Homeಚಳವಳಿಕೃಷಿ ಮಸೂದೆ ವಿರೋಧಿಸಿ ಸೆ.25ಕ್ಕೆ ಕರ್ನಾಟಕ ಬಂದ್: ಕರವೇ ಬೆಂಬಲ

ಕೃಷಿ ಮಸೂದೆ ವಿರೋಧಿಸಿ ಸೆ.25ಕ್ಕೆ ಕರ್ನಾಟಕ ಬಂದ್: ಕರವೇ ಬೆಂಬಲ

”ರೈತರ ಭೂಮಿ ಕಸಿದು, ಕಾರ್ಪೊರೇಟರ್‌ಗಳಿಗೆ ನೀಡಿ ರೈತರನ್ನು ಕೂಲಿಯಾಳುಗಳನ್ನಾಗಿಸಲು ಸರ್ಕಾರ ಮುಂದಾಗಿದೆ. ಸರ್ಕಾರ ನೀತಿಗಳನ್ನು ಖಂಡಿಸಿ ರೈತ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ನೀಡುತ್ತೇವೆ’ - ಕರವೇ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟೆಂಬರ್‌ 25ರಂದು ಅಖಿಲ ಭಾರತ‌ ಬಂದ್ ‌ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿಯೂ ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ರೈತ ಸಂಘಟನೆಗಳು ನೀಡಿರುವ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಕೂಡ ಬೆಂಬಲ ವ್ಯಕ್ತಪಡಿಸಿದೆ.

ಈಗಾಗಲೇ ಕಳೆದ 2 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಜನತಾ ಅಧಿವೇಶನದ ಹೆಸರಿನಲ್ಲಿ ಐಕ್ಯಹೋರಾಟ ನಡೆಸಲಾಗುತ್ತಿದೆ. ರೈತರ ವಿರುದ್ಧವಿರುವ, ಕಾರ್ಪೊರೇಟ್ ಕಂಪನಿಗಳಿಗೆ ಪ್ರಯೋಜನ ನೀಡುವ ಈ ಸುಗ್ರಿವಾಜ್ಞೆಗಳನ್ನು ಹಿಂಪಡೆಯಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಲ್ಲಿ ಇಡೀ ಕೃಷಿಕ್ಷೇತ್ರಕ್ಕೆ ದೊಡ್ಡ ಬಿಕ್ಕಟ್ಟು ಎದುರಾಗಲಿದೆ. ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಲಕ್ಷಾಂತರ ರೈತರು ಕೃಷಿಯನ್ನೇ ಅವಲಂಬಿಸಿದ್ದಾರೆ. ಅವರ ಭೂಮಿ ಕಸಿದು, ಕಾರ್ಪೊರೇಟರ್‌ಗಳಿಗೆ ನೀಡಿ ರೈತರನ್ನು ಕೂಲಿಯಾಳುಗಳನ್ನಾಗಿಸಲು ಸರ್ಕಾರ ಮುಂದಾಗಿದೆ. ಸರ್ಕಾರ ನೀತಿಗಳನ್ನು ಖಂಡಿಸಿ ರೈತ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ನೀಡುತ್ತೇವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಬಂದ್‌ನಲ್ಲಿ ಪಾಲ್ಗೊಂಡು ಪ್ರತಿಭಟನೆ ವ್ಯಕ್ತಪಡಿಸಲಿದ್ದಾರೆ ಎಂದಿದ್ದಾರೆ.

ದೇವರಾಜ್ ಅರಸು ಅವರು ಜಾರಿಗೆ ತಂದ ಉಳುವವನೇ ಭೂಮಿಯ ಒಡೆಯ ಎಂಬ ಮಹೋನ್ನತ ಆದರ್ಶ ನೀತಿಯನ್ನು ಈಗಿನ ಸರ್ಕಾರ ತಿರುಚಿ ದುಡ್ಡಿದ್ದವನೇ ಭೂಮಿಯ ಒಡೆಯ ಎಂಬ ನೀತಿಯನ್ನು ತಂದು ಜನರನ್ನು ಭಿಕ್ಷುಕರನ್ನಾಗಿಸುವ ಕ್ರೌರ್ಯಕ್ಕೆ ಸರ್ಕಾರ ಇಳಿದಿದೆ ಎಂದು ಟಿ.ಎ.ನಾರಾಯಣ ಆರೋಪಿಸಿದ್ದಾರೆ.

Posted by ಕರ್ನಾಟಕ ರಕ್ಷಣಾ ವೇದಿಕೆ – Karnataka Rakshana Vedike on Tuesday, September 22, 2020

ಇತ್ತ ಕೃಷಿ ಮಸೂದೆಗಳನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಯುತ್ತಿರುವ ಪಂಜಾಬ್‌ನಲ್ಲಿಯೂ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ ಬಂದ್ ನಡೆಸಲಿವೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...