Homeಕರ್ನಾಟಕಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಾಗ ಮೇ ತಿಂಗಳಿನಲ್ಲಿ ಕರ್ನಾಟಕ ಸರ್ಕಾರವು ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಯು ಕಿಟ್‌ಗಳನ್ನು ಖರೀದಿ ಮಾಡಿದ್ದು, ಬೇರೆ ರಾಜ್ಯಗಳು ಪಾವತಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಕರ್ನಾಟಕ ಪಾವತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಒಡಿಶಾ ಮತ್ತು ಗುಜರಾತ್‌ನಂತಹ ರಾಜ್ಯಗಳು ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಪ್ರತ್ಯೇಕವಾಗಿ ಖರೀದಿಸಿದರೆ, ಕರ್ನಾಟಕದ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಇವೆರಡನ್ನೂ ಜೊತೆಯಾಗಿ ಹೆಚ್ಚಿನ ಬೆಲೆಗೆ ಖರೀದಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೈದರಾಬಾದ್ ಮೂಲದ ಕಂಪನಿಯೊಂದರಿಂದ ಒಡಿಶಾ ರಾಜ್ಯವು ಆರ್‌ಟಿ-ಪಿಸಿಆರ್ ಕಿಟ್‌ನ್ನು ಪ್ರತಿ ಯೂನಿಟ್‌ಗೆ 550 ರೂ.ಗೆ ಖರೀದಿಸಿದರೆ, ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗೆ ತಲಾ 100 ರೂ. ಪಾವತಿಸಿದೆ. ಗುಜರಾತ್ 25,000 ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಅದೇ ಸಂಸ್ಥೆಯಿಂದ ಪ್ರತಿ ಯೂನಿಟ್‌ಗೆ 179 ರೂ ನಂತೆ ಖರೀದಿಸಿದೆ. ಚತ್ತೀಸ್‌ಘಡ ಸರ್ಕಾರವು ಪ್ರತಿ ಆರ್‌ಟಿ-ಪಿಸಿಆರ್ ಕಿಟ್‌ಗೆ 571.2 ರೂ ನಂತೆ ಖರೀದಿಸಿದೆ.

ಆದರೆ ಅದೇ ಹೈದರಾಬಾದ್ ಮೂಲದ ಸಂಸ್ಥೆಯು ತಯಾರಿಸಿದ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಬೆಂಗಳೂರು ಮೂಲದ ಕಂಪನಿಯ ಮೂಲಕ 1,120 ರೂಗೆ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಖರೀದಿಸಿದೆ. ಪ್ರತಿ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳ ಬೆಲೆ ನಮೂದಿಸದಿದ್ದರೂ ಒಟ್ಟಾರೆಯಾಗಿ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಮೇ ತಿಂಗಳ ಕೊನೆಯಲ್ಲಿ 3.92 ಕೋಟಿ ರೂ.ಗಳ ವೆಚ್ಚದಲ್ಲಿ 35,000 ಪರೀಕ್ಷಾ ಕಿಟ್‌ಗಳನ್ನು ಖರೀದಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದರೂ ಕೂಡ ಯಾವುದೇ ತನಿಖೆ ನಡೆದಿಲ್ಲ. “ಎಸಿಬಿಯು ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಕೋರಿದ್ದು, ಎಫ್ಐಆರ್ ದಾಖಲಿಸಲು ಸರ್ಕಾರ ಇನ್ನೂ ಅನುಮತಿ ನೀಡಿಲ್ಲ” ಎನ್ನಲಾಗಿದೆ.

ಒಟ್ಟಾರೆಯಾಗಿ ಮೇಲ್ನೋಟಕ್ಕೆ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ದುಬಾರಿ ಬೆಲೆ ತೆತ್ತು ಖರೀದಿಸಿರುವುದು ಕಂಡುಬಂದಿದೆ. ಇದು ಸಾಕಷ್ಟು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...