HomeUncategorizedಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

- Advertisement -
- Advertisement -

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಯ ನಂತರ ಅಧಿಕಾರಕ್ಕೆ ಬರುವ ಹೊಸ ಸರಕಾರವು ತನ್ನದೇ ಆದ ಬಜೆಟ್ ಮಂಡಿಸುತ್ತದೆ. ಈ ಕಾರಣಕ್ಕಾಗಿ ಅದಕ್ಕೂ ಎರಡು ತಿಂಗಳ ಮುಂಚೆ ಆಡಳಿತ ನಡೆಸುತ್ತಿರುವ ಸರಕಾರವು ಸಂಪೂರ್ಣ ಬಜೆಟ್ ಬದಲಿಗೆ ’ವೋಟ್ ಆನ್ ಅಕೌಂಟ್ ಮಂಡಿಸಬೇಕಾಗುತ್ತದೆ. ಆದರೆ, ೨೦೦೪ರಲ್ಲಿ ಆಗಿನ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚುನಾವಣೆಗೂ ಮುಂಚೆ ಬಜೆಟ್ ಮಂಡಿಸಿದರು. ನಂತರ ಚುನಾವಣೆ ನಡೆದು ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಹಣಕಾಸು ಮಂತ್ರಿಯಾಗಿದ್ದ ಸಿದ್ಧರಾಮಯ್ಯನವರು ಹೊಸ ಬಜೆಟ್ ಮಂಡಿಸಿದರು. ನಂತರ ಅಧಿಕಾರದಲ್ಲಿರುವ ಪ್ರತಿ ಸರಕಾರವು ಚುನಾವಣೆ ವರ್ಷದಲ್ಲಿ ಬಜೆಟ್ ಮಂಡಿಸುವ ಕೆಟ್ಟ ಪರಂಪರೆ ಮುಂದುವರಿಸುತ್ತಾ ಬರಲಾಗಿದೆ. ಈಗಿನ ಬಿಜೆಪಿ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹ ಎರಡು ತಿಂಗಳ ನಂತರ ಅದರ ಆಸ್ತಿತ್ವ ಇರದ ಚುನಾವಣಾ ಗಿಮಿಕ್ ಆದ ಬಜೆಟ್‌ನ್ನು ಮಂಡಿಸಿದ್ದಾರೆ. ಇದನ್ನು ಬಿಜೆಪಿ ಪಕ್ಷದ ಪ್ರಣಾಳಿಕೆ ಎಂದು ಕರೆಯುವುದು ಸೂಕ್ತ.

ಪ್ರತಿ ಬಜೆಟ್ ಮಂಡನೆಯ ನಂತರ ಅದರ ಖರ್ಚು ಮತ್ತು ವೆಚ್ಚ, ಹಂಚಿಕೆ, ವಿತ್ತೀಯ ಕೊರತೆ ಇತ್ಯಾದಿಗಳ ಚರ್ಚೆ ನಡೆಯುತ್ತದೆ. ಆದರೆ ಬಜೆಟ್ ಮಂಡಿಸುವ ಸರಕಾರವು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರುತ್ತದೆಯೇ ಎನ್ನುವ ಮುಖ್ಯ ಪ್ರಶ್ನೆಯೇ ಚರ್ಚೆಗೆ ಬರುವುದಿಲ್ಲ. ಈ ಬಜೆಟ್ ಎನ್ನುವುದು ಅಂದಾಜು ಲೆಕ್ಕಾಚಾರ ಮಾತ್ರ. ಆದರೆ ಒಂದು ವರ್ಷದ ನಂತರ ಪ್ರಕಟವಾಗುವ ಪರಿಷ್ಕೃತ ಅಂದಾಜು (ಆರ್‌ಇ) ಆಯಾ ವರ್ಷದ ಬಜೆಟ್‌ನ ನಿಜವಾದ ಹಣೆಬರಹವಾಗಿರುತ್ತದೆ. ಎರಡು ವರ್ಷಗಳ ನಂತರ ಮಂಡಿಸುವ ಬಜೆಟ್‌ನಲ್ಲಿ ಎರಡು ವರ್ಷ ಹಿಂದಿನ ಬಜೆಟ್‌ನ ಅಸಲಿಯತ್ತು ಗೊತ್ತಾಗುತ್ತದೆ. ಅಂದರೆ 2203-24ರ ಬಜೆಟ್‌ನಲ್ಲಿ 2021-22ರ ಬಜೆಟ್‌ನ ಕರಾರುವಕ್ಕಾದ ಅಂಕಿಅಂಶಗಳು ಗೊತ್ತಾಗುತ್ತದೆ. ಆದರೆ ಆ ವರ್ಷದ ಬಜೆಟ್‌ನ ಅಂದಾಜು ಮತ್ತು ನಂತರ ಲಭ್ಯವಾಗುವ ಅಸಲಿ ಆಯವ್ಯಯವನ್ನು ತೌಲನಿಕವಾಗಿ ನೋಡಿ ಚರ್ಚೆಯಾಗುವುದಿಲ್ಲ. ಪ್ರತಿ ವರ್ಷ ಮಂಡಿತವಾದ ಬಜೆಟ್ ಕುರಿತು ಚರ್ಚೆಯಲ್ಲಿ ಕಳೆದ ಎರಡು ವರ್ಷಗಳ ಆಶ್ವಾಸನೆಗಳು, ಹಂಚಿಕೆ, ಯೋಜನೆಗಳ ವಾಸ್ತವವೇನು ಎನ್ನುವುದು ಚರ್ಚೆಗೆ ಬರದೆ ಹಿನ್ನಲೆಗೆ ಸರಿಯುತ್ತದೆ.

ಉದಾಹರಣೆಗೆ 2020-21ರ ಬಜೆಟ್‌ನಲ್ಲಿ ಜಿಎಸ್‌ಟಿ ಪರಿಹಾರ 16,116 ಕೋಟಿ ಎಂದು ಅಂದಾಜಿಸಿದ್ದರು. ಆದರೆ ಕೇಂದ್ರ ನೀಡಿದ್ದು 13,798 ಕೋಟಿ. ಶೇ.14ರಷ್ಟು ಕಡಿತವಾಗಿತ್ತು. ಈ ಬಾರಿಯ ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ 2023-24ರಲ್ಲಿ ಜಿಎಸ್‌ಟಿ ಪಾಲು 37,252 ಕೋಟಿ ಎಂದು ಅಂದಾಜಿಸಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಾಜಿಸಿದ ಜಿಎಸ್‌ಟಿ ಪಾಲಿನಲ್ಲಿ ಶೇ.14ರಷ್ಟು ಕಡಿತವಾದದ್ದರ ಬಗ್ಗೆ ಮಾತಿಲ್ಲ. ಈ ಬಾರಿಯೂ ನೀವು ಹೇಳುವ ಮೊತ್ತ ರಾಜ್ಯದ ಬೊಕ್ಕಸಕ್ಕೆ ಸೇರುತ್ತದೆ ಎನ್ನುವ ಖಾತರಿ ಏನು ಎಂದು ಯಾರೂ ಕೇಳುತ್ತಿಲ್ಲ. 2022-23ರ ಬಜೆಟ್‌ನಲ್ಲಿ ಕೇಂದ್ರ ಸರಕಾರದ ಸಹಾಯ ಅನುದಾನದ ಪ್ರಮಾಣ ಶೇ.6ರಷ್ಟು ಎಂದು ಅಂದಾಜಿಸಿದ್ದರು. ಆದರೆ 2023-24ರಲ್ಲಿ ಅದು ಶೇ.4ಕ್ಕೆ ಕುಸಿದಿದೆ. ಇದನ್ನು ಪ್ರಶ್ನಿಸಬೇಕಲ್ಲವೇ?

ಈ ಬಾರಿ ಬಜೆಟ್‌ನಲ್ಲಿ 77,750 ಕೋಟಿ ವಾರ್ಷಿಕ ಸಾಲ ಮತ್ತು ಒಟ್ಟು ಸಾಲ 5.64 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. 2020-21ರಲ್ಲಿ ವಾರ್ಷಿಕ ಸಾಲ 84,527 ಕೋಟಿ, 2021-22ರಲ್ಲಿ 80,767 ಕೋಟಿ, 2022-22ರಲ್ಲಿ 67,000 ಕೋಟಿ ಎಂದು ಅಂದಾಜಿಸಿದ್ದರು. ಅಂದರೆ ಒಟ್ಟು 3.10 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಇದರ ಹೊರತಾಗಿ 2021ರಲ್ಲಿ ಬಜೆಟ್‌ನ ಹೊರಗೆ ಅಂದರೆ ಸಾರ್ವಜನಿಕ ಉದ್ಯಮಗಳ ಮೂಲಕ 10,000 ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಈ ಸಾಲವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸುವುದಿಲ್ಲ.2020-21 ರಲ್ಲಿ 23,620 ಕೋಟಿ ಬಡ್ಡಿ, 2021-22ರಲ್ಲಿ 24,983 ಕೋಟಿ, 2022-23ರಲ್ಲಿ 29,394 ಕೋಟಿ ಬಡ್ಡಿ ಕಟ್ಟಿದ್ದಾರೆ. 2023-24ರಲ್ಲಿ 34,023 ಕೋಟಿ ಬಡ್ಡಿ ಎಂದು ಅಂದಾಜಿಸಿದ್ದಾರೆ. ಅಂದರೆ ಒಟ್ಟು 1.12 ಲಕ್ಷ ಕೋಟಿ ಬಡ್ಡಿ ಕಟ್ಟಲಾಗಿದೆ. 2019-20ರಲ್ಲಿ ಶೇ.10.6ರಷ್ಟಿದ್ದ ಬಡ್ಡಿಯ ಪ್ರಮಾಣವು 2023-24ರ ಹೊತ್ತಿಗೆ ಶೇ.15.1ರಷ್ಟಾಗಿದೆ. ಮತ್ತೊಂದೆಡೆ 2021-22ರಲ್ಲಿ ಯೋಜನೇತರ ವೆಚ್ಚ 97,150. 2022-23 ಪರಿಷ್ಕೃತ ಯೋಜನೇತರ ವೆಚ್ಚ 1.16ಲಕ್ಷ ಕೋಟಿಯಾಗಿದೆ. 2023-24ರಲ್ಲಿ ಯೋಜನೇತರ ವೆಚ್ಚ 20.25 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಮೂರು ವರ್ಷಗಳ ಹಿಂದೆ ಶೇ.45ರಷ್ಟಿದ್ದ ಯೋಜನೇತರ ವೆಚ್ಚ 2023-24ರ ಹೊತ್ತಿಗೆ ಶೇ.60ರಷ್ಟಾಗಿದೆ. ಇದೇ ಸಂದರ್ಭದಲ್ಲಿ 2021-22ರಲ್ಲಿ ಯೋಜನಾಧಾರಿತ ವೆಚ್ಚ 74,879 ಕೋಟಿ, 2022-23 ಪರಿಷ್ಕೃತ ಯೋಜನಾಧಾರಿತ ವೆಚ್ಚ 69,766 ಕೋಟಿಯಾಗಿದೆ. 2023-24ರಲ್ಲಿ ಯೋಜನಾಧಾರಿತ ವೆಚ್ಚ 71,570 ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಯೋಜನಾಧಾರಿತ ವೆಚ್ಚ ಮೂರು ವರ್ಷಗಳಲ್ಲಿ ಶೇ.3ರಷ್ಟು ಕಡಿಮೆಯಾಗಿದೆ. ಮೇಲಿನ ಅಂಕಿಅಂಶಗಳನ್ನು ಒಂದಕ್ಕೊಂದು ತಾಳೆಯಾಗುವಂತೆ ಜೋಡಿಸಿಕೊಂಡಾಗ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಕೇಳಬೇಕಿರುವ ಪ್ರಶ್ನೆಗಳು

ಇದನ್ನೂ ಓದಿ: ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಆದಾಯ ಹೆಚ್ಚಾಗಿದೆ ಎಂದು ಹೇಳಿಕೊಳ್ಳುವ ನೀವು ಸಾಲ ಮತ್ತು ಬಡ್ಡಿಯ ಪ್ರಮಾಣ ಹೆಚ್ಚು ಮಾಡಿದ್ದು ಯಾಕೆ?

ಆದಾಯ ಹೆಚ್ಚಾಗಿದ್ದರೆ ಯೋಜನಾಧಾರಿತ ವೆಚ್ಚ ಕಡಿಮೆಯಾಗಿದ್ದು ಯಾಕೆ? ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.12 ಮತ್ತು ಜಿಡಿಪಿಯ ಶೇ.2.25ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುತ್ತಿರುವಿರಿ? ಆರೋಗ್ಯಕ್ಕೆ ಬಜೆಟ್ ವೆಚ್ಚದ ಶೇ.4ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುವಿರಿ?

ರಾಜ್ಯದಲ್ಲಿ 2.4 ಲಕ್ಷ ಹುದ್ದೆಗಳು ಖಾಲಿಯಿವೆ. ಅಲ್ಲಿ ನೇಮಕಾತಿ ಮಾಡಿಕೊಳ್ಳದೆ ನಿರುದ್ಯೋಗಿಗಳನ್ನು ಸೃಷ್ಟಿಸುವ ನೀವು ಮತ್ತೊಂದೆಡೆ ನಿರುದ್ಯೋಗಿಗಳಿಗೆ 2000 ಸ್ಟೈಫಂಡ್ ಕೊಡುತ್ತೇವೆ ಎಂದು ಕೊಚ್ಚಿಕೊಳ್ಳುವುದು ಜೀವವಿರೋಧಿಯಲ್ಲವೇ? ಮುಖ್ಯವಾಗಿ ಒಂದು ಕಾಲು ಭಾಗದಷ್ಟು ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡರೆ ನಿಮ್ಮ ಯೋಜನೇತರ ವೆಚ್ಚ ಹೆಚ್ಚಾಗುತ್ತದೆ. ಅದನ್ನು ಸರಿದೂಗಿಸಲು ಆದಾಯ ಮೂಲಗಳಿಲ್ಲ. ಈ ಸತ್ಯವನ್ನು ಹೇಳಲು ನಿಮಗೆ ಧೈರ್ಯವಿಲ್ಲ.

ವೆಚ್ಚ ಕಡಿಮೆ ಮಾಡಲು ಸಬ್ಸಿಡಿಗಳನ್ನು ನಿಲ್ಲಿಸುವುದೊಂದೇ ಸರಕಾರಗಳು ಕಂಡುಕೊಂಡ ಹೊಸ ಪರಿಹಾರ ಮಾರ್ಗವಾಗಿದೆ. ಇದು ಬಜೆಟ್‌ನಲ್ಲಿ ಪ್ರತಿಫಲನವಾಗಿದೆ.

ಬಿ. ಶ್ರೀಪಾದ ಭಟ್
ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...