Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

ಮೋದಿ ಸ್ವಾಗತಿಸುವ ಫ್ಲೆಕ್ಸ್ ಬೋರ್ಡ್‌; ದಂಡ ವಿಧಿಸಿದ ಬಿಜೆಪಿ ಆಡಳಿತದ ತಿರುವನಂತಪುರಂ ಮಹಾನಗರ ಪಾಲಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದಂತೆ ನಗರದಲ್ಲಿನ ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ಆಡಳಿತವಿರುವ ತಿರುವನಂತಪುರಂ ಮಹಾನಗರ ಪಾಲಿಕೆ ತನ್ನದೇ ಪಕ್ಷಕ್ಕೆ ದಂಡ ವಿಧಿಸಿದೆ. ಪೊಲೀಸ್ ಠಾಣೆಯಲ್ಲಿ ದೂರು...

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ...

ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಸಾಮಾಜಿಕ ಮಾಧ್ಯಮ ನಿಯಂತ್ರಣ ಅಗತ್ಯ: ಕೈಲಾಶ್‌ ಸತ್ಯಾರ್ಥಿ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅಪ್ರಾಪ್ತರಿಗೆ ಸಾಮಾಜಿಕ ಮಾಧ್ಯಮದ ನಿಯಂತ್ರಣ ನಿರ್ಧಾರವನ್ನು ಬೆಂಬಲಿಸಿದ್ದಾರೆ. 'ಇದರ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು, ಸಕಾರಾತ್ಮಕವಾಗಿ ನೈತಿಕ ಮೌಲ್ಯಗಳನ್ನು ಹರಡಲು ಮತ್ತು ಸಮುದಾಯಗಳನ್ನು...

ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ

ನ್ಯೂಸ್ ಲಾಂಡ್ರಿ ವ್ಯವಸ್ಥಾಪಕ ಸಂಪಾದಕಿ ಮನೀಷಾ ಪಾಂಡೆ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ, ಕೋರ್ಟ್‌ನ ಮೌಖಿಕ ಅವಲೋಕನಗಳ ಕುರಿತು ಕೆಲ ಮಾಧ್ಯಮಗಳ ವರದಿ ಮಾಡಿದ ರೀತಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅಸಮಾಧಾನ...

ಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ ಆರೋಪ

ಪ್ರತ್ಯೇಕ ರಾಜ್ಯಗಳಲ್ಲಿ ಇಬ್ಬರು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ದೇಶದಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರ ವಿರುದ್ದ ಹೆಚ್ಚುತ್ತಿರುವ ಹಿಂಸಾಚಾರದ ಭಾಗವಾಗಿ ಇಬ್ಬರನ್ನೂ ಕೊಲ್ಲಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿವೆ. ಆಂಧ್ರ ಪ್ರದೇಶದ...

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್...

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ...

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ...

ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

ಕನ್ನಡ ಮುಖ್ಯವಾಹಿನಿ ಸಿನೆಮಾ ಅಪರೂಪಕ್ಕೊಮ್ಮೆ ಮಾತ್ರ ಸಮಾಜದ ಮೂಲಭೂತ ಪ್ರಶ್ನೆಗಳತ್ತ ನೇರವಾಗಿ ಮುಖ ಮಾಡುತ್ತದೆ. ಜಾತಿ, ಭೂಮಿ, ಅಧಿಕಾರ ಎಲ್ಲವನ್ನು ಒಟ್ಟಿಗೆ ಹಿಡಿದು ಪ್ರಶ್ನಿಸುವ ಚಿತ್ರಗಳು ಇನ್ನೂ ವಿರಳ. ನಿರ್ದೇಶಕ–ಕಥಾಲೇಖಕ ಜಡೆಶ್ ಕೆ....

ಕುಡುಪು ಗುಂಪು ಹತ್ಯೆ : ಮತ್ತೊಬ್ಬ ಆರೋಪಿಗೆ ಜಾಮೀನು

ಮಂಗಳೂರು ಹೊರವಲಯದ ಕುಡುಪು ಬಳಿ 2025ರ ಏಪ್ರಿಲ್ 27ರಂದು ನಡೆದ ಕೇರಳ ಮೂಲದ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಆರೋಪಿ ನಟೇಶ್ ಕುಮಾರ್‌ಗೆ ಹೈಕೋರ್ಟ್ ಶುಕ್ರವಾರ (ಜ.23) ಜಾಮೀನು ಮಂಜೂರು...