Homeಕರ್ನಾಟಕಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಾಗ ಮೇ ತಿಂಗಳಿನಲ್ಲಿ ಕರ್ನಾಟಕ ಸರ್ಕಾರವು ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಯು ಕಿಟ್‌ಗಳನ್ನು ಖರೀದಿ ಮಾಡಿದ್ದು, ಬೇರೆ ರಾಜ್ಯಗಳು ಪಾವತಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಕರ್ನಾಟಕ ಪಾವತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಒಡಿಶಾ ಮತ್ತು ಗುಜರಾತ್‌ನಂತಹ ರಾಜ್ಯಗಳು ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಪ್ರತ್ಯೇಕವಾಗಿ ಖರೀದಿಸಿದರೆ, ಕರ್ನಾಟಕದ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಇವೆರಡನ್ನೂ ಜೊತೆಯಾಗಿ ಹೆಚ್ಚಿನ ಬೆಲೆಗೆ ಖರೀದಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೈದರಾಬಾದ್ ಮೂಲದ ಕಂಪನಿಯೊಂದರಿಂದ ಒಡಿಶಾ ರಾಜ್ಯವು ಆರ್‌ಟಿ-ಪಿಸಿಆರ್ ಕಿಟ್‌ನ್ನು ಪ್ರತಿ ಯೂನಿಟ್‌ಗೆ 550 ರೂ.ಗೆ ಖರೀದಿಸಿದರೆ, ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗೆ ತಲಾ 100 ರೂ. ಪಾವತಿಸಿದೆ. ಗುಜರಾತ್ 25,000 ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಅದೇ ಸಂಸ್ಥೆಯಿಂದ ಪ್ರತಿ ಯೂನಿಟ್‌ಗೆ 179 ರೂ ನಂತೆ ಖರೀದಿಸಿದೆ. ಚತ್ತೀಸ್‌ಘಡ ಸರ್ಕಾರವು ಪ್ರತಿ ಆರ್‌ಟಿ-ಪಿಸಿಆರ್ ಕಿಟ್‌ಗೆ 571.2 ರೂ ನಂತೆ ಖರೀದಿಸಿದೆ.

ಆದರೆ ಅದೇ ಹೈದರಾಬಾದ್ ಮೂಲದ ಸಂಸ್ಥೆಯು ತಯಾರಿಸಿದ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಬೆಂಗಳೂರು ಮೂಲದ ಕಂಪನಿಯ ಮೂಲಕ 1,120 ರೂಗೆ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಖರೀದಿಸಿದೆ. ಪ್ರತಿ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳ ಬೆಲೆ ನಮೂದಿಸದಿದ್ದರೂ ಒಟ್ಟಾರೆಯಾಗಿ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಮೇ ತಿಂಗಳ ಕೊನೆಯಲ್ಲಿ 3.92 ಕೋಟಿ ರೂ.ಗಳ ವೆಚ್ಚದಲ್ಲಿ 35,000 ಪರೀಕ್ಷಾ ಕಿಟ್‌ಗಳನ್ನು ಖರೀದಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದರೂ ಕೂಡ ಯಾವುದೇ ತನಿಖೆ ನಡೆದಿಲ್ಲ. “ಎಸಿಬಿಯು ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಕೋರಿದ್ದು, ಎಫ್ಐಆರ್ ದಾಖಲಿಸಲು ಸರ್ಕಾರ ಇನ್ನೂ ಅನುಮತಿ ನೀಡಿಲ್ಲ” ಎನ್ನಲಾಗಿದೆ.

ಒಟ್ಟಾರೆಯಾಗಿ ಮೇಲ್ನೋಟಕ್ಕೆ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ದುಬಾರಿ ಬೆಲೆ ತೆತ್ತು ಖರೀದಿಸಿರುವುದು ಕಂಡುಬಂದಿದೆ. ಇದು ಸಾಕಷ್ಟು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...