HomeUncategorizedಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆ

- Advertisement -
- Advertisement -

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಯ ನಂತರ ಅಧಿಕಾರಕ್ಕೆ ಬರುವ ಹೊಸ ಸರಕಾರವು ತನ್ನದೇ ಆದ ಬಜೆಟ್ ಮಂಡಿಸುತ್ತದೆ. ಈ ಕಾರಣಕ್ಕಾಗಿ ಅದಕ್ಕೂ ಎರಡು ತಿಂಗಳ ಮುಂಚೆ ಆಡಳಿತ ನಡೆಸುತ್ತಿರುವ ಸರಕಾರವು ಸಂಪೂರ್ಣ ಬಜೆಟ್ ಬದಲಿಗೆ ’ವೋಟ್ ಆನ್ ಅಕೌಂಟ್ ಮಂಡಿಸಬೇಕಾಗುತ್ತದೆ. ಆದರೆ, ೨೦೦೪ರಲ್ಲಿ ಆಗಿನ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚುನಾವಣೆಗೂ ಮುಂಚೆ ಬಜೆಟ್ ಮಂಡಿಸಿದರು. ನಂತರ ಚುನಾವಣೆ ನಡೆದು ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಹಣಕಾಸು ಮಂತ್ರಿಯಾಗಿದ್ದ ಸಿದ್ಧರಾಮಯ್ಯನವರು ಹೊಸ ಬಜೆಟ್ ಮಂಡಿಸಿದರು. ನಂತರ ಅಧಿಕಾರದಲ್ಲಿರುವ ಪ್ರತಿ ಸರಕಾರವು ಚುನಾವಣೆ ವರ್ಷದಲ್ಲಿ ಬಜೆಟ್ ಮಂಡಿಸುವ ಕೆಟ್ಟ ಪರಂಪರೆ ಮುಂದುವರಿಸುತ್ತಾ ಬರಲಾಗಿದೆ. ಈಗಿನ ಬಿಜೆಪಿ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹ ಎರಡು ತಿಂಗಳ ನಂತರ ಅದರ ಆಸ್ತಿತ್ವ ಇರದ ಚುನಾವಣಾ ಗಿಮಿಕ್ ಆದ ಬಜೆಟ್‌ನ್ನು ಮಂಡಿಸಿದ್ದಾರೆ. ಇದನ್ನು ಬಿಜೆಪಿ ಪಕ್ಷದ ಪ್ರಣಾಳಿಕೆ ಎಂದು ಕರೆಯುವುದು ಸೂಕ್ತ.

ಪ್ರತಿ ಬಜೆಟ್ ಮಂಡನೆಯ ನಂತರ ಅದರ ಖರ್ಚು ಮತ್ತು ವೆಚ್ಚ, ಹಂಚಿಕೆ, ವಿತ್ತೀಯ ಕೊರತೆ ಇತ್ಯಾದಿಗಳ ಚರ್ಚೆ ನಡೆಯುತ್ತದೆ. ಆದರೆ ಬಜೆಟ್ ಮಂಡಿಸುವ ಸರಕಾರವು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರುತ್ತದೆಯೇ ಎನ್ನುವ ಮುಖ್ಯ ಪ್ರಶ್ನೆಯೇ ಚರ್ಚೆಗೆ ಬರುವುದಿಲ್ಲ. ಈ ಬಜೆಟ್ ಎನ್ನುವುದು ಅಂದಾಜು ಲೆಕ್ಕಾಚಾರ ಮಾತ್ರ. ಆದರೆ ಒಂದು ವರ್ಷದ ನಂತರ ಪ್ರಕಟವಾಗುವ ಪರಿಷ್ಕೃತ ಅಂದಾಜು (ಆರ್‌ಇ) ಆಯಾ ವರ್ಷದ ಬಜೆಟ್‌ನ ನಿಜವಾದ ಹಣೆಬರಹವಾಗಿರುತ್ತದೆ. ಎರಡು ವರ್ಷಗಳ ನಂತರ ಮಂಡಿಸುವ ಬಜೆಟ್‌ನಲ್ಲಿ ಎರಡು ವರ್ಷ ಹಿಂದಿನ ಬಜೆಟ್‌ನ ಅಸಲಿಯತ್ತು ಗೊತ್ತಾಗುತ್ತದೆ. ಅಂದರೆ 2203-24ರ ಬಜೆಟ್‌ನಲ್ಲಿ 2021-22ರ ಬಜೆಟ್‌ನ ಕರಾರುವಕ್ಕಾದ ಅಂಕಿಅಂಶಗಳು ಗೊತ್ತಾಗುತ್ತದೆ. ಆದರೆ ಆ ವರ್ಷದ ಬಜೆಟ್‌ನ ಅಂದಾಜು ಮತ್ತು ನಂತರ ಲಭ್ಯವಾಗುವ ಅಸಲಿ ಆಯವ್ಯಯವನ್ನು ತೌಲನಿಕವಾಗಿ ನೋಡಿ ಚರ್ಚೆಯಾಗುವುದಿಲ್ಲ. ಪ್ರತಿ ವರ್ಷ ಮಂಡಿತವಾದ ಬಜೆಟ್ ಕುರಿತು ಚರ್ಚೆಯಲ್ಲಿ ಕಳೆದ ಎರಡು ವರ್ಷಗಳ ಆಶ್ವಾಸನೆಗಳು, ಹಂಚಿಕೆ, ಯೋಜನೆಗಳ ವಾಸ್ತವವೇನು ಎನ್ನುವುದು ಚರ್ಚೆಗೆ ಬರದೆ ಹಿನ್ನಲೆಗೆ ಸರಿಯುತ್ತದೆ.

ಉದಾಹರಣೆಗೆ 2020-21ರ ಬಜೆಟ್‌ನಲ್ಲಿ ಜಿಎಸ್‌ಟಿ ಪರಿಹಾರ 16,116 ಕೋಟಿ ಎಂದು ಅಂದಾಜಿಸಿದ್ದರು. ಆದರೆ ಕೇಂದ್ರ ನೀಡಿದ್ದು 13,798 ಕೋಟಿ. ಶೇ.14ರಷ್ಟು ಕಡಿತವಾಗಿತ್ತು. ಈ ಬಾರಿಯ ಬಜೆಟ್ ಎನ್ನುವ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ 2023-24ರಲ್ಲಿ ಜಿಎಸ್‌ಟಿ ಪಾಲು 37,252 ಕೋಟಿ ಎಂದು ಅಂದಾಜಿಸಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಾಜಿಸಿದ ಜಿಎಸ್‌ಟಿ ಪಾಲಿನಲ್ಲಿ ಶೇ.14ರಷ್ಟು ಕಡಿತವಾದದ್ದರ ಬಗ್ಗೆ ಮಾತಿಲ್ಲ. ಈ ಬಾರಿಯೂ ನೀವು ಹೇಳುವ ಮೊತ್ತ ರಾಜ್ಯದ ಬೊಕ್ಕಸಕ್ಕೆ ಸೇರುತ್ತದೆ ಎನ್ನುವ ಖಾತರಿ ಏನು ಎಂದು ಯಾರೂ ಕೇಳುತ್ತಿಲ್ಲ. 2022-23ರ ಬಜೆಟ್‌ನಲ್ಲಿ ಕೇಂದ್ರ ಸರಕಾರದ ಸಹಾಯ ಅನುದಾನದ ಪ್ರಮಾಣ ಶೇ.6ರಷ್ಟು ಎಂದು ಅಂದಾಜಿಸಿದ್ದರು. ಆದರೆ 2023-24ರಲ್ಲಿ ಅದು ಶೇ.4ಕ್ಕೆ ಕುಸಿದಿದೆ. ಇದನ್ನು ಪ್ರಶ್ನಿಸಬೇಕಲ್ಲವೇ?

ಈ ಬಾರಿ ಬಜೆಟ್‌ನಲ್ಲಿ 77,750 ಕೋಟಿ ವಾರ್ಷಿಕ ಸಾಲ ಮತ್ತು ಒಟ್ಟು ಸಾಲ 5.64 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. 2020-21ರಲ್ಲಿ ವಾರ್ಷಿಕ ಸಾಲ 84,527 ಕೋಟಿ, 2021-22ರಲ್ಲಿ 80,767 ಕೋಟಿ, 2022-22ರಲ್ಲಿ 67,000 ಕೋಟಿ ಎಂದು ಅಂದಾಜಿಸಿದ್ದರು. ಅಂದರೆ ಒಟ್ಟು 3.10 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಇದರ ಹೊರತಾಗಿ 2021ರಲ್ಲಿ ಬಜೆಟ್‌ನ ಹೊರಗೆ ಅಂದರೆ ಸಾರ್ವಜನಿಕ ಉದ್ಯಮಗಳ ಮೂಲಕ 10,000 ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಈ ಸಾಲವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸುವುದಿಲ್ಲ.2020-21 ರಲ್ಲಿ 23,620 ಕೋಟಿ ಬಡ್ಡಿ, 2021-22ರಲ್ಲಿ 24,983 ಕೋಟಿ, 2022-23ರಲ್ಲಿ 29,394 ಕೋಟಿ ಬಡ್ಡಿ ಕಟ್ಟಿದ್ದಾರೆ. 2023-24ರಲ್ಲಿ 34,023 ಕೋಟಿ ಬಡ್ಡಿ ಎಂದು ಅಂದಾಜಿಸಿದ್ದಾರೆ. ಅಂದರೆ ಒಟ್ಟು 1.12 ಲಕ್ಷ ಕೋಟಿ ಬಡ್ಡಿ ಕಟ್ಟಲಾಗಿದೆ. 2019-20ರಲ್ಲಿ ಶೇ.10.6ರಷ್ಟಿದ್ದ ಬಡ್ಡಿಯ ಪ್ರಮಾಣವು 2023-24ರ ಹೊತ್ತಿಗೆ ಶೇ.15.1ರಷ್ಟಾಗಿದೆ. ಮತ್ತೊಂದೆಡೆ 2021-22ರಲ್ಲಿ ಯೋಜನೇತರ ವೆಚ್ಚ 97,150. 2022-23 ಪರಿಷ್ಕೃತ ಯೋಜನೇತರ ವೆಚ್ಚ 1.16ಲಕ್ಷ ಕೋಟಿಯಾಗಿದೆ. 2023-24ರಲ್ಲಿ ಯೋಜನೇತರ ವೆಚ್ಚ 20.25 ಲಕ್ಷ ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಮೂರು ವರ್ಷಗಳ ಹಿಂದೆ ಶೇ.45ರಷ್ಟಿದ್ದ ಯೋಜನೇತರ ವೆಚ್ಚ 2023-24ರ ಹೊತ್ತಿಗೆ ಶೇ.60ರಷ್ಟಾಗಿದೆ. ಇದೇ ಸಂದರ್ಭದಲ್ಲಿ 2021-22ರಲ್ಲಿ ಯೋಜನಾಧಾರಿತ ವೆಚ್ಚ 74,879 ಕೋಟಿ, 2022-23 ಪರಿಷ್ಕೃತ ಯೋಜನಾಧಾರಿತ ವೆಚ್ಚ 69,766 ಕೋಟಿಯಾಗಿದೆ. 2023-24ರಲ್ಲಿ ಯೋಜನಾಧಾರಿತ ವೆಚ್ಚ 71,570 ಕೋಟಿ ಎಂದು ಅಂದಾಜಿಸಿದ್ದಾರೆ. ಅಂದರೆ ಯೋಜನಾಧಾರಿತ ವೆಚ್ಚ ಮೂರು ವರ್ಷಗಳಲ್ಲಿ ಶೇ.3ರಷ್ಟು ಕಡಿಮೆಯಾಗಿದೆ. ಮೇಲಿನ ಅಂಕಿಅಂಶಗಳನ್ನು ಒಂದಕ್ಕೊಂದು ತಾಳೆಯಾಗುವಂತೆ ಜೋಡಿಸಿಕೊಂಡಾಗ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಕೇಳಬೇಕಿರುವ ಪ್ರಶ್ನೆಗಳು

ಇದನ್ನೂ ಓದಿ: ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಆದಾಯ ಹೆಚ್ಚಾಗಿದೆ ಎಂದು ಹೇಳಿಕೊಳ್ಳುವ ನೀವು ಸಾಲ ಮತ್ತು ಬಡ್ಡಿಯ ಪ್ರಮಾಣ ಹೆಚ್ಚು ಮಾಡಿದ್ದು ಯಾಕೆ?

ಆದಾಯ ಹೆಚ್ಚಾಗಿದ್ದರೆ ಯೋಜನಾಧಾರಿತ ವೆಚ್ಚ ಕಡಿಮೆಯಾಗಿದ್ದು ಯಾಕೆ? ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.12 ಮತ್ತು ಜಿಡಿಪಿಯ ಶೇ.2.25ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುತ್ತಿರುವಿರಿ? ಆರೋಗ್ಯಕ್ಕೆ ಬಜೆಟ್ ವೆಚ್ಚದ ಶೇ.4ರಷ್ಟು ಮಾತ್ರ ಯಾಕೆ ಹಂಚಿಕೆ ಮಾಡುವಿರಿ?

ರಾಜ್ಯದಲ್ಲಿ 2.4 ಲಕ್ಷ ಹುದ್ದೆಗಳು ಖಾಲಿಯಿವೆ. ಅಲ್ಲಿ ನೇಮಕಾತಿ ಮಾಡಿಕೊಳ್ಳದೆ ನಿರುದ್ಯೋಗಿಗಳನ್ನು ಸೃಷ್ಟಿಸುವ ನೀವು ಮತ್ತೊಂದೆಡೆ ನಿರುದ್ಯೋಗಿಗಳಿಗೆ 2000 ಸ್ಟೈಫಂಡ್ ಕೊಡುತ್ತೇವೆ ಎಂದು ಕೊಚ್ಚಿಕೊಳ್ಳುವುದು ಜೀವವಿರೋಧಿಯಲ್ಲವೇ? ಮುಖ್ಯವಾಗಿ ಒಂದು ಕಾಲು ಭಾಗದಷ್ಟು ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡರೆ ನಿಮ್ಮ ಯೋಜನೇತರ ವೆಚ್ಚ ಹೆಚ್ಚಾಗುತ್ತದೆ. ಅದನ್ನು ಸರಿದೂಗಿಸಲು ಆದಾಯ ಮೂಲಗಳಿಲ್ಲ. ಈ ಸತ್ಯವನ್ನು ಹೇಳಲು ನಿಮಗೆ ಧೈರ್ಯವಿಲ್ಲ.

ವೆಚ್ಚ ಕಡಿಮೆ ಮಾಡಲು ಸಬ್ಸಿಡಿಗಳನ್ನು ನಿಲ್ಲಿಸುವುದೊಂದೇ ಸರಕಾರಗಳು ಕಂಡುಕೊಂಡ ಹೊಸ ಪರಿಹಾರ ಮಾರ್ಗವಾಗಿದೆ. ಇದು ಬಜೆಟ್‌ನಲ್ಲಿ ಪ್ರತಿಫಲನವಾಗಿದೆ.

ಬಿ. ಶ್ರೀಪಾದ ಭಟ್
ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...