Homeಕರ್ನಾಟಕಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

- Advertisement -
- Advertisement -

ಗಿಗ್ ಕಾರ್ಮಿಕರ ಉದ್ಯೋಗ ಅಭದ್ರತೆ, ಸೌಲಭ್ಯಗಳ ಕೊರತೆ ಮತ್ತು ಸಮರ್ಪಕ ದೂರು ನಿವಾರಣಾ ವ್ಯವಸ್ಥೆಯ ಕೊರತೆಯನ್ನು ನೀಗಿಸಲು ರಾಜ್ಯ ಸಚಿವ ಸಂಪುಟವು ಶುಕ್ರವಾರ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮಸೂದೆಯನ್ನು ಅನುಮೋದಿಸಿದೆ. ಮಸೂದೆಯು ರಾಜ್ಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಒಂದು ಮಂಡಳಿಯನ್ನು ಸ್ಥಾಪಿಸಲು ಇ-ಕಾಮರ್ಸ್ ವೇದಿಕೆಗಳ ಮೇಲೆ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಗಿಗ್ ಕಾರ್ಮಿಕರ ಕಲ್ಯಾಣ

ಕರ್ನಾಟಕ ಫ್ಲಾಟ್‌ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ-2024 ಎಂಬ ಹೆಸರಿನ ಈ ಮಸೂದೆಯು ಫ್ಲಾಟ್‌ಫಾರ್ಮ್‌ ಕಂಪೆನಿಗಳು ಗಿಗ್ ಕಾರ್ಮಿಕರಿಗೆ ಮಾಡುವ ಪ್ರತಿ ವಹಿವಾಟು ಅಥವಾ ಪಾವತಿಯ ಮೇಲೆ 1% ಕ್ಕಿಂತ ಕಡಿಮೆಯಿಲ್ಲದ ಮತ್ತು 5% ಕ್ಕಿಂತ ಹೆಚ್ಚಿಲ್ಲದ ಕಲ್ಯಾಣ ಸೆಸ್ ಅನ್ನು ಪ್ರಸ್ತಾಪಿಸಿದೆ.

ಪ್ರಸ್ತಾವಿತ ಮಸೂದೆಯ ಪ್ರಕಾರ, ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸಹ ಸ್ಥಾಪಿಸಲಾಗುವುದು. ಇದನ್ನು ಸಂಗ್ರಹಿಸಿದ ಸೆಸ್‌ನಿಂದ ಭಾಗಶಃ ಹಣವನ್ನು ನೀಡಲಾಗುತ್ತದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಇದರ ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರದ ಪ್ರತಿನಿಧಿಗಳು, ಗಿಗ್ ಕಾರ್ಮಿಕರು, ಸಂಗ್ರಾಹಕರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಒಳಗೊಂಡಿರುತ್ತದೆ.

ಈ ತಿಂಗಳ ಆರಂಭದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಲಾಡ್ ಹಾಜರಿದ್ದ ಸಭೆಯಲ್ಲಿ ಮಂಡಳಿಯನ್ನು ಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

“ಮಂಡಳಿಯ ಪ್ರಮುಖ ಜವಾಬ್ದಾರಿಗಳಲ್ಲಿ ಗಿಗ್ ಕಾರ್ಮಿಕರ ನೋಂದಣಿಯನ್ನು ಖಚಿತಪಡಿಸಿಕೊಳ್ಳುವುದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಗ್ರಾಹಕರು ಅಥವಾ ವೇದಿಕೆಗಳ ನೋಂದಣಿಯನ್ನು ಪರಿಶೀಲಿಸುವುದು, ಕಲ್ಯಾಣ ಸೆಸ್‌ನ ಸರಿಯಾದ ಸಂಗ್ರಹವನ್ನು ಪ್ರಮಾಣೀಕರಿಸುವುದು ಮತ್ತು ಸಾಮಾನ್ಯ ಮತ್ತು ನಿರ್ದಿಷ್ಟ ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವುದು ಸೇರಿವೆ” ಎಂದು ಸಂತೋಷ್‌ ಲಾಡ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳಿಂದ ಪ್ರಯೋಜನಗಳು ಗಿಗ್ ಕೆಲಸಗಾರರನ್ನು ಪರಿಣಾಮಕಾರಿಯಾಗಿ ತಲುಪುವುದನ್ನು ಮಂಡಳಿಯು ಖಚಿತಪಡಿಸುತ್ತದೆ ಮತ್ತು ಫ್ಲಾಟ್‌ಫಾರ್ಮ್‌ ಆಧಾರಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳ ವಿತರಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ಆಂತರಿಕ ವಿವಾದ ಪರಿಹಾರ ಸಮಿತಿ ಅಥವಾ 14 ದಿನಗಳ ಪರಿಹಾರದ ಸಮಯಾವಧಿಯನ್ನು ಹೊಂದಿರುವ ವೆಬ್-ಪೋರ್ಟಲ್ ಮೂಲಕ ಕಾರ್ಮಿಕರು ಕುಂದುಕೊರತೆಗಳನ್ನು ಸಲ್ಲಿಸಲು ಮಸೂದೆಯು ಅವಕಾಶ ನೀಡುತ್ತದೆ.

ಕಾರ್ಮಿಕರು ಕೆಲಸಗಳನ್ನು ನಿರಾಕರಿಸಲು ಅನುಮತಿಸುವ ನಿಬಂಧನೆಯನ್ನು ಮಸೂದೆ ಒಳಗೊಂಡಿದ್ದು, ಫ್ಲಾಟ್‌ಫಾರ್ಮ್‌ಗಳು 14 ದಿನಗಳ ಮುಂಚಿತವಾಗಿ ಒಪ್ಪಂದ ಬದಲಾವಣೆಗಳ ಬಗ್ಗೆ ಕಾರ್ಮಿಕರಿಗೆ ತಿಳಿಸಬೇಕಾಗಿದೆ.

ಕಾನೂನಿನ ಉಲ್ಲಂಘನೆ ನಡೆದರೆ ಮೊದಲ ಅಪರಾಧಕ್ಕೆ 5,000 ರೂ. ಮತ್ತು ನಂತರದ ಅಪರಾಧಗಳಿಗೆ 1 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಜೊತೆಗೆ ಕಲ್ಯಾಣ ಶುಲ್ಕವನ್ನು ಪಾವತಿಸದಿರುವುದು ಅಥವಾ ಇತರ ಅನುಸರಣೆಗೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ.

ಸರ್ಕಾರ ಈ ಘೋಷಣೆ ಮಾಡಿದನ ನಂತರ, NASSCOM ಮತ್ತು ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ​​ಆಫ್ ಇಂಡಿಯಾ (IAMAI) ನಂತಹ ಕಂಪೆನಿಗಳ ಸಂಘಟನೆಗಳು, ಇಂತಹ ಮಸೂದೆಯು ಇ-ಕಾಮರ್ಸ್ ಸಂಸ್ಥೆಗಳ ಮೇಲೆ, ವಿಶೇಷವಾಗಿ ಈಗಾಗಲೇ ಕಡಿಮೆ ಲಾಭ ಗಳಿಸುತ್ತಿರುವ ಸ್ಟಾರ್ಟ್‌ಅಪ್‌ ಕಂಪೆನಿಗಳ ಮೇಲೆ ಸಂಭಾವ್ಯ ಹೊರೆಯನ್ನು ಉಂಟು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

  ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....