Homeಕರ್ನಾಟಕಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಾಗ ಮೇ ತಿಂಗಳಿನಲ್ಲಿ ಕರ್ನಾಟಕ ಸರ್ಕಾರವು ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಯು ಕಿಟ್‌ಗಳನ್ನು ಖರೀದಿ ಮಾಡಿದ್ದು, ಬೇರೆ ರಾಜ್ಯಗಳು ಪಾವತಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಕರ್ನಾಟಕ ಪಾವತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಒಡಿಶಾ ಮತ್ತು ಗುಜರಾತ್‌ನಂತಹ ರಾಜ್ಯಗಳು ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಪ್ರತ್ಯೇಕವಾಗಿ ಖರೀದಿಸಿದರೆ, ಕರ್ನಾಟಕದ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಇವೆರಡನ್ನೂ ಜೊತೆಯಾಗಿ ಹೆಚ್ಚಿನ ಬೆಲೆಗೆ ಖರೀದಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೈದರಾಬಾದ್ ಮೂಲದ ಕಂಪನಿಯೊಂದರಿಂದ ಒಡಿಶಾ ರಾಜ್ಯವು ಆರ್‌ಟಿ-ಪಿಸಿಆರ್ ಕಿಟ್‌ನ್ನು ಪ್ರತಿ ಯೂನಿಟ್‌ಗೆ 550 ರೂ.ಗೆ ಖರೀದಿಸಿದರೆ, ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗೆ ತಲಾ 100 ರೂ. ಪಾವತಿಸಿದೆ. ಗುಜರಾತ್ 25,000 ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಅದೇ ಸಂಸ್ಥೆಯಿಂದ ಪ್ರತಿ ಯೂನಿಟ್‌ಗೆ 179 ರೂ ನಂತೆ ಖರೀದಿಸಿದೆ. ಚತ್ತೀಸ್‌ಘಡ ಸರ್ಕಾರವು ಪ್ರತಿ ಆರ್‌ಟಿ-ಪಿಸಿಆರ್ ಕಿಟ್‌ಗೆ 571.2 ರೂ ನಂತೆ ಖರೀದಿಸಿದೆ.

ಆದರೆ ಅದೇ ಹೈದರಾಬಾದ್ ಮೂಲದ ಸಂಸ್ಥೆಯು ತಯಾರಿಸಿದ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಬೆಂಗಳೂರು ಮೂಲದ ಕಂಪನಿಯ ಮೂಲಕ 1,120 ರೂಗೆ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಖರೀದಿಸಿದೆ. ಪ್ರತಿ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳ ಬೆಲೆ ನಮೂದಿಸದಿದ್ದರೂ ಒಟ್ಟಾರೆಯಾಗಿ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಮೇ ತಿಂಗಳ ಕೊನೆಯಲ್ಲಿ 3.92 ಕೋಟಿ ರೂ.ಗಳ ವೆಚ್ಚದಲ್ಲಿ 35,000 ಪರೀಕ್ಷಾ ಕಿಟ್‌ಗಳನ್ನು ಖರೀದಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದರೂ ಕೂಡ ಯಾವುದೇ ತನಿಖೆ ನಡೆದಿಲ್ಲ. “ಎಸಿಬಿಯು ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಕೋರಿದ್ದು, ಎಫ್ಐಆರ್ ದಾಖಲಿಸಲು ಸರ್ಕಾರ ಇನ್ನೂ ಅನುಮತಿ ನೀಡಿಲ್ಲ” ಎನ್ನಲಾಗಿದೆ.

ಒಟ್ಟಾರೆಯಾಗಿ ಮೇಲ್ನೋಟಕ್ಕೆ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ದುಬಾರಿ ಬೆಲೆ ತೆತ್ತು ಖರೀದಿಸಿರುವುದು ಕಂಡುಬಂದಿದೆ. ಇದು ಸಾಕಷ್ಟು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....