Homeಕರ್ನಾಟಕಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

- Advertisement -
- Advertisement -

ಗಿಗ್ ಕಾರ್ಮಿಕರ ಉದ್ಯೋಗ ಅಭದ್ರತೆ, ಸೌಲಭ್ಯಗಳ ಕೊರತೆ ಮತ್ತು ಸಮರ್ಪಕ ದೂರು ನಿವಾರಣಾ ವ್ಯವಸ್ಥೆಯ ಕೊರತೆಯನ್ನು ನೀಗಿಸಲು ರಾಜ್ಯ ಸಚಿವ ಸಂಪುಟವು ಶುಕ್ರವಾರ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮಸೂದೆಯನ್ನು ಅನುಮೋದಿಸಿದೆ. ಮಸೂದೆಯು ರಾಜ್ಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಒಂದು ಮಂಡಳಿಯನ್ನು ಸ್ಥಾಪಿಸಲು ಇ-ಕಾಮರ್ಸ್ ವೇದಿಕೆಗಳ ಮೇಲೆ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಗಿಗ್ ಕಾರ್ಮಿಕರ ಕಲ್ಯಾಣ

ಕರ್ನಾಟಕ ಫ್ಲಾಟ್‌ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ-2024 ಎಂಬ ಹೆಸರಿನ ಈ ಮಸೂದೆಯು ಫ್ಲಾಟ್‌ಫಾರ್ಮ್‌ ಕಂಪೆನಿಗಳು ಗಿಗ್ ಕಾರ್ಮಿಕರಿಗೆ ಮಾಡುವ ಪ್ರತಿ ವಹಿವಾಟು ಅಥವಾ ಪಾವತಿಯ ಮೇಲೆ 1% ಕ್ಕಿಂತ ಕಡಿಮೆಯಿಲ್ಲದ ಮತ್ತು 5% ಕ್ಕಿಂತ ಹೆಚ್ಚಿಲ್ಲದ ಕಲ್ಯಾಣ ಸೆಸ್ ಅನ್ನು ಪ್ರಸ್ತಾಪಿಸಿದೆ.

ಪ್ರಸ್ತಾವಿತ ಮಸೂದೆಯ ಪ್ರಕಾರ, ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸಹ ಸ್ಥಾಪಿಸಲಾಗುವುದು. ಇದನ್ನು ಸಂಗ್ರಹಿಸಿದ ಸೆಸ್‌ನಿಂದ ಭಾಗಶಃ ಹಣವನ್ನು ನೀಡಲಾಗುತ್ತದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಇದರ ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರದ ಪ್ರತಿನಿಧಿಗಳು, ಗಿಗ್ ಕಾರ್ಮಿಕರು, ಸಂಗ್ರಾಹಕರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಒಳಗೊಂಡಿರುತ್ತದೆ.

ಈ ತಿಂಗಳ ಆರಂಭದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಲಾಡ್ ಹಾಜರಿದ್ದ ಸಭೆಯಲ್ಲಿ ಮಂಡಳಿಯನ್ನು ಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

“ಮಂಡಳಿಯ ಪ್ರಮುಖ ಜವಾಬ್ದಾರಿಗಳಲ್ಲಿ ಗಿಗ್ ಕಾರ್ಮಿಕರ ನೋಂದಣಿಯನ್ನು ಖಚಿತಪಡಿಸಿಕೊಳ್ಳುವುದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಗ್ರಾಹಕರು ಅಥವಾ ವೇದಿಕೆಗಳ ನೋಂದಣಿಯನ್ನು ಪರಿಶೀಲಿಸುವುದು, ಕಲ್ಯಾಣ ಸೆಸ್‌ನ ಸರಿಯಾದ ಸಂಗ್ರಹವನ್ನು ಪ್ರಮಾಣೀಕರಿಸುವುದು ಮತ್ತು ಸಾಮಾನ್ಯ ಮತ್ತು ನಿರ್ದಿಷ್ಟ ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವುದು ಸೇರಿವೆ” ಎಂದು ಸಂತೋಷ್‌ ಲಾಡ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳಿಂದ ಪ್ರಯೋಜನಗಳು ಗಿಗ್ ಕೆಲಸಗಾರರನ್ನು ಪರಿಣಾಮಕಾರಿಯಾಗಿ ತಲುಪುವುದನ್ನು ಮಂಡಳಿಯು ಖಚಿತಪಡಿಸುತ್ತದೆ ಮತ್ತು ಫ್ಲಾಟ್‌ಫಾರ್ಮ್‌ ಆಧಾರಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳ ವಿತರಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ಆಂತರಿಕ ವಿವಾದ ಪರಿಹಾರ ಸಮಿತಿ ಅಥವಾ 14 ದಿನಗಳ ಪರಿಹಾರದ ಸಮಯಾವಧಿಯನ್ನು ಹೊಂದಿರುವ ವೆಬ್-ಪೋರ್ಟಲ್ ಮೂಲಕ ಕಾರ್ಮಿಕರು ಕುಂದುಕೊರತೆಗಳನ್ನು ಸಲ್ಲಿಸಲು ಮಸೂದೆಯು ಅವಕಾಶ ನೀಡುತ್ತದೆ.

ಕಾರ್ಮಿಕರು ಕೆಲಸಗಳನ್ನು ನಿರಾಕರಿಸಲು ಅನುಮತಿಸುವ ನಿಬಂಧನೆಯನ್ನು ಮಸೂದೆ ಒಳಗೊಂಡಿದ್ದು, ಫ್ಲಾಟ್‌ಫಾರ್ಮ್‌ಗಳು 14 ದಿನಗಳ ಮುಂಚಿತವಾಗಿ ಒಪ್ಪಂದ ಬದಲಾವಣೆಗಳ ಬಗ್ಗೆ ಕಾರ್ಮಿಕರಿಗೆ ತಿಳಿಸಬೇಕಾಗಿದೆ.

ಕಾನೂನಿನ ಉಲ್ಲಂಘನೆ ನಡೆದರೆ ಮೊದಲ ಅಪರಾಧಕ್ಕೆ 5,000 ರೂ. ಮತ್ತು ನಂತರದ ಅಪರಾಧಗಳಿಗೆ 1 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಜೊತೆಗೆ ಕಲ್ಯಾಣ ಶುಲ್ಕವನ್ನು ಪಾವತಿಸದಿರುವುದು ಅಥವಾ ಇತರ ಅನುಸರಣೆಗೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ.

ಸರ್ಕಾರ ಈ ಘೋಷಣೆ ಮಾಡಿದನ ನಂತರ, NASSCOM ಮತ್ತು ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ​​ಆಫ್ ಇಂಡಿಯಾ (IAMAI) ನಂತಹ ಕಂಪೆನಿಗಳ ಸಂಘಟನೆಗಳು, ಇಂತಹ ಮಸೂದೆಯು ಇ-ಕಾಮರ್ಸ್ ಸಂಸ್ಥೆಗಳ ಮೇಲೆ, ವಿಶೇಷವಾಗಿ ಈಗಾಗಲೇ ಕಡಿಮೆ ಲಾಭ ಗಳಿಸುತ್ತಿರುವ ಸ್ಟಾರ್ಟ್‌ಅಪ್‌ ಕಂಪೆನಿಗಳ ಮೇಲೆ ಸಂಭಾವ್ಯ ಹೊರೆಯನ್ನು ಉಂಟು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

  ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...