Homeಮುಖಪುಟಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

- Advertisement -
- Advertisement -

ರಾಜ್ಯ ಮುಖ್ಯ ಚುನಾವಣಾಧಿಕಾರಿ ಭಾನುವಾರ (ಆ.10) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ.

ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಿದರೆ ನಮಗೆ ಈ ಬಗ್ಗೆ ತನಿಖೆ ನಡೆಸಲು ಸಹಕಾರಿಯಾಗುತ್ತದೆ ಎಂದು ಚುನಾವಣಾ ಆಯುಕ್ತರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎರಡು ದಿನಗಳ ಹಿಂದೆ ದೆಹಲಿಯಲ್ಲಿ ವಿಶೇಷ ಸಂವಾದ ಏರ್ಪಡಿಸಿದ್ದ ರಾಹುಲ್ ಗಾಂಧಿ, 2024ರ ಲೋಕಸಭೆ ಚುನಾವಣೆಯಲ್ಲಿ ವ್ಯಾಪಕ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು. ಈ ಕುರಿತ ದಾಖಲೆ ಬಿಡುಗಡೆ ಮಾಡಿದ್ದರು.

“ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎಂಬವರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. ನಮ್ಮ ವಿಚಾರಣೆ ವೇಳೆ ಶಕುನ್ ರಾಣಿ ಅವರು ನೀವು ಆರೋಪಿಸಿದಂತೆ ಎರಡು ಬಾರಿ ಅಲ್ಲ, ಒಮ್ಮೆ ಮಾತ್ರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದಾರೆ” ಎಂದು ರಾಹುಲ್ ಗಾಂಧಿಗೆ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮುಖ್ಯ ಚುನಾವಣಾಧಿಕಾರಿಯ ಕಚೇರಿ ನಡೆಸಿದ ಪ್ರಾಥಮಿಕ ವಿಚಾರಣೆಯಲ್ಲಿ ರಾಹುಲ್ ಗಾಂಧಿ ತೋರಿಸಿದ ಟಿಕ್-ಗುರುತು ಮಾಡಿದ ದಾಖಲೆಯನ್ನು ಚುನಾವಣಾ ಅಧಿಕಾರಿ ನೀಡಿಲ್ಲ ಎಂಬುವುದು ತಿಳಿದುಬಂದಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

“ಆದ್ದರಿಂದ, ಶಕುನ್ ರಾಣಿ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಮಾಡಿರುವ ಆರೋಪಕ್ಕೆ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ವಿನಂತಿಸುತ್ತೇವೆ. ಇದರಿಂದ ಚುನಾವಣಾಧಿಕಾರಿ ಕಚೇರಿ ವಿವರವಾದ ವಿಚಾರಣೆಯನ್ನು ಕೈಗೊಳ್ಳಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಲೋಕಸಭೆ ಚುನಾವಣೆ ವೇಳೆ ಮತಗಳ್ಳತನ ನಡೆಸಲು ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈ ಜೋಡಿಸಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಮತದಾರರ ಪಟ್ಟಿಗೆ ನಕಲಿ ಹೆಸರುಗಳನ್ನು ಸೇರಿಸಲಾಗುತ್ತಿದೆ ಎಂದಿದ್ದರು. ತನ್ನ ಆರೋಪಕ್ಕೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಪುರಾವೆಯಾಗಿ ಉಲ್ಲೇಖಿಸಿದ್ದರು.

ಮಹದೇವಪುರದಲ್ಲಿ 6.5 ಲಕ್ಷ ಮತಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ನಕಲಿ ಎಂದು ರಾಹುಲ್ ಗಾಂಧಿ ಹೇಳಿದ್ದರು. ಕಾಂಗ್ರೆಸ್‌ನ ಆಂತರಿಕ ಪರಿಶೀಲನೆಯಲ್ಲಿ 11,965 ನಕಲಿ ಮತದಾರರು, 40,009 ನಕಲಿ ಅಥವಾ ಅಮಾನ್ಯ ವಿಳಾಸಗಳನ್ನು ಹೊಂದಿರುವವರು, 10,452 ಬೃಹತ್ ಮತದಾರರು ಒಂದೇ ವಿಳಾಸದಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಮತ್ತು 4,132 ಅಮಾನ್ಯ ಫೋಟೋಗಳನ್ನು ಹೊಂದಿರುವವರು ಕಂಡುಬಂದಿದ್ದಾರೆ ಎಂದಿದ್ದರು. 33,692 ಮತದಾರರು ಹೊಸ ನೋಂದಣಿಗಾಗಿ ಉದ್ದೇಶಿಸಲಾದ ಫಾರ್ಮ್ 6 ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು. ಆರಂಭದಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಮುನ್ನಡೆಯಲ್ಲಿದ್ದರು, ನಂತರ ಬಿಜೆಪಿಯ ಪಿ.ಸಿ ಮೋಹನ್ 32,707 ಮತಗಳಿಂದ ಗೆದ್ದರು. ಕ್ಷೇತ್ರದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಗೆದ್ದಿದೆ. ಆದರೆ, ಮಹದೇವಪುರದಲ್ಲಿ 1,14,000 ಮತಗಳನ್ನು ಕಳೆದುಕೊಂಡಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಕ್ಷೇತ್ರದಲ್ಲಿ ಮತಗಳ್ಳತನದ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಎಲೆಕ್ಟ್ರಾನಿಕ್ ಸ್ವರೂಪದಲ್ಲಿ ಮತದಾರರ ಪಟ್ಟಿಗಳನ್ನು ಒದಗಿಸದಿದ್ದಕ್ಕಾಗಿ ಅವರು ಚುನಾವಣಾ ಆಯೋಗವನ್ನು ಟೀಕಿಸಿದ್ದರು. ಮೆಶಿನ್ ರೀಡೇಬಲ್ ಡೇಟಾದಿಂದ 30 ಸೆಕೆಂಡುಗಳಲ್ಲಿ ಆಪಾದಿತ ವಂಚನೆಯನ್ನು ಬಹಿರಂಗಪಡಿಸಬಹುದಿತ್ತು. ಆದರೆ,ಚುನಾವಣಾ ಆಯೋಗವು ಮೆಶಿನ್ ರೀಡೇಬಲ್ ಅಲ್ಲದ ಮತದಾರರ ಪಟ್ಟಿಗಳನ್ನು ಕೊಟ್ಟಿತ್ತು. ಇದರಿಂದಾಗಿ, ಪರಿಶೀಲನೆಗಾಗಿ ಪಕ್ಷಕ್ಕೆ ಆರು ತಿಂಗಳು ಸಮಯ ಬೇಕಾಯಿತು ಎಂದು ಹೇಳಿದ್ದರು.

ಚುನಾವಣಾ ಆಯೋಗವು ಆರೋಪಗಳನ್ನು ತಿರಸ್ಕರಿಸಿದೆ, ಮೂಲಗಳು ರಾಹುಲ್ ಗಾಂಧಿಯವರನ್ನು ಸಹಿ ಮಾಡಿದ ಪುರಾವೆಗಳನ್ನು ಸಲ್ಲಿಸುವಂತೆ ಅಥವಾ “ಆಧಾರರಹಿತ ಆರೋಪಗಳನ್ನು” ಮಾಡದಂತೆ ಕೇಳಿಕೊಂಡಿವೆ ಎಂದು ಹೇಳಿವೆ. ಕರ್ನಾಟಕ ಚುನಾವಣಾ ಪ್ರಾಧಿಕಾರವು ಅವರ ಹಕ್ಕುಗಳನ್ನು ವಿವರಿಸುವ ಸಹಿ ಮಾಡಿದ ಅಫಿಡವಿಟ್ ಅನ್ನು ಸಹ ಕೋರಿದೆ ಮತ್ತು ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ಪ್ರಶ್ನಿಸಿದೆ.

ಚುನಾವಣಾ ಆಯೋಗವು ರಾಹುಲ್ ಗಾಂಧಿಯ ಆರೋಪಗಳನ್ನು ತಿರಸ್ಕರಿಸಿದೆ. ರಾಹುಲ್ ಗಾಂಧಿಯವರು ತಾವು ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪುರಾವೆಗಳನ್ನು ಸಹಿ ಮಾಡಿ ಸಲ್ಲಿಸುವಂತೆ ಅಥವಾ ಹೇಳಿದೆ ಅಥವಾ ಆಧಾರರಹಿತ ಆರೋಪಗಳನ್ನು ಮಾಡದಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ.ಕರ್ನಾಟಕ ಚುನಾವಣಾ ಆಯೋಗ ಕೂಡ ತಮ್ಮ ಆರೋಪವನ್ನು ಸಹಿ ಮಾಡಿದ ಅಫಿಡವಿಟ್ ಮೂಲಕ ಸಲ್ಲಿಸುವಂತೆ ರಾಹುಲ್ ಗಾಂಧಿಯನ್ನು ಕೋರಿದೆ. ಯಾವುದೇ ಔಪಚಾರಿಕ ದೂರು ಏಕೆ ದಾಖಲಿಸಿಲ್ಲ ಎಂದು ಪ್ರಶ್ನಿಸಿದೆ.

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...