Homeಕರ್ನಾಟಕಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ ಹೊರಡಿಸಿತ್ತು

- Advertisement -
- Advertisement -

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ.

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ರಾಜ್ಯಗಳಿಗೆ ಸೂಚಿಸಿತ್ತು.

ಕಸ್ತೂರಿ ರಂಗನ್ ವರದಿಯು ಕರ್ನಾಟಕದ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲ ಲೋಪಗಳನ್ನು ತಿದ್ದುಪಡಿ ಮಾಡಿ, 19, 252.70 ಚದರ ಕಿ.ಮೀ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ್ದರಿಂದ ಕರಡು ಅಧಿಸೂಚನೆ ತಿರಸ್ಕರಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ವಿವರಿಸಿದ್ದಾರೆ.

ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಜುಲೈ 31, 2024ರ ಆರನೇ ಕರಡು ಅಧಿಸೂಚನೆಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಗುರುತಿಸಿತ್ತು.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯನ್ನು ಗುರುತಿಸುವ ವಿಚಾರದಲ್ಲಿ ಕೇಂದ್ರ ಮತ್ತು ಆರು ರಾಜ್ಯಗಳು ಇದುವರೆಗೆ ಒಮ್ಮತಕ್ಕೆ ಬಂದಿಲ್ಲ.

ಕಸ್ತೂರಿ ರಂಗನ್ ವರದಿ ಆಧರಿಸಿ ಗುಜರಾತ್‌ನ 449 ಚದರ ಕಿ.ಮೀ, ಮಹಾರಾಷ್ಟ್ರದ 17,340, ಗೋವಾದ 1,461, ಕರ್ನಾಟಕದ 20,668 ತಮಿಳುನಾಡಿನ 6,914 ಮತ್ತು ಕೇರಳದ 9,994 ಚದರ ಕಿ.ಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಗುರುತಿಸಿದೆ.

ಪಶ್ಚಿಮ ಘಟ್ಟಗಳ ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕರಡು ಅಧಿಸೂಚನೆಯನ್ನು ಮೊದಲ ಬಾರಿಗೆ ಮಾರ್ಚ್ 2014 ರಲ್ಲಿ ಹೊರಡಿಸಲಾಗಿತ್ತು. ಇದು 2012ರಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ತಜ್ಞರ ಸಮಿತಿಯ ಸಲಹೆಗಳನ್ನು ಆಧರಿಸಿದೆ.

ಬಾಹ್ಯಾಕಾಶ ವಿಜ್ಞಾನಿ ಕೆ ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತು ಹಿರಿಯ ಪರಿಸರ ವಿಜ್ಞಾನಿ ಮಾಧವ್ ಗಾಡ್ಗೀಳ್ ನೇತೃತ್ವದ ತಜ್ಞರ ಸಮಿತಿಯು ಸಿದ್ಧಪಡಿಸಿದ್ದ ವರದಿಯ ಸಲಹೆಗಳನ್ನು ಪರಿಶೀಲಿಸಿತ್ತು.

ಆರು ರಾಜ್ಯ ಸರ್ಕಾರಗಳ ಸಲಹೆಗಳನ್ನು ಮರು ಪರಿಶೀಲಿಸಲು, ವಿಪತ್ತು ಪೀಡಿತ ಪ್ರಾಚೀನ ಪರಿಸರ ವ್ಯವಸ್ಥೆಯ ಸಂರಕ್ಷಣೆ ಅಂಶಗಳನ್ನು ಮತ್ತು ಪ್ರದೇಶದ ಹಕ್ಕುಗಳು, ಸವಲತ್ತುಗಳು, ಅಗತ್ಯಗಳು ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2022ರಲ್ಲಿ ಕೇಂದ್ರವು ಮತ್ತೊಂದು ಸಮಿತಿಯನ್ನು ರಚಿಸಿತ್ತು. ಅದರ ಸಲಹೆಗಳನ್ನು ಕೂಡ ಕರಡು ಪ್ರತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ವಯನಾಡ್ ಭೂಕುಸಿತ ದುರಂತ ಸಂಭವಿಸಿದ ಬಳಿಕ ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ’ (WGEEP)ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಜಾರಿಗೆ ಆಗ್ರಹ ಕೇಳಿ ಬಂದಿದೆ.

ಮಾಧವ್ ಗಾಡ್ಗೀಳ್ ವರದಿಯ ಕುರಿತು ಹೆಚ್ಚಿನ ಮಾಹಿತಿ ಓದಲು ಕೆಳಗಿನ ಒತ್ತಿ 

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...