Homeಕರ್ನಾಟಕಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

- Advertisement -
- Advertisement -

ಗಿಗ್ ಕಾರ್ಮಿಕರ ಉದ್ಯೋಗ ಅಭದ್ರತೆ, ಸೌಲಭ್ಯಗಳ ಕೊರತೆ ಮತ್ತು ಸಮರ್ಪಕ ದೂರು ನಿವಾರಣಾ ವ್ಯವಸ್ಥೆಯ ಕೊರತೆಯನ್ನು ನೀಗಿಸಲು ರಾಜ್ಯ ಸಚಿವ ಸಂಪುಟವು ಶುಕ್ರವಾರ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮಸೂದೆಯನ್ನು ಅನುಮೋದಿಸಿದೆ. ಮಸೂದೆಯು ರಾಜ್ಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಒಂದು ಮಂಡಳಿಯನ್ನು ಸ್ಥಾಪಿಸಲು ಇ-ಕಾಮರ್ಸ್ ವೇದಿಕೆಗಳ ಮೇಲೆ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಗಿಗ್ ಕಾರ್ಮಿಕರ ಕಲ್ಯಾಣ

ಕರ್ನಾಟಕ ಫ್ಲಾಟ್‌ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ-2024 ಎಂಬ ಹೆಸರಿನ ಈ ಮಸೂದೆಯು ಫ್ಲಾಟ್‌ಫಾರ್ಮ್‌ ಕಂಪೆನಿಗಳು ಗಿಗ್ ಕಾರ್ಮಿಕರಿಗೆ ಮಾಡುವ ಪ್ರತಿ ವಹಿವಾಟು ಅಥವಾ ಪಾವತಿಯ ಮೇಲೆ 1% ಕ್ಕಿಂತ ಕಡಿಮೆಯಿಲ್ಲದ ಮತ್ತು 5% ಕ್ಕಿಂತ ಹೆಚ್ಚಿಲ್ಲದ ಕಲ್ಯಾಣ ಸೆಸ್ ಅನ್ನು ಪ್ರಸ್ತಾಪಿಸಿದೆ.

ಪ್ರಸ್ತಾವಿತ ಮಸೂದೆಯ ಪ್ರಕಾರ, ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸಹ ಸ್ಥಾಪಿಸಲಾಗುವುದು. ಇದನ್ನು ಸಂಗ್ರಹಿಸಿದ ಸೆಸ್‌ನಿಂದ ಭಾಗಶಃ ಹಣವನ್ನು ನೀಡಲಾಗುತ್ತದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಇದರ ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರದ ಪ್ರತಿನಿಧಿಗಳು, ಗಿಗ್ ಕಾರ್ಮಿಕರು, ಸಂಗ್ರಾಹಕರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಒಳಗೊಂಡಿರುತ್ತದೆ.

ಈ ತಿಂಗಳ ಆರಂಭದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಲಾಡ್ ಹಾಜರಿದ್ದ ಸಭೆಯಲ್ಲಿ ಮಂಡಳಿಯನ್ನು ಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

“ಮಂಡಳಿಯ ಪ್ರಮುಖ ಜವಾಬ್ದಾರಿಗಳಲ್ಲಿ ಗಿಗ್ ಕಾರ್ಮಿಕರ ನೋಂದಣಿಯನ್ನು ಖಚಿತಪಡಿಸಿಕೊಳ್ಳುವುದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಗ್ರಾಹಕರು ಅಥವಾ ವೇದಿಕೆಗಳ ನೋಂದಣಿಯನ್ನು ಪರಿಶೀಲಿಸುವುದು, ಕಲ್ಯಾಣ ಸೆಸ್‌ನ ಸರಿಯಾದ ಸಂಗ್ರಹವನ್ನು ಪ್ರಮಾಣೀಕರಿಸುವುದು ಮತ್ತು ಸಾಮಾನ್ಯ ಮತ್ತು ನಿರ್ದಿಷ್ಟ ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವುದು ಸೇರಿವೆ” ಎಂದು ಸಂತೋಷ್‌ ಲಾಡ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳಿಂದ ಪ್ರಯೋಜನಗಳು ಗಿಗ್ ಕೆಲಸಗಾರರನ್ನು ಪರಿಣಾಮಕಾರಿಯಾಗಿ ತಲುಪುವುದನ್ನು ಮಂಡಳಿಯು ಖಚಿತಪಡಿಸುತ್ತದೆ ಮತ್ತು ಫ್ಲಾಟ್‌ಫಾರ್ಮ್‌ ಆಧಾರಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳ ವಿತರಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ಆಂತರಿಕ ವಿವಾದ ಪರಿಹಾರ ಸಮಿತಿ ಅಥವಾ 14 ದಿನಗಳ ಪರಿಹಾರದ ಸಮಯಾವಧಿಯನ್ನು ಹೊಂದಿರುವ ವೆಬ್-ಪೋರ್ಟಲ್ ಮೂಲಕ ಕಾರ್ಮಿಕರು ಕುಂದುಕೊರತೆಗಳನ್ನು ಸಲ್ಲಿಸಲು ಮಸೂದೆಯು ಅವಕಾಶ ನೀಡುತ್ತದೆ.

ಕಾರ್ಮಿಕರು ಕೆಲಸಗಳನ್ನು ನಿರಾಕರಿಸಲು ಅನುಮತಿಸುವ ನಿಬಂಧನೆಯನ್ನು ಮಸೂದೆ ಒಳಗೊಂಡಿದ್ದು, ಫ್ಲಾಟ್‌ಫಾರ್ಮ್‌ಗಳು 14 ದಿನಗಳ ಮುಂಚಿತವಾಗಿ ಒಪ್ಪಂದ ಬದಲಾವಣೆಗಳ ಬಗ್ಗೆ ಕಾರ್ಮಿಕರಿಗೆ ತಿಳಿಸಬೇಕಾಗಿದೆ.

ಕಾನೂನಿನ ಉಲ್ಲಂಘನೆ ನಡೆದರೆ ಮೊದಲ ಅಪರಾಧಕ್ಕೆ 5,000 ರೂ. ಮತ್ತು ನಂತರದ ಅಪರಾಧಗಳಿಗೆ 1 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಜೊತೆಗೆ ಕಲ್ಯಾಣ ಶುಲ್ಕವನ್ನು ಪಾವತಿಸದಿರುವುದು ಅಥವಾ ಇತರ ಅನುಸರಣೆಗೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ.

ಸರ್ಕಾರ ಈ ಘೋಷಣೆ ಮಾಡಿದನ ನಂತರ, NASSCOM ಮತ್ತು ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ​​ಆಫ್ ಇಂಡಿಯಾ (IAMAI) ನಂತಹ ಕಂಪೆನಿಗಳ ಸಂಘಟನೆಗಳು, ಇಂತಹ ಮಸೂದೆಯು ಇ-ಕಾಮರ್ಸ್ ಸಂಸ್ಥೆಗಳ ಮೇಲೆ, ವಿಶೇಷವಾಗಿ ಈಗಾಗಲೇ ಕಡಿಮೆ ಲಾಭ ಗಳಿಸುತ್ತಿರುವ ಸ್ಟಾರ್ಟ್‌ಅಪ್‌ ಕಂಪೆನಿಗಳ ಮೇಲೆ ಸಂಭಾವ್ಯ ಹೊರೆಯನ್ನು ಉಂಟು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

  ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...