Homeಕರ್ನಾಟಕಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ ಹೊರಡಿಸಿತ್ತು

- Advertisement -
- Advertisement -

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ.

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ರಾಜ್ಯಗಳಿಗೆ ಸೂಚಿಸಿತ್ತು.

ಕಸ್ತೂರಿ ರಂಗನ್ ವರದಿಯು ಕರ್ನಾಟಕದ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲ ಲೋಪಗಳನ್ನು ತಿದ್ದುಪಡಿ ಮಾಡಿ, 19, 252.70 ಚದರ ಕಿ.ಮೀ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ್ದರಿಂದ ಕರಡು ಅಧಿಸೂಚನೆ ತಿರಸ್ಕರಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ವಿವರಿಸಿದ್ದಾರೆ.

ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಜುಲೈ 31, 2024ರ ಆರನೇ ಕರಡು ಅಧಿಸೂಚನೆಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಗುರುತಿಸಿತ್ತು.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯನ್ನು ಗುರುತಿಸುವ ವಿಚಾರದಲ್ಲಿ ಕೇಂದ್ರ ಮತ್ತು ಆರು ರಾಜ್ಯಗಳು ಇದುವರೆಗೆ ಒಮ್ಮತಕ್ಕೆ ಬಂದಿಲ್ಲ.

ಕಸ್ತೂರಿ ರಂಗನ್ ವರದಿ ಆಧರಿಸಿ ಗುಜರಾತ್‌ನ 449 ಚದರ ಕಿ.ಮೀ, ಮಹಾರಾಷ್ಟ್ರದ 17,340, ಗೋವಾದ 1,461, ಕರ್ನಾಟಕದ 20,668 ತಮಿಳುನಾಡಿನ 6,914 ಮತ್ತು ಕೇರಳದ 9,994 ಚದರ ಕಿ.ಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಗುರುತಿಸಿದೆ.

ಪಶ್ಚಿಮ ಘಟ್ಟಗಳ ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕರಡು ಅಧಿಸೂಚನೆಯನ್ನು ಮೊದಲ ಬಾರಿಗೆ ಮಾರ್ಚ್ 2014 ರಲ್ಲಿ ಹೊರಡಿಸಲಾಗಿತ್ತು. ಇದು 2012ರಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ತಜ್ಞರ ಸಮಿತಿಯ ಸಲಹೆಗಳನ್ನು ಆಧರಿಸಿದೆ.

ಬಾಹ್ಯಾಕಾಶ ವಿಜ್ಞಾನಿ ಕೆ ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತು ಹಿರಿಯ ಪರಿಸರ ವಿಜ್ಞಾನಿ ಮಾಧವ್ ಗಾಡ್ಗೀಳ್ ನೇತೃತ್ವದ ತಜ್ಞರ ಸಮಿತಿಯು ಸಿದ್ಧಪಡಿಸಿದ್ದ ವರದಿಯ ಸಲಹೆಗಳನ್ನು ಪರಿಶೀಲಿಸಿತ್ತು.

ಆರು ರಾಜ್ಯ ಸರ್ಕಾರಗಳ ಸಲಹೆಗಳನ್ನು ಮರು ಪರಿಶೀಲಿಸಲು, ವಿಪತ್ತು ಪೀಡಿತ ಪ್ರಾಚೀನ ಪರಿಸರ ವ್ಯವಸ್ಥೆಯ ಸಂರಕ್ಷಣೆ ಅಂಶಗಳನ್ನು ಮತ್ತು ಪ್ರದೇಶದ ಹಕ್ಕುಗಳು, ಸವಲತ್ತುಗಳು, ಅಗತ್ಯಗಳು ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2022ರಲ್ಲಿ ಕೇಂದ್ರವು ಮತ್ತೊಂದು ಸಮಿತಿಯನ್ನು ರಚಿಸಿತ್ತು. ಅದರ ಸಲಹೆಗಳನ್ನು ಕೂಡ ಕರಡು ಪ್ರತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ವಯನಾಡ್ ಭೂಕುಸಿತ ದುರಂತ ಸಂಭವಿಸಿದ ಬಳಿಕ ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ’ (WGEEP)ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಜಾರಿಗೆ ಆಗ್ರಹ ಕೇಳಿ ಬಂದಿದೆ.

ಮಾಧವ್ ಗಾಡ್ಗೀಳ್ ವರದಿಯ ಕುರಿತು ಹೆಚ್ಚಿನ ಮಾಹಿತಿ ಓದಲು ಕೆಳಗಿನ ಒತ್ತಿ 

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...