Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...