HomeUncategorizedಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

- Advertisement -
- Advertisement -

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಯ ನಂತರ ಅಧಿಕಾರಕ್ಕೆ ಬರುವ ಹೊಸ ಸರಕಾರವು ತನ್ನದೇ ಆದ ಬಜೆಟ್ ಮಂಡಿಸುತ್ತದೆ. ಈ ಕಾರಣಕ್ಕಾಗಿ ಅದಕ್ಕೂ ಎರಡು ತಿಂಗಳ ಮುಂಚೆ ಆಡಳಿತ ನಡೆಸುತ್ತಿರುವ ಸರಕಾರವು ಸಂಪೂರ್ಣ ಬಜೆಟ್ ಬದಲಿಗೆ ’ವೋಟ್ ಆನ್ ಅಕೌಂಟ್ ಮಂಡಿಸಬೇಕಾಗುತ್ತದೆ. ಆದರೆ, ೨೦೦೪ರಲ್ಲಿ ಆಗಿನ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚುನಾವಣೆಗೂ ಮುಂಚೆ ಬಜೆಟ್ ಮಂಡಿಸಿದರು. ನಂತರ ಚುನಾವಣೆ ನಡೆದು ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಹಣಕಾಸು ಮಂತ್ರಿಯಾಗಿದ್ದ ಸಿದ್ಧರಾಮಯ್ಯನವರು ಹೊಸ ಬಜೆಟ್ ಮಂಡಿಸಿದರು. ನಂತರ ಅಧಿಕಾರದಲ್ಲಿರುವ ಪ್ರತಿ ಸರಕಾರವು ಚುನಾವಣೆ ವರ್ಷದಲ್ಲಿ ಬಜೆಟ್ ಮಂಡಿಸುವ ಕೆಟ್ಟ ಪರಂಪರೆ ಮುಂದುವರಿಸುತ್ತಾ ಬರಲಾಗಿದೆ. ಈಗಿನ ಬಿಜೆಪಿ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹ ಎರಡು ತಿಂಗಳ ನಂತರ ಅದರ ಆಸ್ತಿತ್ವ ಇರದ ಚುನಾವಣಾ ಗಿಮಿಕ್ ಆದ ಬಜೆಟ್‌ನ್ನು ಮಂಡಿಸಿದ್ದಾರೆ. ಇದನ್ನು ಬಿಜೆಪಿ ಪಕ್ಷದ ಪ್ರಣಾಳಿಕೆ ಎಂದು ಕರೆಯುವುದು ಸೂಕ್ತ.

ಪ್ರತಿ ಬಜೆಟ್ ಮಂಡನೆಯ ನಂತರ ಅದರ ಖರ್ಚು ಮತ್ತು ವೆಚ್ಚ, ಹಂಚಿಕೆ, ವಿತ್ತೀಯ ಕೊರತೆ ಇತ್ಯಾದಿಗಳ ಚರ್ಚೆ ನಡೆಯುತ್ತದೆ. ಆದರೆ ಬಜೆಟ್ ಮಂಡಿಸುವ ಸರಕಾರವು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರುತ್ತದೆಯೇ ಎನ್ನುವ ಮುಖ್ಯ ಪ್ರಶ್ನೆಯೇ ಚರ್ಚೆಗೆ ಬರುವುದಿಲ್ಲ. ಈ ಬಜೆಟ್ ಎನ್ನುವುದು ಅಂದಾಜು ಲೆಕ್ಕಾಚಾರ ಮಾತ್ರ. ಆದರೆ ಒಂದು ವರ್ಷದ ನಂತರ ಪ್ರಕಟವಾಗುವ ಪರಿಷ್ಕೃತ ಅಂದಾಜು (ಆರ್‌ಇ) ಆಯಾ ವರ್ಷದ ಬಜೆಟ್‌ನ ನಿಜವಾದ ಹಣೆಬರಹವಾಗಿರುತ್ತದೆ. ಎರಡು ವರ್ಷಗಳ ನಂತರ ಮಂಡಿಸುವ ಬಜೆಟ್‌ನಲ್ಲಿ ಎರಡು ವರ್ಷ ಹಿಂದಿನ ಬಜೆಟ್‌ನ ಅಸಲಿಯತ್ತು ಗೊತ್ತಾಗುತ್ತದೆ. ಅಂದರೆ 2203-24ರ ಬಜೆಟ್‌ನಲ್ಲಿ 2021-22ರ ಬಜೆಟ್‌ನ ಕರಾರುವಕ್ಕಾದ ಅಂಕಿಅಂಶಗಳು ಗೊತ್ತಾಗುತ್ತದೆ. ಆದರೆ ಆ ವರ್ಷದ ಬಜೆಟ್‌ನ ಅಂದಾಜು ಮತ್ತು ನಂತರ ಲಭ್ಯವಾಗುವ ಅಸಲಿ ಆಯವ್ಯಯವನ್ನು ತೌಲನಿಕವಾಗಿ ನೋಡಿ ಚರ್ಚೆಯಾಗುವುದಿಲ್ಲ. ಪ್ರತಿ ವರ್ಷ ಮಂಡಿತವಾದ ಬಜೆಟ್ ಕುರಿತು ಚರ್ಚೆಯಲ್ಲಿ ಕಳೆದ ಎರಡು ವರ್ಷಗಳ ಆಶ್ವಾಸನೆಗಳು, ಹಂಚಿಕೆ, ಯೋಜನೆಗಳ ವಾಸ್ತವವೇನು ಎನ್ನುವುದು ಚರ್ಚೆಗೆ ಬರದೆ ಹಿನ್ನಲೆಗೆ ಸರಿಯುತ್ತದೆ.

ಉದಾಹರಣೆಗೆ 2020-21ರ ಬಜೆಟ್‌ನಲ್ಲಿ ಜಿಎಸ್‌ಟಿ ಪರಿಹಾರ 16,116 ಕೋಟಿ ಎಂದು ಅಂದಾಜಿಸಿದ್ದರು. ಆದರೆ ಕೇಂದ್ರ ನೀಡಿದ್ದು 13,798 ಕೋಟಿ. ಶೇ.14ರಷ್ಟು ಕಡಿತವಾಗಿತ್ತು. ಈ ಬಾರಿಯ ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ 2023-24ರಲ್ಲಿ ಜಿಎಸ್‌ಟಿ ಪಾಲು 37,252 ಕೋಟಿ ಎಂದು ಅಂದಾಜಿಸಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಾಜಿಸಿದ ಜಿಎಸ್‌ಟಿ ಪಾಲಿನಲ್ಲಿ ಶೇ.14ರಷ್ಟು ಕಡಿತವಾದದ್ದರ ಬಗ್ಗೆ ಮಾತಿಲ್ಲ. ಈ ಬಾರಿಯೂ ನೀವು ಹೇಳುವ ಮೊತ್ತ ರಾಜ್ಯದ ಬೊಕ್ಕಸಕ್ಕೆ ಸೇರುತ್ತದೆ ಎನ್ನುವ ಖಾತರಿ ಏನು ಎಂದು ಯಾರೂ ಕೇಳುತ್ತಿಲ್ಲ. 2022-23ರ ಬಜೆಟ್‌ನಲ್ಲಿ ಕೇಂದ್ರ ಸರಕಾರದ ಸಹಾಯ ಅನುದಾನದ ಪ್ರಮಾಣ ಶೇ.6ರಷ್ಟು ಎಂದು ಅಂದಾಜಿಸಿದ್ದರು. ಆದರೆ 2023-24ರಲ್ಲಿ ಅದು ಶೇ.4ಕ್ಕೆ ಕುಸಿದಿದೆ. ಇದನ್ನು ಪ್ರಶ್ನಿಸಬೇಕಲ್ಲವೇ?

ಈ ಬಾರಿ ಬಜೆಟ್‌ನಲ್ಲಿ 77,750 ಕೋಟಿ ವಾರ್ಷಿಕ ಸಾಲ ಮತ್ತು ಒಟ್ಟು ಸಾಲ 5.64 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. 2020-21ರಲ್ಲಿ ವಾರ್ಷಿಕ ಸಾಲ 84,527 ಕೋಟಿ, 2021-22ರಲ್ಲಿ 80,767 ಕೋಟಿ, 2022-22ರಲ್ಲಿ 67,000 ಕೋಟಿ ಎಂದು ಅಂದಾಜಿಸಿದ್ದರು. ಅಂದರೆ ಒಟ್ಟು 3.10 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಇದರ ಹೊರತಾಗಿ 2021ರಲ್ಲಿ ಬಜೆಟ್‌ನ ಹೊರಗೆ ಅಂದರೆ ಸಾರ್ವಜನಿಕ ಉದ್ಯಮಗಳ ಮೂಲಕ 10,000 ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಈ ಸಾಲವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸುವುದಿಲ್ಲ.2020-21 ರಲ್ಲಿ 23,620 ಕೋಟಿ ಬಡ್ಡಿ, 2021-22ರಲ್ಲಿ 24,983 ಕೋಟಿ, 2022-23ರಲ್ಲಿ 29,394 ಕೋಟಿ ಬಡ್ಡಿ ಕಟ್ಟಿದ್ದಾರೆ. 2023-24ರಲ್ಲಿ 34,023 ಕೋಟಿ ಬಡ್ಡಿ ಎಂದು ಅಂದಾಜಿಸಿದ್ದಾರೆ. ಅಂದರೆ ಒಟ್ಟು 1.12 ಲಕ್ಷ ಕೋಟಿ ಬಡ್ಡಿ ಕಟ್ಟಲಾಗಿದೆ. 2019-20ರಲ್ಲಿ ಶೇ.10.6ರಷ್ಟಿದ್ದ ಬಡ್ಡಿಯ ಪ್ರಮಾಣವು 2023-24ರ ಹೊತ್ತಿಗೆ ಶೇ.15.1ರಷ್ಟಾಗಿದೆ. ಮತ್ತೊಂದೆಡೆ 2021-22ರಲ್ಲಿ ಯೋಜನೇತರ ವೆಚ್ಚ 97,150. 2022-23 ಪರಿಷ್ಕೃತ ಯೋಜನೇತರ ವೆಚ್ಚ 1.16ಲಕ್ಷ ಕೋಟಿಯಾಗಿದೆ. 2023-24ರಲ್ಲಿ ಯೋಜನೇತರ ವೆಚ್ಚ 20.25 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಮೂರು ವರ್ಷಗಳ ಹಿಂದೆ ಶೇ.45ರಷ್ಟಿದ್ದ ಯೋಜನೇತರ ವೆಚ್ಚ 2023-24ರ ಹೊತ್ತಿಗೆ ಶೇ.60ರಷ್ಟಾಗಿದೆ. ಇದೇ ಸಂದರ್ಭದಲ್ಲಿ 2021-22ರಲ್ಲಿ ಯೋಜನಾಧಾರಿತ ವೆಚ್ಚ 74,879 ಕೋಟಿ, 2022-23 ಪರಿಷ್ಕೃತ ಯೋಜನಾಧಾರಿತ ವೆಚ್ಚ 69,766 ಕೋಟಿಯಾಗಿದೆ. 2023-24ರಲ್ಲಿ ಯೋಜನಾಧಾರಿತ ವೆಚ್ಚ 71,570 ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಯೋಜನಾಧಾರಿತ ವೆಚ್ಚ ಮೂರು ವರ್ಷಗಳಲ್ಲಿ ಶೇ.3ರಷ್ಟು ಕಡಿಮೆಯಾಗಿದೆ. ಮೇಲಿನ ಅಂಕಿಅಂಶಗಳನ್ನು ಒಂದಕ್ಕೊಂದು ತಾಳೆಯಾಗುವಂತೆ ಜೋಡಿಸಿಕೊಂಡಾಗ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಕೇಳಬೇಕಿರುವ ಪ್ರಶ್ನೆಗಳು

ಇದನ್ನೂ ಓದಿ: ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಆದಾಯ ಹೆಚ್ಚಾಗಿದೆ ಎಂದು ಹೇಳಿಕೊಳ್ಳುವ ನೀವು ಸಾಲ ಮತ್ತು ಬಡ್ಡಿಯ ಪ್ರಮಾಣ ಹೆಚ್ಚು ಮಾಡಿದ್ದು ಯಾಕೆ?

ಆದಾಯ ಹೆಚ್ಚಾಗಿದ್ದರೆ ಯೋಜನಾಧಾರಿತ ವೆಚ್ಚ ಕಡಿಮೆಯಾಗಿದ್ದು ಯಾಕೆ? ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.12 ಮತ್ತು ಜಿಡಿಪಿಯ ಶೇ.2.25ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುತ್ತಿರುವಿರಿ? ಆರೋಗ್ಯಕ್ಕೆ ಬಜೆಟ್ ವೆಚ್ಚದ ಶೇ.4ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುವಿರಿ?

ರಾಜ್ಯದಲ್ಲಿ 2.4 ಲಕ್ಷ ಹುದ್ದೆಗಳು ಖಾಲಿಯಿವೆ. ಅಲ್ಲಿ ನೇಮಕಾತಿ ಮಾಡಿಕೊಳ್ಳದೆ ನಿರುದ್ಯೋಗಿಗಳನ್ನು ಸೃಷ್ಟಿಸುವ ನೀವು ಮತ್ತೊಂದೆಡೆ ನಿರುದ್ಯೋಗಿಗಳಿಗೆ 2000 ಸ್ಟೈಫಂಡ್ ಕೊಡುತ್ತೇವೆ ಎಂದು ಕೊಚ್ಚಿಕೊಳ್ಳುವುದು ಜೀವವಿರೋಧಿಯಲ್ಲವೇ? ಮುಖ್ಯವಾಗಿ ಒಂದು ಕಾಲು ಭಾಗದಷ್ಟು ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡರೆ ನಿಮ್ಮ ಯೋಜನೇತರ ವೆಚ್ಚ ಹೆಚ್ಚಾಗುತ್ತದೆ. ಅದನ್ನು ಸರಿದೂಗಿಸಲು ಆದಾಯ ಮೂಲಗಳಿಲ್ಲ. ಈ ಸತ್ಯವನ್ನು ಹೇಳಲು ನಿಮಗೆ ಧೈರ್ಯವಿಲ್ಲ.

ವೆಚ್ಚ ಕಡಿಮೆ ಮಾಡಲು ಸಬ್ಸಿಡಿಗಳನ್ನು ನಿಲ್ಲಿಸುವುದೊಂದೇ ಸರಕಾರಗಳು ಕಂಡುಕೊಂಡ ಹೊಸ ಪರಿಹಾರ ಮಾರ್ಗವಾಗಿದೆ. ಇದು ಬಜೆಟ್‌ನಲ್ಲಿ ಪ್ರತಿಫಲನವಾಗಿದೆ.

ಬಿ. ಶ್ರೀಪಾದ ಭಟ್
ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...