Homeಕರ್ನಾಟಕಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಾಗ ಮೇ ತಿಂಗಳಿನಲ್ಲಿ ಕರ್ನಾಟಕ ಸರ್ಕಾರವು ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಯು ಕಿಟ್‌ಗಳನ್ನು ಖರೀದಿ ಮಾಡಿದ್ದು, ಬೇರೆ ರಾಜ್ಯಗಳು ಪಾವತಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಕರ್ನಾಟಕ ಪಾವತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಒಡಿಶಾ ಮತ್ತು ಗುಜರಾತ್‌ನಂತಹ ರಾಜ್ಯಗಳು ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಪ್ರತ್ಯೇಕವಾಗಿ ಖರೀದಿಸಿದರೆ, ಕರ್ನಾಟಕದ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಇವೆರಡನ್ನೂ ಜೊತೆಯಾಗಿ ಹೆಚ್ಚಿನ ಬೆಲೆಗೆ ಖರೀದಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೈದರಾಬಾದ್ ಮೂಲದ ಕಂಪನಿಯೊಂದರಿಂದ ಒಡಿಶಾ ರಾಜ್ಯವು ಆರ್‌ಟಿ-ಪಿಸಿಆರ್ ಕಿಟ್‌ನ್ನು ಪ್ರತಿ ಯೂನಿಟ್‌ಗೆ 550 ರೂ.ಗೆ ಖರೀದಿಸಿದರೆ, ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗೆ ತಲಾ 100 ರೂ. ಪಾವತಿಸಿದೆ. ಗುಜರಾತ್ 25,000 ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಅದೇ ಸಂಸ್ಥೆಯಿಂದ ಪ್ರತಿ ಯೂನಿಟ್‌ಗೆ 179 ರೂ ನಂತೆ ಖರೀದಿಸಿದೆ. ಚತ್ತೀಸ್‌ಘಡ ಸರ್ಕಾರವು ಪ್ರತಿ ಆರ್‌ಟಿ-ಪಿಸಿಆರ್ ಕಿಟ್‌ಗೆ 571.2 ರೂ ನಂತೆ ಖರೀದಿಸಿದೆ.

ಆದರೆ ಅದೇ ಹೈದರಾಬಾದ್ ಮೂಲದ ಸಂಸ್ಥೆಯು ತಯಾರಿಸಿದ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಬೆಂಗಳೂರು ಮೂಲದ ಕಂಪನಿಯ ಮೂಲಕ 1,120 ರೂಗೆ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಖರೀದಿಸಿದೆ. ಪ್ರತಿ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳ ಬೆಲೆ ನಮೂದಿಸದಿದ್ದರೂ ಒಟ್ಟಾರೆಯಾಗಿ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಮೇ ತಿಂಗಳ ಕೊನೆಯಲ್ಲಿ 3.92 ಕೋಟಿ ರೂ.ಗಳ ವೆಚ್ಚದಲ್ಲಿ 35,000 ಪರೀಕ್ಷಾ ಕಿಟ್‌ಗಳನ್ನು ಖರೀದಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದರೂ ಕೂಡ ಯಾವುದೇ ತನಿಖೆ ನಡೆದಿಲ್ಲ. “ಎಸಿಬಿಯು ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಕೋರಿದ್ದು, ಎಫ್ಐಆರ್ ದಾಖಲಿಸಲು ಸರ್ಕಾರ ಇನ್ನೂ ಅನುಮತಿ ನೀಡಿಲ್ಲ” ಎನ್ನಲಾಗಿದೆ.

ಒಟ್ಟಾರೆಯಾಗಿ ಮೇಲ್ನೋಟಕ್ಕೆ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ದುಬಾರಿ ಬೆಲೆ ತೆತ್ತು ಖರೀದಿಸಿರುವುದು ಕಂಡುಬಂದಿದೆ. ಇದು ಸಾಕಷ್ಟು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...