HomeUncategorizedಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

- Advertisement -
- Advertisement -

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಯ ನಂತರ ಅಧಿಕಾರಕ್ಕೆ ಬರುವ ಹೊಸ ಸರಕಾರವು ತನ್ನದೇ ಆದ ಬಜೆಟ್ ಮಂಡಿಸುತ್ತದೆ. ಈ ಕಾರಣಕ್ಕಾಗಿ ಅದಕ್ಕೂ ಎರಡು ತಿಂಗಳ ಮುಂಚೆ ಆಡಳಿತ ನಡೆಸುತ್ತಿರುವ ಸರಕಾರವು ಸಂಪೂರ್ಣ ಬಜೆಟ್ ಬದಲಿಗೆ ’ವೋಟ್ ಆನ್ ಅಕೌಂಟ್ ಮಂಡಿಸಬೇಕಾಗುತ್ತದೆ. ಆದರೆ, ೨೦೦೪ರಲ್ಲಿ ಆಗಿನ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚುನಾವಣೆಗೂ ಮುಂಚೆ ಬಜೆಟ್ ಮಂಡಿಸಿದರು. ನಂತರ ಚುನಾವಣೆ ನಡೆದು ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಹಣಕಾಸು ಮಂತ್ರಿಯಾಗಿದ್ದ ಸಿದ್ಧರಾಮಯ್ಯನವರು ಹೊಸ ಬಜೆಟ್ ಮಂಡಿಸಿದರು. ನಂತರ ಅಧಿಕಾರದಲ್ಲಿರುವ ಪ್ರತಿ ಸರಕಾರವು ಚುನಾವಣೆ ವರ್ಷದಲ್ಲಿ ಬಜೆಟ್ ಮಂಡಿಸುವ ಕೆಟ್ಟ ಪರಂಪರೆ ಮುಂದುವರಿಸುತ್ತಾ ಬರಲಾಗಿದೆ. ಈಗಿನ ಬಿಜೆಪಿ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹ ಎರಡು ತಿಂಗಳ ನಂತರ ಅದರ ಆಸ್ತಿತ್ವ ಇರದ ಚುನಾವಣಾ ಗಿಮಿಕ್ ಆದ ಬಜೆಟ್‌ನ್ನು ಮಂಡಿಸಿದ್ದಾರೆ. ಇದನ್ನು ಬಿಜೆಪಿ ಪಕ್ಷದ ಪ್ರಣಾಳಿಕೆ ಎಂದು ಕರೆಯುವುದು ಸೂಕ್ತ.

ಪ್ರತಿ ಬಜೆಟ್ ಮಂಡನೆಯ ನಂತರ ಅದರ ಖರ್ಚು ಮತ್ತು ವೆಚ್ಚ, ಹಂಚಿಕೆ, ವಿತ್ತೀಯ ಕೊರತೆ ಇತ್ಯಾದಿಗಳ ಚರ್ಚೆ ನಡೆಯುತ್ತದೆ. ಆದರೆ ಬಜೆಟ್ ಮಂಡಿಸುವ ಸರಕಾರವು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರುತ್ತದೆಯೇ ಎನ್ನುವ ಮುಖ್ಯ ಪ್ರಶ್ನೆಯೇ ಚರ್ಚೆಗೆ ಬರುವುದಿಲ್ಲ. ಈ ಬಜೆಟ್ ಎನ್ನುವುದು ಅಂದಾಜು ಲೆಕ್ಕಾಚಾರ ಮಾತ್ರ. ಆದರೆ ಒಂದು ವರ್ಷದ ನಂತರ ಪ್ರಕಟವಾಗುವ ಪರಿಷ್ಕೃತ ಅಂದಾಜು (ಆರ್‌ಇ) ಆಯಾ ವರ್ಷದ ಬಜೆಟ್‌ನ ನಿಜವಾದ ಹಣೆಬರಹವಾಗಿರುತ್ತದೆ. ಎರಡು ವರ್ಷಗಳ ನಂತರ ಮಂಡಿಸುವ ಬಜೆಟ್‌ನಲ್ಲಿ ಎರಡು ವರ್ಷ ಹಿಂದಿನ ಬಜೆಟ್‌ನ ಅಸಲಿಯತ್ತು ಗೊತ್ತಾಗುತ್ತದೆ. ಅಂದರೆ 2203-24ರ ಬಜೆಟ್‌ನಲ್ಲಿ 2021-22ರ ಬಜೆಟ್‌ನ ಕರಾರುವಕ್ಕಾದ ಅಂಕಿಅಂಶಗಳು ಗೊತ್ತಾಗುತ್ತದೆ. ಆದರೆ ಆ ವರ್ಷದ ಬಜೆಟ್‌ನ ಅಂದಾಜು ಮತ್ತು ನಂತರ ಲಭ್ಯವಾಗುವ ಅಸಲಿ ಆಯವ್ಯಯವನ್ನು ತೌಲನಿಕವಾಗಿ ನೋಡಿ ಚರ್ಚೆಯಾಗುವುದಿಲ್ಲ. ಪ್ರತಿ ವರ್ಷ ಮಂಡಿತವಾದ ಬಜೆಟ್ ಕುರಿತು ಚರ್ಚೆಯಲ್ಲಿ ಕಳೆದ ಎರಡು ವರ್ಷಗಳ ಆಶ್ವಾಸನೆಗಳು, ಹಂಚಿಕೆ, ಯೋಜನೆಗಳ ವಾಸ್ತವವೇನು ಎನ್ನುವುದು ಚರ್ಚೆಗೆ ಬರದೆ ಹಿನ್ನಲೆಗೆ ಸರಿಯುತ್ತದೆ.

ಉದಾಹರಣೆಗೆ 2020-21ರ ಬಜೆಟ್‌ನಲ್ಲಿ ಜಿಎಸ್‌ಟಿ ಪರಿಹಾರ 16,116 ಕೋಟಿ ಎಂದು ಅಂದಾಜಿಸಿದ್ದರು. ಆದರೆ ಕೇಂದ್ರ ನೀಡಿದ್ದು 13,798 ಕೋಟಿ. ಶೇ.14ರಷ್ಟು ಕಡಿತವಾಗಿತ್ತು. ಈ ಬಾರಿಯ ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ 2023-24ರಲ್ಲಿ ಜಿಎಸ್‌ಟಿ ಪಾಲು 37,252 ಕೋಟಿ ಎಂದು ಅಂದಾಜಿಸಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಾಜಿಸಿದ ಜಿಎಸ್‌ಟಿ ಪಾಲಿನಲ್ಲಿ ಶೇ.14ರಷ್ಟು ಕಡಿತವಾದದ್ದರ ಬಗ್ಗೆ ಮಾತಿಲ್ಲ. ಈ ಬಾರಿಯೂ ನೀವು ಹೇಳುವ ಮೊತ್ತ ರಾಜ್ಯದ ಬೊಕ್ಕಸಕ್ಕೆ ಸೇರುತ್ತದೆ ಎನ್ನುವ ಖಾತರಿ ಏನು ಎಂದು ಯಾರೂ ಕೇಳುತ್ತಿಲ್ಲ. 2022-23ರ ಬಜೆಟ್‌ನಲ್ಲಿ ಕೇಂದ್ರ ಸರಕಾರದ ಸಹಾಯ ಅನುದಾನದ ಪ್ರಮಾಣ ಶೇ.6ರಷ್ಟು ಎಂದು ಅಂದಾಜಿಸಿದ್ದರು. ಆದರೆ 2023-24ರಲ್ಲಿ ಅದು ಶೇ.4ಕ್ಕೆ ಕುಸಿದಿದೆ. ಇದನ್ನು ಪ್ರಶ್ನಿಸಬೇಕಲ್ಲವೇ?

ಈ ಬಾರಿ ಬಜೆಟ್‌ನಲ್ಲಿ 77,750 ಕೋಟಿ ವಾರ್ಷಿಕ ಸಾಲ ಮತ್ತು ಒಟ್ಟು ಸಾಲ 5.64 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. 2020-21ರಲ್ಲಿ ವಾರ್ಷಿಕ ಸಾಲ 84,527 ಕೋಟಿ, 2021-22ರಲ್ಲಿ 80,767 ಕೋಟಿ, 2022-22ರಲ್ಲಿ 67,000 ಕೋಟಿ ಎಂದು ಅಂದಾಜಿಸಿದ್ದರು. ಅಂದರೆ ಒಟ್ಟು 3.10 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಇದರ ಹೊರತಾಗಿ 2021ರಲ್ಲಿ ಬಜೆಟ್‌ನ ಹೊರಗೆ ಅಂದರೆ ಸಾರ್ವಜನಿಕ ಉದ್ಯಮಗಳ ಮೂಲಕ 10,000 ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಈ ಸಾಲವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸುವುದಿಲ್ಲ.2020-21 ರಲ್ಲಿ 23,620 ಕೋಟಿ ಬಡ್ಡಿ, 2021-22ರಲ್ಲಿ 24,983 ಕೋಟಿ, 2022-23ರಲ್ಲಿ 29,394 ಕೋಟಿ ಬಡ್ಡಿ ಕಟ್ಟಿದ್ದಾರೆ. 2023-24ರಲ್ಲಿ 34,023 ಕೋಟಿ ಬಡ್ಡಿ ಎಂದು ಅಂದಾಜಿಸಿದ್ದಾರೆ. ಅಂದರೆ ಒಟ್ಟು 1.12 ಲಕ್ಷ ಕೋಟಿ ಬಡ್ಡಿ ಕಟ್ಟಲಾಗಿದೆ. 2019-20ರಲ್ಲಿ ಶೇ.10.6ರಷ್ಟಿದ್ದ ಬಡ್ಡಿಯ ಪ್ರಮಾಣವು 2023-24ರ ಹೊತ್ತಿಗೆ ಶೇ.15.1ರಷ್ಟಾಗಿದೆ. ಮತ್ತೊಂದೆಡೆ 2021-22ರಲ್ಲಿ ಯೋಜನೇತರ ವೆಚ್ಚ 97,150. 2022-23 ಪರಿಷ್ಕೃತ ಯೋಜನೇತರ ವೆಚ್ಚ 1.16ಲಕ್ಷ ಕೋಟಿಯಾಗಿದೆ. 2023-24ರಲ್ಲಿ ಯೋಜನೇತರ ವೆಚ್ಚ 20.25 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಮೂರು ವರ್ಷಗಳ ಹಿಂದೆ ಶೇ.45ರಷ್ಟಿದ್ದ ಯೋಜನೇತರ ವೆಚ್ಚ 2023-24ರ ಹೊತ್ತಿಗೆ ಶೇ.60ರಷ್ಟಾಗಿದೆ. ಇದೇ ಸಂದರ್ಭದಲ್ಲಿ 2021-22ರಲ್ಲಿ ಯೋಜನಾಧಾರಿತ ವೆಚ್ಚ 74,879 ಕೋಟಿ, 2022-23 ಪರಿಷ್ಕೃತ ಯೋಜನಾಧಾರಿತ ವೆಚ್ಚ 69,766 ಕೋಟಿಯಾಗಿದೆ. 2023-24ರಲ್ಲಿ ಯೋಜನಾಧಾರಿತ ವೆಚ್ಚ 71,570 ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಯೋಜನಾಧಾರಿತ ವೆಚ್ಚ ಮೂರು ವರ್ಷಗಳಲ್ಲಿ ಶೇ.3ರಷ್ಟು ಕಡಿಮೆಯಾಗಿದೆ. ಮೇಲಿನ ಅಂಕಿಅಂಶಗಳನ್ನು ಒಂದಕ್ಕೊಂದು ತಾಳೆಯಾಗುವಂತೆ ಜೋಡಿಸಿಕೊಂಡಾಗ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಕೇಳಬೇಕಿರುವ ಪ್ರಶ್ನೆಗಳು

ಇದನ್ನೂ ಓದಿ: ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಆದಾಯ ಹೆಚ್ಚಾಗಿದೆ ಎಂದು ಹೇಳಿಕೊಳ್ಳುವ ನೀವು ಸಾಲ ಮತ್ತು ಬಡ್ಡಿಯ ಪ್ರಮಾಣ ಹೆಚ್ಚು ಮಾಡಿದ್ದು ಯಾಕೆ?

ಆದಾಯ ಹೆಚ್ಚಾಗಿದ್ದರೆ ಯೋಜನಾಧಾರಿತ ವೆಚ್ಚ ಕಡಿಮೆಯಾಗಿದ್ದು ಯಾಕೆ? ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.12 ಮತ್ತು ಜಿಡಿಪಿಯ ಶೇ.2.25ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುತ್ತಿರುವಿರಿ? ಆರೋಗ್ಯಕ್ಕೆ ಬಜೆಟ್ ವೆಚ್ಚದ ಶೇ.4ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುವಿರಿ?

ರಾಜ್ಯದಲ್ಲಿ 2.4 ಲಕ್ಷ ಹುದ್ದೆಗಳು ಖಾಲಿಯಿವೆ. ಅಲ್ಲಿ ನೇಮಕಾತಿ ಮಾಡಿಕೊಳ್ಳದೆ ನಿರುದ್ಯೋಗಿಗಳನ್ನು ಸೃಷ್ಟಿಸುವ ನೀವು ಮತ್ತೊಂದೆಡೆ ನಿರುದ್ಯೋಗಿಗಳಿಗೆ 2000 ಸ್ಟೈಫಂಡ್ ಕೊಡುತ್ತೇವೆ ಎಂದು ಕೊಚ್ಚಿಕೊಳ್ಳುವುದು ಜೀವವಿರೋಧಿಯಲ್ಲವೇ? ಮುಖ್ಯವಾಗಿ ಒಂದು ಕಾಲು ಭಾಗದಷ್ಟು ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡರೆ ನಿಮ್ಮ ಯೋಜನೇತರ ವೆಚ್ಚ ಹೆಚ್ಚಾಗುತ್ತದೆ. ಅದನ್ನು ಸರಿದೂಗಿಸಲು ಆದಾಯ ಮೂಲಗಳಿಲ್ಲ. ಈ ಸತ್ಯವನ್ನು ಹೇಳಲು ನಿಮಗೆ ಧೈರ್ಯವಿಲ್ಲ.

ವೆಚ್ಚ ಕಡಿಮೆ ಮಾಡಲು ಸಬ್ಸಿಡಿಗಳನ್ನು ನಿಲ್ಲಿಸುವುದೊಂದೇ ಸರಕಾರಗಳು ಕಂಡುಕೊಂಡ ಹೊಸ ಪರಿಹಾರ ಮಾರ್ಗವಾಗಿದೆ. ಇದು ಬಜೆಟ್‌ನಲ್ಲಿ ಪ್ರತಿಫಲನವಾಗಿದೆ.

ಬಿ. ಶ್ರೀಪಾದ ಭಟ್
ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...