Homeಕರ್ನಾಟಕರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ: ಬಸವರಾಜ ಬೊಮ್ಮಾಯಿ

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಕರ್ನಾಟಕ ಗೋವಧೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ- 2020ಗೆ ಪೂರಕವಾಗಿ ಮೊದಲ ಹಂತದಲ್ಲಿ ಒಟ್ಟು 15 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪಿಸಲು ಸರ್ಕಾರ ಗುರುವಾರ ಅನುಮೋದನೆ ನೀಡಿದೆ.

“ಕೆಲಸದ ಪ್ರಗತಿಯನ್ನು ಅವಲಂಬಿಸಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಕರ್ನಾಟಕದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾಲು ಕರೆಯದ ಮತ್ತು ಇತರ ಜಾನುವಾರುಗಳನ್ನು ನಿರ್ವಹಿಸುವ ಹೊಣೆಯನ್ನು ಕಡಿಮೆ ಮಾಡಲು ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಯೋಜನೆಗಳನ್ನು ಘೋಷಿಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ(ಗೋಹತ್ಯೆ ನಿಷೇಧ ಮಸೂದೆ) ಮತ್ತು ಸಂರಕ್ಷಣಾ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದ್ದು, ಈ ಕಾನೂನು ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಿದೆ. ಈ ಮೂಲಕ ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧಿಸಲಾಗುತ್ತಿದೆ.

ಇದನ್ನೂ ಓದಿ: ವಿವಾದಿತ ಗೋಹತ್ಯೆ ನಿಷೇಧ ಕಾನೂನು ಜನವರಿ 18 ರಿಂದ ಜಾರಿ

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕರ್ನಾಟಕ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಮತ್ತು ಜನತಾದಳ (ಜಾತ್ಯತೀತ) ತೀವ್ರ ವಿರೋಧದ ಮಧ್ಯೆ ಕರ್ನಾಟಕ ವಧೆ ಮತ್ತು ಜಾನುವಾರು ಸಂರಕ್ಷಣಾ ಮಸೂದೆ- 2020 ಅಂಗೀಕಾರವಾಯಿತು. ಗೋಶಾಲೆ ನಿರ್ಮಾಣ ಕೂಡ ಇದರ ಯೋಜನೆಯಾಗಿತ್ತು.

ಜಾನುವಾರು ಸಾಗಾಣಿಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಾಣೆ ಮಾಡುವವರು ತಮ್ಮ ಸಂಪೂರ್ಣ ವಿಳಾಸ, ಆಧಾರ್ ಸಂಖ್ಯೆ, ಮೊಬೈಲ್‍ಸಂಖ್ಯೆ, ಸಾಗಾಣೆ ಉದ್ದೇಶ, ಜಾನುವಾರುಗಳ ವಯಸ್ಸು ಸೇರಿದಂತೆ ದೃಢೀಕರಣ ನೀಡಬೇಕು ಎಂದು ಸೂಚಿಸಲಾಗಿತ್ತು.

ಪೊಲೀಸ್ ಇಲಾಖೆಯು ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಗಳು(ಎನ್‍ಜಿಒ) ಹಾಗೂ ಪ್ರಾಣಿ ಕಲ್ಯಾಣ ಮಂಡಳಿಯ ಜೊತೆಗೆ ಕೈಜೋಡಿಸಲು ಹಾಗೂ ಎಲ್ಲ ಹಂತಗಳಲ್ಲಿ ಕಾಯ್ದೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಅಲ್ಲದೆ, ಗೋಹತ್ಯೆ, ಅಕ್ರಮ ಸಾಗಾಟದ ಮೇಲೆ ಪೊಲೀಸ್ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆ ಹೆಚ್ಚು ನಿಗಾವಹಿಸಬೇಕು ಎಂದು ಈ ಹಿಂದೆ ಸಚಿವ ಪ್ರಭು ಚೌಹಾಣ್ ಹೇಳಿದ್ದರು.


ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಗಂಡು ಕರುಗಳೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...