Homeಕರ್ನಾಟಕಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

ಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

- Advertisement -
- Advertisement -

ಆಡಳಿತ ಪಕ್ಷದ ಲೂಟಿ, ಸುಳ್ಳು, ಅಹಂಕಾರ ಮತ್ತು ದ್ವೇಷವನ್ನು ತೊಡೆದುಹಾಕದೆ ಕರ್ನಾಟಕ ಮತ್ತು ದೇಶದ ಉಳಿದ ಭಾಗಗಳು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿಯವರ 4,000 ಕಿಮೀ ಪಾದಯಾತ್ರೆ ನಡೆಸಿದರು. ಈ ವೇಳೆ ಲಕ್ಷಾಂತರ ಜನರು ಸೇರಿದ್ದರು ಏಕೆಂದರೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ದ್ವೇಷವನ್ನು ಹರಡುವವರ ವಿರುದ್ಧವಾಗಿತ್ತು” ಎಂದು ಹೇಳಿದರು.

”ಬಿಜೆಪಿಯ ಲೂಟಿ, ಸುಳ್ಳು, ಅಹಂ ಮತ್ತು ದ್ವೇಷದ ವಾತಾವರಣವನ್ನು ತೊಡೆದುಹಾಕದೆ ಕರ್ನಾಟಕ ಅಥವಾ ಭಾರತ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಅವರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ತಮ್ಮ ಮೊದಲ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದರು.

ಈ (ಬಿಜೆಪಿ) ಸರ್ಕಾರದ ಕರಾಳ ಆಡಳಿತದ ವಿರುದ್ಧ ನಮ್ಮ ಧ್ವನಿಯನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಬೆಚ್ಚಿಬಿದ್ದಿದೆ ಎಂಬುದನ್ನು ಜನರು ನೋಡಿದ್ದಾರೆ, ಅದಕ್ಕಾಗಿಯೇ ಅದು ಎಲ್ಲಾ ರೀತಿಯ ದಬ್ಬಾಳಿಕೆಯನ್ನು ನಡೆಸುತ್ತಿದೆ ಎಂದರು.

”ನೀವು 2018ರಲ್ಲಿ ಅವರಿಗೆ ಅಧಿಕಾರ ನೀಡಲಿಲ್ಲ ಆದರೆ ಅವರು ಸರ್ಕಾರವನ್ನು ಲೂಟಿ ಮಾಡಿ ಅದನ್ನು ವಶಪಡಿಸಿಕೊಂಡರು. ನಂತರ ಅವರ 40 ಪರ್ಸೆಂಟ್ ಕಮಿಷನ್ ಸರ್ಕಾರವು ಲೂಟಿಯಲ್ಲಿ ನಿರತವಾಯಿತು. ಇದು ನಿಮಗೆ ಅಧಿಕಾರದಲ್ಲಿರುವವರ ದಂಧೆ ಎಂದು ಅನಿಸುವುದಿಲ್ಲವೇ?” ಎಂದು ಅವರು ಆರೋಪ ಮಾಡಿದರು.

”ಬಿಜೆಪಿ ನಾಯಕರು ”ಅಹಂಕಾರಿ”ಗಳು ಏಕೆಂದರೆ ಅವರು ಜನಸಮಾfಯರ ಕುರಿತಾದ ಯಾವುದೇ ಪ್ರಶ್ನೆಗಳಿಗೆ ಅಥವಾ ಅವರನ್ನು ಉದ್ದೇಶಿಸಿ ಬರೆದ ಯಾವುದೇ ಪತ್ರಕ್ಕೆ ಉತ್ತರಿಸುವುದಿಲ್ಲ” ಎಂದು ಹೇಳಿದರು.

ರಾಜ್ಯದಲ್ಲಿನ ಅಭಿವೃದ್ಧ ಕೆಲಸಗಳಿಗೆ ಶೇ.40ರಷ್ಟು ಕಮಿಷನ್ ವಸೂಲಿ ಮಾಡುತ್ತಿರುವ ಬಗ್ಗೆ ಕರ್ನಾಟಕದ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿರುವ ಬಗ್ಗೆ ಸೋನಿಯಾ ಗಾಂಧಿ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

”ಅವರಿಗೆ (ಬಿಜೆಪಿ ನಾಯಕರು) ಉತ್ತರ ನೀಡುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ. ಇಂತಹ ನಿರಂಕುಶತೆಯನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾಪ್ರಭುತ್ವವು ಈ ರೀತಿ ಕಾರ್ಯನಿರ್ವಹಿಸುತ್ತದೆಯೇ? ಇಲ್ಲ” ಎಂದು ಸೋನಿಯಾ ಗಾಂಧಿ ಸಾರ್ವಜನಿಕರು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

”ಅವರ ಪ್ರಕಾರ, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರ “ಆಶೀರ್ವಾದ” ಸಿಗುವುದಿಲ್ಲ ಎಂದು ಬಿಜೆಪಿ ನಾಯಕರು ಬಹಿರಂಗವಾಗಿ ಬೆದರಿಕೆ ಹಾಕುವ ಪರಿಸ್ಥಿತಿ ಇಂದಿನದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ರ್ಯಾಲಿಯಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಅವರನ್ನು ಹೆಸರಿಸದೆ ಹೇಳಿದರು.

ಕರ್ನಾಟಕದ ಜನರು ಮೇ 10 ರಂದು ನಿಮಗೆ ಬುದ್ದಿ ಕಲಿಸುತ್ತಾರೆ. ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ ಅನ್ನು ಗುಜರಾತ್ ಮೂಲದ ಅಮುಲ್ ಜೊತೆ ವಿಲೀನಗೊಳಿಸುವ ಪ್ರಯತ್ನದ ಬಗ್ಗೆಯೂ ಸೋನಿಯಾ ಗಾಂಧಿ ಪ್ರಸ್ತಾಪಿಸಿದರು.

ಲಕ್ಷಾಂತರ ರೈತರು ಮತ್ತು ಹಾಲು ಉತ್ಪಾದಕರ ಹಿತಾಸಕ್ತಿಗಳನ್ನು ಕಡೆಗಣಿಸಿ ನಂದಿನಿಯಂತಹ ಉತ್ತಮ ಸಂಸ್ಥೆಯನ್ನು (ಕರ್ನಾಟಕ ಹಾಲು ಒಕ್ಕೂಟದ ಸಹಕಾರಿ ಡೈರಿ ಬ್ರಾಂಡ್) ಲೂಟಿ ಮಾಡುವ ಸಂಚು ಇಲ್ಲಿ ನಡೆಯುವುದಿಲ್ಲ ಎಂದು ಅವರಿಗೆ (ಬಿಜೆಪಿ) ಹೇಳುವ ಸಮಯ ಈಗ ಬಂದಿದೆ ಎಂದರು.

ನಾಯಕರ ಭವಿಷ್ಯವನ್ನು ಜನರ ಆಶೀರ್ವಾದದಿಂದ ನಿರ್ಧರಿಸಲಾಗುತ್ತದೆಯೇ ಹೊರತು ಬೇರೆ ರೀತಿಯಲ್ಲಿ ಅಲ್ಲ ಎಂಬುದನ್ನು ಅಧಿಕಾರದಲ್ಲಿರುವವರಿಗೆ ನೆನಪಿಸಬೇಕೆಂದು ಸೋನಿಯಾ ಗಾಂಧಿ ಜನರಿಗೆ ಮನವಿ ಮಾಡಿದರು.

12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ನಾಮಸ್ಮರಣೆ ಮಾಡಿದ ಅವರು, ‘ಭಗವಾನ್ ಬಸವಣ್ಣ’ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದರು.

ಬಿಜೆಪಿಯು ಕನ್ನಡದ ಮಹಾನ್ ಕವಿ ಕುವೆಂಪು ಅವರನ್ನು ಅವಮಾನಿಸುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದರು.

”ನಿಮ್ಮ (ಬಿಜೆಪಿ) ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು, ರಾಷ್ಟ್ರ ಮತ್ತು ಕರ್ನಾಟಕವನ್ನು ವಿನಾಶದತ್ತ ತಳ್ಳಬೇಡಿ” ಎಂದು ಸೋನಿಯಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...