Homeಕರ್ನಾಟಕಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಾಗ ಮೇ ತಿಂಗಳಿನಲ್ಲಿ ಕರ್ನಾಟಕ ಸರ್ಕಾರವು ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಯು ಕಿಟ್‌ಗಳನ್ನು ಖರೀದಿ ಮಾಡಿದ್ದು, ಬೇರೆ ರಾಜ್ಯಗಳು ಪಾವತಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಕರ್ನಾಟಕ ಪಾವತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಒಡಿಶಾ ಮತ್ತು ಗುಜರಾತ್‌ನಂತಹ ರಾಜ್ಯಗಳು ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಪ್ರತ್ಯೇಕವಾಗಿ ಖರೀದಿಸಿದರೆ, ಕರ್ನಾಟಕದ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಇವೆರಡನ್ನೂ ಜೊತೆಯಾಗಿ ಹೆಚ್ಚಿನ ಬೆಲೆಗೆ ಖರೀದಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೈದರಾಬಾದ್ ಮೂಲದ ಕಂಪನಿಯೊಂದರಿಂದ ಒಡಿಶಾ ರಾಜ್ಯವು ಆರ್‌ಟಿ-ಪಿಸಿಆರ್ ಕಿಟ್‌ನ್ನು ಪ್ರತಿ ಯೂನಿಟ್‌ಗೆ 550 ರೂ.ಗೆ ಖರೀದಿಸಿದರೆ, ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗೆ ತಲಾ 100 ರೂ. ಪಾವತಿಸಿದೆ. ಗುಜರಾತ್ 25,000 ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಅದೇ ಸಂಸ್ಥೆಯಿಂದ ಪ್ರತಿ ಯೂನಿಟ್‌ಗೆ 179 ರೂ ನಂತೆ ಖರೀದಿಸಿದೆ. ಚತ್ತೀಸ್‌ಘಡ ಸರ್ಕಾರವು ಪ್ರತಿ ಆರ್‌ಟಿ-ಪಿಸಿಆರ್ ಕಿಟ್‌ಗೆ 571.2 ರೂ ನಂತೆ ಖರೀದಿಸಿದೆ.

ಆದರೆ ಅದೇ ಹೈದರಾಬಾದ್ ಮೂಲದ ಸಂಸ್ಥೆಯು ತಯಾರಿಸಿದ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಬೆಂಗಳೂರು ಮೂಲದ ಕಂಪನಿಯ ಮೂಲಕ 1,120 ರೂಗೆ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಖರೀದಿಸಿದೆ. ಪ್ರತಿ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳ ಬೆಲೆ ನಮೂದಿಸದಿದ್ದರೂ ಒಟ್ಟಾರೆಯಾಗಿ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಮೇ ತಿಂಗಳ ಕೊನೆಯಲ್ಲಿ 3.92 ಕೋಟಿ ರೂ.ಗಳ ವೆಚ್ಚದಲ್ಲಿ 35,000 ಪರೀಕ್ಷಾ ಕಿಟ್‌ಗಳನ್ನು ಖರೀದಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದರೂ ಕೂಡ ಯಾವುದೇ ತನಿಖೆ ನಡೆದಿಲ್ಲ. “ಎಸಿಬಿಯು ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಕೋರಿದ್ದು, ಎಫ್ಐಆರ್ ದಾಖಲಿಸಲು ಸರ್ಕಾರ ಇನ್ನೂ ಅನುಮತಿ ನೀಡಿಲ್ಲ” ಎನ್ನಲಾಗಿದೆ.

ಒಟ್ಟಾರೆಯಾಗಿ ಮೇಲ್ನೋಟಕ್ಕೆ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ದುಬಾರಿ ಬೆಲೆ ತೆತ್ತು ಖರೀದಿಸಿರುವುದು ಕಂಡುಬಂದಿದೆ. ಇದು ಸಾಕಷ್ಟು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...