿ ಎಂದು ಅಂದಾಜಿಸಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಾಜಿಸಿದ ಜಿಎಸ್‌ಟಿ ಪಾಲಿನಲ್ಲಿ ಶೇ.14ರಷ್ಟು ಕಡಿತವಾದದ್ದರ ಬಗ್ಗೆ ಮಾತಿಲ್ಲ. ಈ ಬಾರಿಯೂ ನೀವು ಹೇಳುವ ಮೊತ್ತ ರಾಜ್ಯದ ಬೊಕ್ಕಸಕ್ಕೆ ಸೇರುತ್ತದೆ ಎನ್ನುವ ಖಾತರಿ ಏನು ಎಂದು ಯಾರೂ ಕೇಳುತ್ತಿಲ್ಲ. 2022-23ರ ಬಜೆಟ್‌ನಲ್ಲಿ ಕೇಂದ್ರ ಸರಕಾರದ ಸಹಾಯ ಅನುದಾನದ ಪ್ರಮಾಣ ಶೇ.6ರಷ್ಟು ಎಂದು ಅಂದಾಜಿಸಿದ್ದರು. ಆದರೆ 2023-24ರಲ್ಲಿ ಅದು ಶೇ.4ಕ್ಕೆ ಕುಸಿದಿದೆ. ಇದನ್ನು ಪ್ರಶ್ನಿಸಬೇಕಲ್ಲವೇ?

ಈ ಬಾರಿ ಬಜೆಟ್‌ನಲ್ಲಿ 77,750 ಕೋಟಿ ವಾರ್ಷಿಕ ಸಾಲ ಮತ್ತು ಒಟ್ಟು ಸಾಲ 5.64 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. 2020-21ರಲ್ಲಿ ವಾರ್ಷಿಕ ಸಾಲ 84,527 ಕೋಟಿ, 2021-22ರಲ್ಲಿ 80,767 ಕೋಟಿ, 2022-22ರಲ್ಲಿ 67,000 ಕೋಟಿ ಎಂದು ಅಂದಾಜಿಸಿದ್ದರು. ಅಂದರೆ ಒಟ್ಟು 3.10 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಇದರ ಹೊರತಾಗಿ 2021ರಲ್ಲಿ ಬಜೆಟ್‌ನ ಹೊರಗೆ ಅಂದರೆ ಸಾರ್ವಜನಿಕ ಉದ್ಯಮಗಳ ಮೂಲಕ 10,000 ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಈ ಸಾಲವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸುವುದಿಲ್ಲ.2020-21 ರಲ್ಲಿ 23,620 ಕೋಟಿ ಬಡ್ಡಿ, 2021-22ರಲ್ಲಿ 24,983 ಕೋಟಿ, 2022-23ರಲ್ಲಿ 29,394 ಕೋಟಿ ಬಡ್ಡಿ ಕಟ್ಟಿದ್ದಾರೆ. 2023-24ರಲ್ಲಿ 34,023 ಕೋಟಿ ಬಡ್ಡಿ ಎಂದು ಅಂದಾಜಿಸಿದ್ದಾರೆ. ಅಂದರೆ ಒಟ್ಟು 1.12 ಲಕ್ಷ ಕೋಟಿ ಬಡ್ಡಿ ಕಟ್ಟಲಾಗಿದೆ. 2019-20ರಲ್ಲಿ ಶೇ.10.6ರಷ್ಟಿದ್ದ ಬಡ್ಡಿಯ ಪ್ರಮಾಣವು 2023-24ರ ಹೊತ್ತಿಗೆ ಶೇ.15.1ರಷ್ಟಾಗಿದೆ. ಮತ್ತೊಂದೆಡೆ 2021-22ರಲ್ಲಿ ಯೋಜನೇತರ ವೆಚ್ಚ 97,150. 2022-23 ಪರಿಷ್ಕೃತ ಯೋಜನೇತರ ವೆಚ್ಚ 1.16ಲಕ್ಷ ಕೋಟಿಯಾಗಿದೆ. 2023-24ರಲ್ಲಿ ಯೋಜನೇತರ ವೆಚ್ಚ 20.25 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಮೂರು ವರ್ಷಗಳ ಹಿಂದೆ ಶೇ.45ರಷ್ಟಿದ್ದ ಯೋಜನೇತರ ವೆಚ್ಚ 2023-24ರ ಹೊತ್ತಿಗೆ ಶೇ.60ರಷ್ಟಾಗಿದೆ. ಇದೇ ಸಂದರ್ಭದಲ್ಲಿ 2021-22ರಲ್ಲಿ ಯೋಜನಾಧಾರಿತ ವೆಚ್ಚ 74,879 ಕೋಟಿ, 2022-23 ಪರಿಷ್ಕೃತ ಯೋಜನಾಧಾರಿತ ವೆಚ್ಚ 69,766 ಕೋಟಿಯಾಗಿದೆ. 2023-24ರಲ್ಲಿ ಯೋಜನಾಧಾರಿತ ವೆಚ್ಚ 71,570 ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಯೋಜನಾಧಾರಿತ ವೆಚ್ಚ ಮೂರು ವರ್ಷಗಳಲ್ಲಿ ಶೇ.3ರಷ್ಟು ಕಡಿಮೆಯಾಗಿದೆ. ಮೇಲಿನ ಅಂಕಿಅಂಶಗಳನ್ನು ಒಂದಕ್ಕೊಂದು ತಾಳೆಯಾಗುವಂತೆ ಜೋಡಿಸಿಕೊಂಡಾಗ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಕೇಳಬೇಕಿರುವ ಪ್ರಶ್ನೆಗಳು

ಇದನ್ನೂ ಓದಿ: ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಆದಾಯ ಹೆಚ್ಚಾಗಿದೆ ಎಂದು ಹೇಳಿಕೊಳ್ಳುವ ನೀವು ಸಾಲ ಮತ್ತು ಬಡ್ಡಿಯ ಪ್ರಮಾಣ ಹೆಚ್ಚು ಮಾಡಿದ್ದು ಯಾಕೆ?

ಆದಾಯ ಹೆಚ್ಚಾಗಿದ್ದರೆ ಯೋಜನಾಧಾರಿತ ವೆಚ್ಚ ಕಡಿಮೆಯಾಗಿದ್ದು ಯಾಕೆ? ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.12 ಮತ್ತು ಜಿಡಿಪಿಯ ಶೇ.2.25ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುತ್ತಿರುವಿರಿ? ಆರೋಗ್ಯಕ್ಕೆ ಬಜೆಟ್ ವೆಚ್ಚದ ಶೇ.4ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುವಿರಿ?

ರಾಜ್ಯದಲ್ಲಿ 2.4 ಲಕ್ಷ ಹುದ್ದೆಗಳು ಖಾಲಿಯಿವೆ. ಅಲ್ಲಿ ನೇಮಕಾತಿ ಮಾಡಿಕೊಳ್ಳದೆ ನಿರುದ್ಯೋಗಿಗಳನ್ನು ಸೃಷ್ಟಿಸುವ ನೀವು ಮತ್ತೊಂದೆಡೆ ನಿರುದ್ಯೋಗಿಗಳಿಗೆ 2000 ಸ್ಟೈಫಂಡ್ ಕೊಡುತ್ತೇವೆ ಎಂದು ಕೊಚ್ಚಿಕೊಳ್ಳುವುದು ಜೀವವಿರೋಧಿಯಲ್ಲವೇ? ಮುಖ್ಯವಾಗಿ ಒಂದು ಕಾಲು ಭಾಗದಷ್ಟು ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡರೆ ನಿಮ್ಮ ಯೋಜನೇತರ ವೆಚ್ಚ ಹೆಚ್ಚಾಗುತ್ತದೆ. ಅದನ್ನು ಸರಿದೂಗಿಸಲು ಆದಾಯ ಮೂಲಗಳಿಲ್ಲ. ಈ ಸತ್ಯವನ್ನು ಹೇಳಲು ನಿಮಗೆ ಧೈರ್ಯವಿಲ್ಲ.

ವೆಚ್ಚ ಕಡಿಮೆ ಮಾಡಲು ಸಬ್ಸಿಡಿಗಳನ್ನು ನಿಲ್ಲಿಸುವುದೊಂದೇ ಸರಕಾರಗಳು ಕಂಡುಕೊಂಡ ಹೊಸ ಪರಿಹಾರ ಮಾರ್ಗವಾಗಿದೆ. ಇದು ಬಜೆಟ್‌ನಲ್ಲಿ ಪ್ರತಿಫಲನವಾಗಿದೆ.

ಬಿ. ಶ್ರೀಪಾದ ಭಟ್
ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...