Homeಕರ್ನಾಟಕಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

ಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ, ದ್ವೇಷ ತೊಡೆದುಹಾಕದೆ ಕರ್ನಾಟಕದ ಪ್ರಗತಿ ಸಾಧ್ಯವಿಲ್ಲ: ಸೋನಿಯಾ ಗಾಂಧಿ ವಾಗ್ದಾಳಿ

- Advertisement -
- Advertisement -

ಆಡಳಿತ ಪಕ್ಷದ ಲೂಟಿ, ಸುಳ್ಳು, ಅಹಂಕಾರ ಮತ್ತು ದ್ವೇಷವನ್ನು ತೊಡೆದುಹಾಕದೆ ಕರ್ನಾಟಕ ಮತ್ತು ದೇಶದ ಉಳಿದ ಭಾಗಗಳು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಶನಿವಾರ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.

“ರಾಹುಲ್ ಗಾಂಧಿಯವರ 4,000 ಕಿಮೀ ಪಾದಯಾತ್ರೆ ನಡೆಸಿದರು. ಈ ವೇಳೆ ಲಕ್ಷಾಂತರ ಜನರು ಸೇರಿದ್ದರು ಏಕೆಂದರೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ದ್ವೇಷವನ್ನು ಹರಡುವವರ ವಿರುದ್ಧವಾಗಿತ್ತು” ಎಂದು ಹೇಳಿದರು.

”ಬಿಜೆಪಿಯ ಲೂಟಿ, ಸುಳ್ಳು, ಅಹಂ ಮತ್ತು ದ್ವೇಷದ ವಾತಾವರಣವನ್ನು ತೊಡೆದುಹಾಕದೆ ಕರ್ನಾಟಕ ಅಥವಾ ಭಾರತ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಅವರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ತಮ್ಮ ಮೊದಲ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದರು.

ಈ (ಬಿಜೆಪಿ) ಸರ್ಕಾರದ ಕರಾಳ ಆಡಳಿತದ ವಿರುದ್ಧ ನಮ್ಮ ಧ್ವನಿಯನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಬೆಚ್ಚಿಬಿದ್ದಿದೆ ಎಂಬುದನ್ನು ಜನರು ನೋಡಿದ್ದಾರೆ, ಅದಕ್ಕಾಗಿಯೇ ಅದು ಎಲ್ಲಾ ರೀತಿಯ ದಬ್ಬಾಳಿಕೆಯನ್ನು ನಡೆಸುತ್ತಿದೆ ಎಂದರು.

”ನೀವು 2018ರಲ್ಲಿ ಅವರಿಗೆ ಅಧಿಕಾರ ನೀಡಲಿಲ್ಲ ಆದರೆ ಅವರು ಸರ್ಕಾರವನ್ನು ಲೂಟಿ ಮಾಡಿ ಅದನ್ನು ವಶಪಡಿಸಿಕೊಂಡರು. ನಂತರ ಅವರ 40 ಪರ್ಸೆಂಟ್ ಕಮಿಷನ್ ಸರ್ಕಾರವು ಲೂಟಿಯಲ್ಲಿ ನಿರತವಾಯಿತು. ಇದು ನಿಮಗೆ ಅಧಿಕಾರದಲ್ಲಿರುವವರ ದಂಧೆ ಎಂದು ಅನಿಸುವುದಿಲ್ಲವೇ?” ಎಂದು ಅವರು ಆರೋಪ ಮಾಡಿದರು.

”ಬಿಜೆಪಿ ನಾಯಕರು ”ಅಹಂಕಾರಿ”ಗಳು ಏಕೆಂದರೆ ಅವರು ಜನಸಮಾfಯರ ಕುರಿತಾದ ಯಾವುದೇ ಪ್ರಶ್ನೆಗಳಿಗೆ ಅಥವಾ ಅವರನ್ನು ಉದ್ದೇಶಿಸಿ ಬರೆದ ಯಾವುದೇ ಪತ್ರಕ್ಕೆ ಉತ್ತರಿಸುವುದಿಲ್ಲ” ಎಂದು ಹೇಳಿದರು.

ರಾಜ್ಯದಲ್ಲಿನ ಅಭಿವೃದ್ಧ ಕೆಲಸಗಳಿಗೆ ಶೇ.40ರಷ್ಟು ಕಮಿಷನ್ ವಸೂಲಿ ಮಾಡುತ್ತಿರುವ ಬಗ್ಗೆ ಕರ್ನಾಟಕದ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿರುವ ಬಗ್ಗೆ ಸೋನಿಯಾ ಗಾಂಧಿ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

”ಅವರಿಗೆ (ಬಿಜೆಪಿ ನಾಯಕರು) ಉತ್ತರ ನೀಡುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ. ಇಂತಹ ನಿರಂಕುಶತೆಯನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾಪ್ರಭುತ್ವವು ಈ ರೀತಿ ಕಾರ್ಯನಿರ್ವಹಿಸುತ್ತದೆಯೇ? ಇಲ್ಲ” ಎಂದು ಸೋನಿಯಾ ಗಾಂಧಿ ಸಾರ್ವಜನಿಕರು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

”ಅವರ ಪ್ರಕಾರ, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರ “ಆಶೀರ್ವಾದ” ಸಿಗುವುದಿಲ್ಲ ಎಂದು ಬಿಜೆಪಿ ನಾಯಕರು ಬಹಿರಂಗವಾಗಿ ಬೆದರಿಕೆ ಹಾಕುವ ಪರಿಸ್ಥಿತಿ ಇಂದಿನದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ರ್ಯಾಲಿಯಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಅವರನ್ನು ಹೆಸರಿಸದೆ ಹೇಳಿದರು.

ಕರ್ನಾಟಕದ ಜನರು ಮೇ 10 ರಂದು ನಿಮಗೆ ಬುದ್ದಿ ಕಲಿಸುತ್ತಾರೆ. ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ ಅನ್ನು ಗುಜರಾತ್ ಮೂಲದ ಅಮುಲ್ ಜೊತೆ ವಿಲೀನಗೊಳಿಸುವ ಪ್ರಯತ್ನದ ಬಗ್ಗೆಯೂ ಸೋನಿಯಾ ಗಾಂಧಿ ಪ್ರಸ್ತಾಪಿಸಿದರು.

ಲಕ್ಷಾಂತರ ರೈತರು ಮತ್ತು ಹಾಲು ಉತ್ಪಾದಕರ ಹಿತಾಸಕ್ತಿಗಳನ್ನು ಕಡೆಗಣಿಸಿ ನಂದಿನಿಯಂತಹ ಉತ್ತಮ ಸಂಸ್ಥೆಯನ್ನು (ಕರ್ನಾಟಕ ಹಾಲು ಒಕ್ಕೂಟದ ಸಹಕಾರಿ ಡೈರಿ ಬ್ರಾಂಡ್) ಲೂಟಿ ಮಾಡುವ ಸಂಚು ಇಲ್ಲಿ ನಡೆಯುವುದಿಲ್ಲ ಎಂದು ಅವರಿಗೆ (ಬಿಜೆಪಿ) ಹೇಳುವ ಸಮಯ ಈಗ ಬಂದಿದೆ ಎಂದರು.

ನಾಯಕರ ಭವಿಷ್ಯವನ್ನು ಜನರ ಆಶೀರ್ವಾದದಿಂದ ನಿರ್ಧರಿಸಲಾಗುತ್ತದೆಯೇ ಹೊರತು ಬೇರೆ ರೀತಿಯಲ್ಲಿ ಅಲ್ಲ ಎಂಬುದನ್ನು ಅಧಿಕಾರದಲ್ಲಿರುವವರಿಗೆ ನೆನಪಿಸಬೇಕೆಂದು ಸೋನಿಯಾ ಗಾಂಧಿ ಜನರಿಗೆ ಮನವಿ ಮಾಡಿದರು.

12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ನಾಮಸ್ಮರಣೆ ಮಾಡಿದ ಅವರು, ‘ಭಗವಾನ್ ಬಸವಣ್ಣ’ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದರು.

ಬಿಜೆಪಿಯು ಕನ್ನಡದ ಮಹಾನ್ ಕವಿ ಕುವೆಂಪು ಅವರನ್ನು ಅವಮಾನಿಸುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದರು.

”ನಿಮ್ಮ (ಬಿಜೆಪಿ) ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು, ರಾಷ್ಟ್ರ ಮತ್ತು ಕರ್ನಾಟಕವನ್ನು ವಿನಾಶದತ್ತ ತಳ್ಳಬೇಡಿ” ಎಂದು ಸೋನಿಯಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...