Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...