Homeಕರ್ನಾಟಕಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

ಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

- Advertisement -
- Advertisement -

ಆಡಳಿತ ಪಕ್ಷದ ಲೂಟಿ, ಸುಳ್ಳು, ಅಹಂಕಾರ ಮತ್ತು ದ್ವೇಷವನ್ನು ತೊಡೆದುಹಾಕದೆ ಕರ್ನಾಟಕ ಮತ್ತು ದೇಶದ ಉಳಿದ ಭಾಗಗಳು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿಯವರ 4,000 ಕಿಮೀ ಪಾದಯಾತ್ರೆ ನಡೆಸಿದರು. ಈ ವೇಳೆ ಲಕ್ಷಾಂತರ ಜನರು ಸೇರಿದ್ದರು ಏಕೆಂದರೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ದ್ವೇಷವನ್ನು ಹರಡುವವರ ವಿರುದ್ಧವಾಗಿತ್ತು” ಎಂದು ಹೇಳಿದರು.

”ಬಿಜೆಪಿಯ ಲೂಟಿ, ಸುಳ್ಳು, ಅಹಂ ಮತ್ತು ದ್ವೇಷದ ವಾತಾವರಣವನ್ನು ತೊಡೆದುಹಾಕದೆ ಕರ್ನಾಟಕ ಅಥವಾ ಭಾರತ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಅವರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ತಮ್ಮ ಮೊದಲ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದರು.

ಈ (ಬಿಜೆಪಿ) ಸರ್ಕಾರದ ಕರಾಳ ಆಡಳಿತದ ವಿರುದ್ಧ ನಮ್ಮ ಧ್ವನಿಯನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಬೆಚ್ಚಿಬಿದ್ದಿದೆ ಎಂಬುದನ್ನು ಜನರು ನೋಡಿದ್ದಾರೆ, ಅದಕ್ಕಾಗಿಯೇ ಅದು ಎಲ್ಲಾ ರೀತಿಯ ದಬ್ಬಾಳಿಕೆಯನ್ನು ನಡೆಸುತ್ತಿದೆ ಎಂದರು.

”ನೀವು 2018ರಲ್ಲಿ ಅವರಿಗೆ ಅಧಿಕಾರ ನೀಡಲಿಲ್ಲ ಆದರೆ ಅವರು ಸರ್ಕಾರವನ್ನು ಲೂಟಿ ಮಾಡಿ ಅದನ್ನು ವಶಪಡಿಸಿಕೊಂಡರು. ನಂತರ ಅವರ 40 ಪರ್ಸೆಂಟ್ ಕಮಿಷನ್ ಸರ್ಕಾರವು ಲೂಟಿಯಲ್ಲಿ ನಿರತವಾಯಿತು. ಇದು ನಿಮಗೆ ಅಧಿಕಾರದಲ್ಲಿರುವವರ ದಂಧೆ ಎಂದು ಅನಿಸುವುದಿಲ್ಲವೇ?” ಎಂದು ಅವರು ಆರೋಪ ಮಾಡಿದರು.

”ಬಿಜೆಪಿ ನಾಯಕರು ”ಅಹಂಕಾರಿ”ಗಳು ಏಕೆಂದರೆ ಅವರು ಜನಸಮಾfಯರ ಕುರಿತಾದ ಯಾವುದೇ ಪ್ರಶ್ನೆಗಳಿಗೆ ಅಥವಾ ಅವರನ್ನು ಉದ್ದೇಶಿಸಿ ಬರೆದ ಯಾವುದೇ ಪತ್ರಕ್ಕೆ ಉತ್ತರಿಸುವುದಿಲ್ಲ” ಎಂದು ಹೇಳಿದರು.

ರಾಜ್ಯದಲ್ಲಿನ ಅಭಿವೃದ್ಧ ಕೆಲಸಗಳಿಗೆ ಶೇ.40ರಷ್ಟು ಕಮಿಷನ್ ವಸೂಲಿ ಮಾಡುತ್ತಿರುವ ಬಗ್ಗೆ ಕರ್ನಾಟಕದ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿರುವ ಬಗ್ಗೆ ಸೋನಿಯಾ ಗಾಂಧಿ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

”ಅವರಿಗೆ (ಬಿಜೆಪಿ ನಾಯಕರು) ಉತ್ತರ ನೀಡುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ. ಇಂತಹ ನಿರಂಕುಶತೆಯನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾಪ್ರಭುತ್ವವು ಈ ರೀತಿ ಕಾರ್ಯನಿರ್ವಹಿಸುತ್ತದೆಯೇ? ಇಲ್ಲ” ಎಂದು ಸೋನಿಯಾ ಗಾಂಧಿ ಸಾರ್ವಜನಿಕರು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

”ಅವರ ಪ್ರಕಾರ, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರ “ಆಶೀರ್ವಾದ” ಸಿಗುವುದಿಲ್ಲ ಎಂದು ಬಿಜೆಪಿ ನಾಯಕರು ಬಹಿರಂಗವಾಗಿ ಬೆದರಿಕೆ ಹಾಕುವ ಪರಿಸ್ಥಿತಿ ಇಂದಿನದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ರ್ಯಾಲಿಯಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಅವರನ್ನು ಹೆಸರಿಸದೆ ಹೇಳಿದರು.

ಕರ್ನಾಟಕದ ಜನರು ಮೇ 10 ರಂದು ನಿಮಗೆ ಬುದ್ದಿ ಕಲಿಸುತ್ತಾರೆ. ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ ಅನ್ನು ಗುಜರಾತ್ ಮೂಲದ ಅಮುಲ್ ಜೊತೆ ವಿಲೀನಗೊಳಿಸುವ ಪ್ರಯತ್ನದ ಬಗ್ಗೆಯೂ ಸೋನಿಯಾ ಗಾಂಧಿ ಪ್ರಸ್ತಾಪಿಸಿದರು.

ಲಕ್ಷಾಂತರ ರೈತರು ಮತ್ತು ಹಾಲು ಉತ್ಪಾದಕರ ಹಿತಾಸಕ್ತಿಗಳನ್ನು ಕಡೆಗಣಿಸಿ ನಂದಿನಿಯಂತಹ ಉತ್ತಮ ಸಂಸ್ಥೆಯನ್ನು (ಕರ್ನಾಟಕ ಹಾಲು ಒಕ್ಕೂಟದ ಸಹಕಾರಿ ಡೈರಿ ಬ್ರಾಂಡ್) ಲೂಟಿ ಮಾಡುವ ಸಂಚು ಇಲ್ಲಿ ನಡೆಯುವುದಿಲ್ಲ ಎಂದು ಅವರಿಗೆ (ಬಿಜೆಪಿ) ಹೇಳುವ ಸಮಯ ಈಗ ಬಂದಿದೆ ಎಂದರು.

ನಾಯಕರ ಭವಿಷ್ಯವನ್ನು ಜನರ ಆಶೀರ್ವಾದದಿಂದ ನಿರ್ಧರಿಸಲಾಗುತ್ತದೆಯೇ ಹೊರತು ಬೇರೆ ರೀತಿಯಲ್ಲಿ ಅಲ್ಲ ಎಂಬುದನ್ನು ಅಧಿಕಾರದಲ್ಲಿರುವವರಿಗೆ ನೆನಪಿಸಬೇಕೆಂದು ಸೋನಿಯಾ ಗಾಂಧಿ ಜನರಿಗೆ ಮನವಿ ಮಾಡಿದರು.

12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ನಾಮಸ್ಮರಣೆ ಮಾಡಿದ ಅವರು, ‘ಭಗವಾನ್ ಬಸವಣ್ಣ’ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದರು.

ಬಿಜೆಪಿಯು ಕನ್ನಡದ ಮಹಾನ್ ಕವಿ ಕುವೆಂಪು ಅವರನ್ನು ಅವಮಾನಿಸುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದರು.

”ನಿಮ್ಮ (ಬಿಜೆಪಿ) ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು, ರಾಷ್ಟ್ರ ಮತ್ತು ಕರ್ನಾಟಕವನ್ನು ವಿನಾಶದತ್ತ ತಳ್ಳಬೇಡಿ” ಎಂದು ಸೋನಿಯಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...