Homeಕರ್ನಾಟಕಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಸಿಂಧಗಿಯಲ್ಲಿ ಬಿಜೆಪಿಯವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂ. ನೀಡಿದ್ದಾರೆ- ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆ ಕಣದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದರೂ ಪಕ್ಷಗಳ ನಡುವಿನ ಕೆಸರೆರಚಾಟ ಮಾತ್ರ ನಿಂತಿಲ್ಲ. ಬಹಿರಂಗ ಪ್ರಚಾರ ಅಂತ್ಯವಾದ ಮೇಲೆಯೂ ಆಡಳಿತಾರೂಢ ಬಿಜೆಪಿಯು ಸಿಂಧಗಿ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

“ಸಚಿವರಾದ ವಿ.ಸೋಮಣ್ಣ, ಸಿ.ಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಏಳೆಂಟು ಮಂತ್ರಿಗಳು ಇವತ್ತಿಗೂ ಸಮೀಪದ ರೆಸಾರ್ಟ್‌ನಲ್ಲಿ ಬಿಡು ಬಿಟ್ಟಿದ್ದಾರೆ. ಪ್ರತಿ ಹಳ್ಳಿಗೆ 30 ರಿಂದ 40 ಲಕ್ಷ ರೂಪಾಯಿ ಹಂಚಿಕೆ ಆಗಿದೆ. ಖುದ್ದು ಸಚಿವರೇ ಈ ಕೃತ್ಯದಲ್ಲಿ ತೊಡಗಿರುವ ಮಾಹಿತಿಯಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷದಿಂದಲೂ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಕೆಲಸ ನಡೆದಿದೆ” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

’ಕೆಲ ಹಳ್ಳಿಗಳಲ್ಲಿ ಐದರಿಂದ ಆರು ಮತಗಟ್ಟೆಗಳಿವೆ. ಪ್ರತೀ ಮತಗಟ್ಟೆಗೆ ತಲಾ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಒಂದು ಮತಕ್ಕೆ 1,000 ರೂಪಾಯಿ ನಿಗದಿ ಮಾಡಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆ ಮಾಡಿದ ಮೇಲೆ ಎಲ್ಲ ಚುನಾವಣೆಗಳನ್ನು ಗೆದ್ದಿರುವುದು ಹಣದ ಹೊಳೆ ಹರಿಸಿಯೇ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಮುಂದುವರಿದು, ’ಎರಡೂ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಗೆಲ್ಲಬೇಕು ಎಂದು ಹೊರಟಿವೆಯೇ ವಿನಾಃ ಅಭಿವೃದ್ಧಿಯಿಂದಲ್ಲ. ನಾವು ಕ್ಷೇತ್ರದ ಜನರಿಗೆ ಅಭಿವೃದ್ಧಿ ವಿಷಯಗಳನ್ನಷ್ಟೇ ಹೇಳಿದ್ದೇವೆ. ಆ ಮೂಲಕ ಸಿಂಧಗಿ ಕ್ಷೇತ್ರದಲ್ಲಿ ನಾವೇ ಗೆಲುತ್ತೇವೆ’ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ಹಣ ಹಂಚುತ್ತಿರುವ ಆರೋಪ ಮಾಡಿದ್ದಾರೆ.  “ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿ ಅವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂಪಾಯಿ ಹಣ ಕೊಟ್ಟು ಅಲ್ಪಸಂಖ್ಯಾತ ಸಮುದಾಯದವರು ಬಿಜೆಪಿಗೆ ಮತ ಹಾಕಲ್ಲ ಎಂದು ಗೊತ್ತು, ನಮಗೆ ಮತ ನೀಡದಿದ್ದರೂ ಪರವಾಗಿಲ್ಲ, ಜೆಡಿಎಸ್‌ಗೆ ಹಾಕಿ ಎಂದು ಹೇಳಿದ್ದಾರೆ” ಎಂದಿದ್ದಾರೆ.

’ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಯಾವುದಾದರೂ ಒಂದು ಜನಪರ ಯೋಜನೆಯ ಹೆಸರು ಹೇಳಲಿ ನೋಡಣ. ಅವರಿಂದ ಸಾಧ್ಯವಿದೆಯಾ? ತಮ್ಮ ಬಣ್ಣ ಬಯಲಾಗುತ್ತೆ ಎಂದು ಹೆದರಿ ಒಂದೇ ವೇದಿಕೆಗೆ ಚರ್ಚೆಗೆ ಬರಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

’ರಾಜ್ಯದ ಬಿಜೆಪಿಯಂತೆ ನಾವು ಹಣ ಹಂಚಿ ಮತ ಕೇಳುತ್ತಿಲ್ಲ. ಅಧಿಕಾರದಲ್ಲಿ ಇದ್ದಾಗ ಐದು ವರ್ಷ ನಿಮಗಾಗಿ ದುಡಿದಿದ್ದೇವೆ, ನಮ್ಮ ದುಡಿಮೆಗೆ ಕೂಲಿಯ ರೂಪದಲ್ಲಿ ಮತ ಕೊಡಿ ಎಂದು ಕೇಳುತ್ತಿದ್ದೇವೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕಲ್ವಾ..?’ ಎಂದು ಟ್ವೀಟ್‌ಗಳನ್ನು ಮಾಡಿದ್ದಾರೆ.


ಇದನ್ನೂ ಓದಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ರೋಗಿಗಳು ಆಕ್ಸಿಜನ್ ಇಲ್ಲದೆ ಸತ್ತು ಹೋಗಿ ಮಕ್ಕಳು ದಾರಿಯಲ್ಲಿ ಇದ್ದಾಗ, ಲಾಕ್ ಡೌನ್ ಆಗಿ ಕೆಲಸ ಇಲ್ಲದೆ. ಒಪ್ಪೊತ್ತಿನ ಊಟಕ್ಕೂ ಗತಿ ಇಲ್ಲದಾಗ, ತನ್ನ ಊರಿಗೆ ಹೋಗಲು ದಾರಿಯೇ ಕಾಣದಾಗ, ಯಾವ ರಾಜಕಾರಣಿಗಳಲ್ಲಿಯೂ ಹಣ ಇರಲಿಲ್ಲ. ಈಗ ಓಟಿಗಾಗಿ ಹಣದ ಹೊಳೆ ಹರಿಯುತ್ತಿದೆ ಅಂದರೆ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...