Homeಕರ್ನಾಟಕಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

ಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

- Advertisement -
- Advertisement -

ಆಡಳಿತ ಪಕ್ಷದ ಲೂಟಿ, ಸುಳ್ಳು, ಅಹಂಕಾರ ಮತ್ತು ದ್ವೇಷವನ್ನು ತೊಡೆದುಹಾಕದೆ ಕರ್ನಾಟಕ ಮತ್ತು ದೇಶದ ಉಳಿದ ಭಾಗಗಳು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿಯವರ 4,000 ಕಿಮೀ ಪಾದಯಾತ್ರೆ ನಡೆಸಿದರು. ಈ ವೇಳೆ ಲಕ್ಷಾಂತರ ಜನರು ಸೇರಿದ್ದರು ಏಕೆಂದರೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ದ್ವೇಷವನ್ನು ಹರಡುವವರ ವಿರುದ್ಧವಾಗಿತ್ತು” ಎಂದು ಹೇಳಿದರು.

”ಬಿಜೆಪಿಯ ಲೂಟಿ, ಸುಳ್ಳು, ಅಹಂ ಮತ್ತು ದ್ವೇಷದ ವಾತಾವರಣವನ್ನು ತೊಡೆದುಹಾಕದೆ ಕರ್ನಾಟಕ ಅಥವಾ ಭಾರತ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಅವರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ತಮ್ಮ ಮೊದಲ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದರು.

ಈ (ಬಿಜೆಪಿ) ಸರ್ಕಾರದ ಕರಾಳ ಆಡಳಿತದ ವಿರುದ್ಧ ನಮ್ಮ ಧ್ವನಿಯನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಬೆಚ್ಚಿಬಿದ್ದಿದೆ ಎಂಬುದನ್ನು ಜನರು ನೋಡಿದ್ದಾರೆ, ಅದಕ್ಕಾಗಿಯೇ ಅದು ಎಲ್ಲಾ ರೀತಿಯ ದಬ್ಬಾಳಿಕೆಯನ್ನು ನಡೆಸುತ್ತಿದೆ ಎಂದರು.

”ನೀವು 2018ರಲ್ಲಿ ಅವರಿಗೆ ಅಧಿಕಾರ ನೀಡಲಿಲ್ಲ ಆದರೆ ಅವರು ಸರ್ಕಾರವನ್ನು ಲೂಟಿ ಮಾಡಿ ಅದನ್ನು ವಶಪಡಿಸಿಕೊಂಡರು. ನಂತರ ಅವರ 40 ಪರ್ಸೆಂಟ್ ಕಮಿಷನ್ ಸರ್ಕಾರವು ಲೂಟಿಯಲ್ಲಿ ನಿರತವಾಯಿತು. ಇದು ನಿಮಗೆ ಅಧಿಕಾರದಲ್ಲಿರುವವರ ದಂಧೆ ಎಂದು ಅನಿಸುವುದಿಲ್ಲವೇ?” ಎಂದು ಅವರು ಆರೋಪ ಮಾಡಿದರು.

”ಬಿಜೆಪಿ ನಾಯಕರು ”ಅಹಂಕಾರಿ”ಗಳು ಏಕೆಂದರೆ ಅವರು ಜನಸಮಾfಯರ ಕುರಿತಾದ ಯಾವುದೇ ಪ್ರಶ್ನೆಗಳಿಗೆ ಅಥವಾ ಅವರನ್ನು ಉದ್ದೇಶಿಸಿ ಬರೆದ ಯಾವುದೇ ಪತ್ರಕ್ಕೆ ಉತ್ತರಿಸುವುದಿಲ್ಲ” ಎಂದು ಹೇಳಿದರು.

ರಾಜ್ಯದಲ್ಲಿನ ಅಭಿವೃದ್ಧ ಕೆಲಸಗಳಿಗೆ ಶೇ.40ರಷ್ಟು ಕಮಿಷನ್ ವಸೂಲಿ ಮಾಡುತ್ತಿರುವ ಬಗ್ಗೆ ಕರ್ನಾಟಕದ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿರುವ ಬಗ್ಗೆ ಸೋನಿಯಾ ಗಾಂಧಿ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

”ಅವರಿಗೆ (ಬಿಜೆಪಿ ನಾಯಕರು) ಉತ್ತರ ನೀಡುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ. ಇಂತಹ ನಿರಂಕುಶತೆಯನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾಪ್ರಭುತ್ವವು ಈ ರೀತಿ ಕಾರ್ಯನಿರ್ವಹಿಸುತ್ತದೆಯೇ? ಇಲ್ಲ” ಎಂದು ಸೋನಿಯಾ ಗಾಂಧಿ ಸಾರ್ವಜನಿಕರು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

”ಅವರ ಪ್ರಕಾರ, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರ “ಆಶೀರ್ವಾದ” ಸಿಗುವುದಿಲ್ಲ ಎಂದು ಬಿಜೆಪಿ ನಾಯಕರು ಬಹಿರಂಗವಾಗಿ ಬೆದರಿಕೆ ಹಾಕುವ ಪರಿಸ್ಥಿತಿ ಇಂದಿನದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ರ್ಯಾಲಿಯಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಅವರನ್ನು ಹೆಸರಿಸದೆ ಹೇಳಿದರು.

ಕರ್ನಾಟಕದ ಜನರು ಮೇ 10 ರಂದು ನಿಮಗೆ ಬುದ್ದಿ ಕಲಿಸುತ್ತಾರೆ. ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ ಅನ್ನು ಗುಜರಾತ್ ಮೂಲದ ಅಮುಲ್ ಜೊತೆ ವಿಲೀನಗೊಳಿಸುವ ಪ್ರಯತ್ನದ ಬಗ್ಗೆಯೂ ಸೋನಿಯಾ ಗಾಂಧಿ ಪ್ರಸ್ತಾಪಿಸಿದರು.

ಲಕ್ಷಾಂತರ ರೈತರು ಮತ್ತು ಹಾಲು ಉತ್ಪಾದಕರ ಹಿತಾಸಕ್ತಿಗಳನ್ನು ಕಡೆಗಣಿಸಿ ನಂದಿನಿಯಂತಹ ಉತ್ತಮ ಸಂಸ್ಥೆಯನ್ನು (ಕರ್ನಾಟಕ ಹಾಲು ಒಕ್ಕೂಟದ ಸಹಕಾರಿ ಡೈರಿ ಬ್ರಾಂಡ್) ಲೂಟಿ ಮಾಡುವ ಸಂಚು ಇಲ್ಲಿ ನಡೆಯುವುದಿಲ್ಲ ಎಂದು ಅವರಿಗೆ (ಬಿಜೆಪಿ) ಹೇಳುವ ಸಮಯ ಈಗ ಬಂದಿದೆ ಎಂದರು.

ನಾಯಕರ ಭವಿಷ್ಯವನ್ನು ಜನರ ಆಶೀರ್ವಾದದಿಂದ ನಿರ್ಧರಿಸಲಾಗುತ್ತದೆಯೇ ಹೊರತು ಬೇರೆ ರೀತಿಯಲ್ಲಿ ಅಲ್ಲ ಎಂಬುದನ್ನು ಅಧಿಕಾರದಲ್ಲಿರುವವರಿಗೆ ನೆನಪಿಸಬೇಕೆಂದು ಸೋನಿಯಾ ಗಾಂಧಿ ಜನರಿಗೆ ಮನವಿ ಮಾಡಿದರು.

12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ನಾಮಸ್ಮರಣೆ ಮಾಡಿದ ಅವರು, ‘ಭಗವಾನ್ ಬಸವಣ್ಣ’ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದರು.

ಬಿಜೆಪಿಯು ಕನ್ನಡದ ಮಹಾನ್ ಕವಿ ಕುವೆಂಪು ಅವರನ್ನು ಅವಮಾನಿಸುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದರು.

”ನಿಮ್ಮ (ಬಿಜೆಪಿ) ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು, ರಾಷ್ಟ್ರ ಮತ್ತು ಕರ್ನಾಟಕವನ್ನು ವಿನಾಶದತ್ತ ತಳ್ಳಬೇಡಿ” ಎಂದು ಸೋನಿಯಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...