Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ 'ನೋ ಕಿಂಗ್ಸ್' ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...