Homeಕರ್ನಾಟಕಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

ಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

- Advertisement -
- Advertisement -

ಆಡಳಿತ ಪಕ್ಷದ ಲೂಟಿ, ಸುಳ್ಳು, ಅಹಂಕಾರ ಮತ್ತು ದ್ವೇಷವನ್ನು ತೊಡೆದುಹಾಕದೆ ಕರ್ನಾಟಕ ಮತ್ತು ದೇಶದ ಉಳಿದ ಭಾಗಗಳು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿಯವರ 4,000 ಕಿಮೀ ಪಾದಯಾತ್ರೆ ನಡೆಸಿದರು. ಈ ವೇಳೆ ಲಕ್ಷಾಂತರ ಜನರು ಸೇರಿದ್ದರು ಏಕೆಂದರೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ದ್ವೇಷವನ್ನು ಹರಡುವವರ ವಿರುದ್ಧವಾಗಿತ್ತು” ಎಂದು ಹೇಳಿದರು.

”ಬಿಜೆಪಿಯ ಲೂಟಿ, ಸುಳ್ಳು, ಅಹಂ ಮತ್ತು ದ್ವೇಷದ ವಾತಾವರಣವನ್ನು ತೊಡೆದುಹಾಕದೆ ಕರ್ನಾಟಕ ಅಥವಾ ಭಾರತ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಅವರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ತಮ್ಮ ಮೊದಲ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದರು.

ಈ (ಬಿಜೆಪಿ) ಸರ್ಕಾರದ ಕರಾಳ ಆಡಳಿತದ ವಿರುದ್ಧ ನಮ್ಮ ಧ್ವನಿಯನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಬೆಚ್ಚಿಬಿದ್ದಿದೆ ಎಂಬುದನ್ನು ಜನರು ನೋಡಿದ್ದಾರೆ, ಅದಕ್ಕಾಗಿಯೇ ಅದು ಎಲ್ಲಾ ರೀತಿಯ ದಬ್ಬಾಳಿಕೆಯನ್ನು ನಡೆಸುತ್ತಿದೆ ಎಂದರು.

”ನೀವು 2018ರಲ್ಲಿ ಅವರಿಗೆ ಅಧಿಕಾರ ನೀಡಲಿಲ್ಲ ಆದರೆ ಅವರು ಸರ್ಕಾರವನ್ನು ಲೂಟಿ ಮಾಡಿ ಅದನ್ನು ವಶಪಡಿಸಿಕೊಂಡರು. ನಂತರ ಅವರ 40 ಪರ್ಸೆಂಟ್ ಕಮಿಷನ್ ಸರ್ಕಾರವು ಲೂಟಿಯಲ್ಲಿ ನಿರತವಾಯಿತು. ಇದು ನಿಮಗೆ ಅಧಿಕಾರದಲ್ಲಿರುವವರ ದಂಧೆ ಎಂದು ಅನಿಸುವುದಿಲ್ಲವೇ?” ಎಂದು ಅವರು ಆರೋಪ ಮಾಡಿದರು.

”ಬಿಜೆಪಿ ನಾಯಕರು ”ಅಹಂಕಾರಿ”ಗಳು ಏಕೆಂದರೆ ಅವರು ಜನಸಮಾfಯರ ಕುರಿತಾದ ಯಾವುದೇ ಪ್ರಶ್ನೆಗಳಿಗೆ ಅಥವಾ ಅವರನ್ನು ಉದ್ದೇಶಿಸಿ ಬರೆದ ಯಾವುದೇ ಪತ್ರಕ್ಕೆ ಉತ್ತರಿಸುವುದಿಲ್ಲ” ಎಂದು ಹೇಳಿದರು.

ರಾಜ್ಯದಲ್ಲಿನ ಅಭಿವೃದ್ಧ ಕೆಲಸಗಳಿಗೆ ಶೇ.40ರಷ್ಟು ಕಮಿಷನ್ ವಸೂಲಿ ಮಾಡುತ್ತಿರುವ ಬಗ್ಗೆ ಕರ್ನಾಟಕದ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿರುವ ಬಗ್ಗೆ ಸೋನಿಯಾ ಗಾಂಧಿ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

”ಅವರಿಗೆ (ಬಿಜೆಪಿ ನಾಯಕರು) ಉತ್ತರ ನೀಡುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ. ಇಂತಹ ನಿರಂಕುಶತೆಯನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾಪ್ರಭುತ್ವವು ಈ ರೀತಿ ಕಾರ್ಯನಿರ್ವಹಿಸುತ್ತದೆಯೇ? ಇಲ್ಲ” ಎಂದು ಸೋನಿಯಾ ಗಾಂಧಿ ಸಾರ್ವಜನಿಕರು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

”ಅವರ ಪ್ರಕಾರ, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರ “ಆಶೀರ್ವಾದ” ಸಿಗುವುದಿಲ್ಲ ಎಂದು ಬಿಜೆಪಿ ನಾಯಕರು ಬಹಿರಂಗವಾಗಿ ಬೆದರಿಕೆ ಹಾಕುವ ಪರಿಸ್ಥಿತಿ ಇಂದಿನದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ರ್ಯಾಲಿಯಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಅವರನ್ನು ಹೆಸರಿಸದೆ ಹೇಳಿದರು.

ಕರ್ನಾಟಕದ ಜನರು ಮೇ 10 ರಂದು ನಿಮಗೆ ಬುದ್ದಿ ಕಲಿಸುತ್ತಾರೆ. ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ ಅನ್ನು ಗುಜರಾತ್ ಮೂಲದ ಅಮುಲ್ ಜೊತೆ ವಿಲೀನಗೊಳಿಸುವ ಪ್ರಯತ್ನದ ಬಗ್ಗೆಯೂ ಸೋನಿಯಾ ಗಾಂಧಿ ಪ್ರಸ್ತಾಪಿಸಿದರು.

ಲಕ್ಷಾಂತರ ರೈತರು ಮತ್ತು ಹಾಲು ಉತ್ಪಾದಕರ ಹಿತಾಸಕ್ತಿಗಳನ್ನು ಕಡೆಗಣಿಸಿ ನಂದಿನಿಯಂತಹ ಉತ್ತಮ ಸಂಸ್ಥೆಯನ್ನು (ಕರ್ನಾಟಕ ಹಾಲು ಒಕ್ಕೂಟದ ಸಹಕಾರಿ ಡೈರಿ ಬ್ರಾಂಡ್) ಲೂಟಿ ಮಾಡುವ ಸಂಚು ಇಲ್ಲಿ ನಡೆಯುವುದಿಲ್ಲ ಎಂದು ಅವರಿಗೆ (ಬಿಜೆಪಿ) ಹೇಳುವ ಸಮಯ ಈಗ ಬಂದಿದೆ ಎಂದರು.

ನಾಯಕರ ಭವಿಷ್ಯವನ್ನು ಜನರ ಆಶೀರ್ವಾದದಿಂದ ನಿರ್ಧರಿಸಲಾಗುತ್ತದೆಯೇ ಹೊರತು ಬೇರೆ ರೀತಿಯಲ್ಲಿ ಅಲ್ಲ ಎಂಬುದನ್ನು ಅಧಿಕಾರದಲ್ಲಿರುವವರಿಗೆ ನೆನಪಿಸಬೇಕೆಂದು ಸೋನಿಯಾ ಗಾಂಧಿ ಜನರಿಗೆ ಮನವಿ ಮಾಡಿದರು.

12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ನಾಮಸ್ಮರಣೆ ಮಾಡಿದ ಅವರು, ‘ಭಗವಾನ್ ಬಸವಣ್ಣ’ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದರು.

ಬಿಜೆಪಿಯು ಕನ್ನಡದ ಮಹಾನ್ ಕವಿ ಕುವೆಂಪು ಅವರನ್ನು ಅವಮಾನಿಸುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದರು.

”ನಿಮ್ಮ (ಬಿಜೆಪಿ) ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು, ರಾಷ್ಟ್ರ ಮತ್ತು ಕರ್ನಾಟಕವನ್ನು ವಿನಾಶದತ್ತ ತಳ್ಳಬೇಡಿ” ಎಂದು ಸೋನಿಯಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...