Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...