Homeಕರ್ನಾಟಕಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಸಿಂಧಗಿಯಲ್ಲಿ ಬಿಜೆಪಿಯವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂ. ನೀಡಿದ್ದಾರೆ- ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆ ಕಣದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದರೂ ಪಕ್ಷಗಳ ನಡುವಿನ ಕೆಸರೆರಚಾಟ ಮಾತ್ರ ನಿಂತಿಲ್ಲ. ಬಹಿರಂಗ ಪ್ರಚಾರ ಅಂತ್ಯವಾದ ಮೇಲೆಯೂ ಆಡಳಿತಾರೂಢ ಬಿಜೆಪಿಯು ಸಿಂಧಗಿ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

“ಸಚಿವರಾದ ವಿ.ಸೋಮಣ್ಣ, ಸಿ.ಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಏಳೆಂಟು ಮಂತ್ರಿಗಳು ಇವತ್ತಿಗೂ ಸಮೀಪದ ರೆಸಾರ್ಟ್‌ನಲ್ಲಿ ಬಿಡು ಬಿಟ್ಟಿದ್ದಾರೆ. ಪ್ರತಿ ಹಳ್ಳಿಗೆ 30 ರಿಂದ 40 ಲಕ್ಷ ರೂಪಾಯಿ ಹಂಚಿಕೆ ಆಗಿದೆ. ಖುದ್ದು ಸಚಿವರೇ ಈ ಕೃತ್ಯದಲ್ಲಿ ತೊಡಗಿರುವ ಮಾಹಿತಿಯಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷದಿಂದಲೂ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಕೆಲಸ ನಡೆದಿದೆ” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

’ಕೆಲ ಹಳ್ಳಿಗಳಲ್ಲಿ ಐದರಿಂದ ಆರು ಮತಗಟ್ಟೆಗಳಿವೆ. ಪ್ರತೀ ಮತಗಟ್ಟೆಗೆ ತಲಾ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಒಂದು ಮತಕ್ಕೆ 1,000 ರೂಪಾಯಿ ನಿಗದಿ ಮಾಡಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆ ಮಾಡಿದ ಮೇಲೆ ಎಲ್ಲ ಚುನಾವಣೆಗಳನ್ನು ಗೆದ್ದಿರುವುದು ಹಣದ ಹೊಳೆ ಹರಿಸಿಯೇ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಮುಂದುವರಿದು, ’ಎರಡೂ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಗೆಲ್ಲಬೇಕು ಎಂದು ಹೊರಟಿವೆಯೇ ವಿನಾಃ ಅಭಿವೃದ್ಧಿಯಿಂದಲ್ಲ. ನಾವು ಕ್ಷೇತ್ರದ ಜನರಿಗೆ ಅಭಿವೃದ್ಧಿ ವಿಷಯಗಳನ್ನಷ್ಟೇ ಹೇಳಿದ್ದೇವೆ. ಆ ಮೂಲಕ ಸಿಂಧಗಿ ಕ್ಷೇತ್ರದಲ್ಲಿ ನಾವೇ ಗೆಲುತ್ತೇವೆ’ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ಹಣ ಹಂಚುತ್ತಿರುವ ಆರೋಪ ಮಾಡಿದ್ದಾರೆ.  “ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿ ಅವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂಪಾಯಿ ಹಣ ಕೊಟ್ಟು ಅಲ್ಪಸಂಖ್ಯಾತ ಸಮುದಾಯದವರು ಬಿಜೆಪಿಗೆ ಮತ ಹಾಕಲ್ಲ ಎಂದು ಗೊತ್ತು, ನಮಗೆ ಮತ ನೀಡದಿದ್ದರೂ ಪರವಾಗಿಲ್ಲ, ಜೆಡಿಎಸ್‌ಗೆ ಹಾಕಿ ಎಂದು ಹೇಳಿದ್ದಾರೆ” ಎಂದಿದ್ದಾರೆ.

’ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಯಾವುದಾದರೂ ಒಂದು ಜನಪರ ಯೋಜನೆಯ ಹೆಸರು ಹೇಳಲಿ ನೋಡಣ. ಅವರಿಂದ ಸಾಧ್ಯವಿದೆಯಾ? ತಮ್ಮ ಬಣ್ಣ ಬಯಲಾಗುತ್ತೆ ಎಂದು ಹೆದರಿ ಒಂದೇ ವೇದಿಕೆಗೆ ಚರ್ಚೆಗೆ ಬರಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

’ರಾಜ್ಯದ ಬಿಜೆಪಿಯಂತೆ ನಾವು ಹಣ ಹಂಚಿ ಮತ ಕೇಳುತ್ತಿಲ್ಲ. ಅಧಿಕಾರದಲ್ಲಿ ಇದ್ದಾಗ ಐದು ವರ್ಷ ನಿಮಗಾಗಿ ದುಡಿದಿದ್ದೇವೆ, ನಮ್ಮ ದುಡಿಮೆಗೆ ಕೂಲಿಯ ರೂಪದಲ್ಲಿ ಮತ ಕೊಡಿ ಎಂದು ಕೇಳುತ್ತಿದ್ದೇವೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕಲ್ವಾ..?’ ಎಂದು ಟ್ವೀಟ್‌ಗಳನ್ನು ಮಾಡಿದ್ದಾರೆ.


ಇದನ್ನೂ ಓದಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಕೊರೋನ ರೋಗಿಗಳು ಆಕ್ಸಿಜನ್ ಇಲ್ಲದೆ ಸತ್ತು ಹೋಗಿ ಮಕ್ಕಳು ದಾರಿಯಲ್ಲಿ ಇದ್ದಾಗ, ಲಾಕ್ ಡೌನ್ ಆಗಿ ಕೆಲಸ ಇಲ್ಲದೆ. ಒಪ್ಪೊತ್ತಿನ ಊಟಕ್ಕೂ ಗತಿ ಇಲ್ಲದಾಗ, ತನ್ನ ಊರಿಗೆ ಹೋಗಲು ದಾರಿಯೇ ಕಾಣದಾಗ, ಯಾವ ರಾಜಕಾರಣಿಗಳಲ್ಲಿಯೂ ಹಣ ಇರಲಿಲ್ಲ. ಈಗ ಓಟಿಗಾಗಿ ಹಣದ ಹೊಳೆ ಹರಿಯುತ್ತಿದೆ ಅಂದರೆ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...