Homeಕರ್ನಾಟಕಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ ಹೊರಡಿಸಿತ್ತು

- Advertisement -
- Advertisement -

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ.

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ರಾಜ್ಯಗಳಿಗೆ ಸೂಚಿಸಿತ್ತು.

ಕಸ್ತೂರಿ ರಂಗನ್ ವರದಿಯು ಕರ್ನಾಟಕದ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲ ಲೋಪಗಳನ್ನು ತಿದ್ದುಪಡಿ ಮಾಡಿ, 19, 252.70 ಚದರ ಕಿ.ಮೀ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ್ದರಿಂದ ಕರಡು ಅಧಿಸೂಚನೆ ತಿರಸ್ಕರಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ವಿವರಿಸಿದ್ದಾರೆ.

ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಜುಲೈ 31, 2024ರ ಆರನೇ ಕರಡು ಅಧಿಸೂಚನೆಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಗುರುತಿಸಿತ್ತು.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯನ್ನು ಗುರುತಿಸುವ ವಿಚಾರದಲ್ಲಿ ಕೇಂದ್ರ ಮತ್ತು ಆರು ರಾಜ್ಯಗಳು ಇದುವರೆಗೆ ಒಮ್ಮತಕ್ಕೆ ಬಂದಿಲ್ಲ.

ಕಸ್ತೂರಿ ರಂಗನ್ ವರದಿ ಆಧರಿಸಿ ಗುಜರಾತ್‌ನ 449 ಚದರ ಕಿ.ಮೀ, ಮಹಾರಾಷ್ಟ್ರದ 17,340, ಗೋವಾದ 1,461, ಕರ್ನಾಟಕದ 20,668 ತಮಿಳುನಾಡಿನ 6,914 ಮತ್ತು ಕೇರಳದ 9,994 ಚದರ ಕಿ.ಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಗುರುತಿಸಿದೆ.

ಪಶ್ಚಿಮ ಘಟ್ಟಗಳ ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕರಡು ಅಧಿಸೂಚನೆಯನ್ನು ಮೊದಲ ಬಾರಿಗೆ ಮಾರ್ಚ್ 2014 ರಲ್ಲಿ ಹೊರಡಿಸಲಾಗಿತ್ತು. ಇದು 2012ರಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ತಜ್ಞರ ಸಮಿತಿಯ ಸಲಹೆಗಳನ್ನು ಆಧರಿಸಿದೆ.

ಬಾಹ್ಯಾಕಾಶ ವಿಜ್ಞಾನಿ ಕೆ ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತು ಹಿರಿಯ ಪರಿಸರ ವಿಜ್ಞಾನಿ ಮಾಧವ್ ಗಾಡ್ಗೀಳ್ ನೇತೃತ್ವದ ತಜ್ಞರ ಸಮಿತಿಯು ಸಿದ್ಧಪಡಿಸಿದ್ದ ವರದಿಯ ಸಲಹೆಗಳನ್ನು ಪರಿಶೀಲಿಸಿತ್ತು.

ಆರು ರಾಜ್ಯ ಸರ್ಕಾರಗಳ ಸಲಹೆಗಳನ್ನು ಮರು ಪರಿಶೀಲಿಸಲು, ವಿಪತ್ತು ಪೀಡಿತ ಪ್ರಾಚೀನ ಪರಿಸರ ವ್ಯವಸ್ಥೆಯ ಸಂರಕ್ಷಣೆ ಅಂಶಗಳನ್ನು ಮತ್ತು ಪ್ರದೇಶದ ಹಕ್ಕುಗಳು, ಸವಲತ್ತುಗಳು, ಅಗತ್ಯಗಳು ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2022ರಲ್ಲಿ ಕೇಂದ್ರವು ಮತ್ತೊಂದು ಸಮಿತಿಯನ್ನು ರಚಿಸಿತ್ತು. ಅದರ ಸಲಹೆಗಳನ್ನು ಕೂಡ ಕರಡು ಪ್ರತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ವಯನಾಡ್ ಭೂಕುಸಿತ ದುರಂತ ಸಂಭವಿಸಿದ ಬಳಿಕ ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ’ (WGEEP)ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಜಾರಿಗೆ ಆಗ್ರಹ ಕೇಳಿ ಬಂದಿದೆ.

ಮಾಧವ್ ಗಾಡ್ಗೀಳ್ ವರದಿಯ ಕುರಿತು ಹೆಚ್ಚಿನ ಮಾಹಿತಿ ಓದಲು ಕೆಳಗಿನ ಒತ್ತಿ 

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...