Homeಮುಖಪುಟಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

- Advertisement -
- Advertisement -

ರಾಜ್ಯ ಮುಖ್ಯ ಚುನಾವಣಾಧಿಕಾರಿ ಭಾನುವಾರ (ಆ.10) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ.

ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಿದರೆ ನಮಗೆ ಈ ಬಗ್ಗೆ ತನಿಖೆ ನಡೆಸಲು ಸಹಕಾರಿಯಾಗುತ್ತದೆ ಎಂದು ಚುನಾವಣಾ ಆಯುಕ್ತರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎರಡು ದಿನಗಳ ಹಿಂದೆ ದೆಹಲಿಯಲ್ಲಿ ವಿಶೇಷ ಸಂವಾದ ಏರ್ಪಡಿಸಿದ್ದ ರಾಹುಲ್ ಗಾಂಧಿ, 2024ರ ಲೋಕಸಭೆ ಚುನಾವಣೆಯಲ್ಲಿ ವ್ಯಾಪಕ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು. ಈ ಕುರಿತ ದಾಖಲೆ ಬಿಡುಗಡೆ ಮಾಡಿದ್ದರು.

“ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎಂಬವರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. ನಮ್ಮ ವಿಚಾರಣೆ ವೇಳೆ ಶಕುನ್ ರಾಣಿ ಅವರು ನೀವು ಆರೋಪಿಸಿದಂತೆ ಎರಡು ಬಾರಿ ಅಲ್ಲ, ಒಮ್ಮೆ ಮಾತ್ರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದಾರೆ” ಎಂದು ರಾಹುಲ್ ಗಾಂಧಿಗೆ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮುಖ್ಯ ಚುನಾವಣಾಧಿಕಾರಿಯ ಕಚೇರಿ ನಡೆಸಿದ ಪ್ರಾಥಮಿಕ ವಿಚಾರಣೆಯಲ್ಲಿ ರಾಹುಲ್ ಗಾಂಧಿ ತೋರಿಸಿದ ಟಿಕ್-ಗುರುತು ಮಾಡಿದ ದಾಖಲೆಯನ್ನು ಚುನಾವಣಾ ಅಧಿಕಾರಿ ನೀಡಿಲ್ಲ ಎಂಬುವುದು ತಿಳಿದುಬಂದಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

“ಆದ್ದರಿಂದ, ಶಕುನ್ ರಾಣಿ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಮಾಡಿರುವ ಆರೋಪಕ್ಕೆ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ವಿನಂತಿಸುತ್ತೇವೆ. ಇದರಿಂದ ಚುನಾವಣಾಧಿಕಾರಿ ಕಚೇರಿ ವಿವರವಾದ ವಿಚಾರಣೆಯನ್ನು ಕೈಗೊಳ್ಳಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಲೋಕಸಭೆ ಚುನಾವಣೆ ವೇಳೆ ಮತಗಳ್ಳತನ ನಡೆಸಲು ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈ ಜೋಡಿಸಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಮತದಾರರ ಪಟ್ಟಿಗೆ ನಕಲಿ ಹೆಸರುಗಳನ್ನು ಸೇರಿಸಲಾಗುತ್ತಿದೆ ಎಂದಿದ್ದರು. ತನ್ನ ಆರೋಪಕ್ಕೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಪುರಾವೆಯಾಗಿ ಉಲ್ಲೇಖಿಸಿದ್ದರು.

ಮಹದೇವಪುರದಲ್ಲಿ 6.5 ಲಕ್ಷ ಮತಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ನಕಲಿ ಎಂದು ರಾಹುಲ್ ಗಾಂಧಿ ಹೇಳಿದ್ದರು. ಕಾಂಗ್ರೆಸ್‌ನ ಆಂತರಿಕ ಪರಿಶೀಲನೆಯಲ್ಲಿ 11,965 ನಕಲಿ ಮತದಾರರು, 40,009 ನಕಲಿ ಅಥವಾ ಅಮಾನ್ಯ ವಿಳಾಸಗಳನ್ನು ಹೊಂದಿರುವವರು, 10,452 ಬೃಹತ್ ಮತದಾರರು ಒಂದೇ ವಿಳಾಸದಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಮತ್ತು 4,132 ಅಮಾನ್ಯ ಫೋಟೋಗಳನ್ನು ಹೊಂದಿರುವವರು ಕಂಡುಬಂದಿದ್ದಾರೆ ಎಂದಿದ್ದರು. 33,692 ಮತದಾರರು ಹೊಸ ನೋಂದಣಿಗಾಗಿ ಉದ್ದೇಶಿಸಲಾದ ಫಾರ್ಮ್ 6 ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು. ಆರಂಭದಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಮುನ್ನಡೆಯಲ್ಲಿದ್ದರು, ನಂತರ ಬಿಜೆಪಿಯ ಪಿ.ಸಿ ಮೋಹನ್ 32,707 ಮತಗಳಿಂದ ಗೆದ್ದರು. ಕ್ಷೇತ್ರದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಗೆದ್ದಿದೆ. ಆದರೆ, ಮಹದೇವಪುರದಲ್ಲಿ 1,14,000 ಮತಗಳನ್ನು ಕಳೆದುಕೊಂಡಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಕ್ಷೇತ್ರದಲ್ಲಿ ಮತಗಳ್ಳತನದ ನಡೆದಿದೆ ಎಂದು ಅವರು ಆರೋಪಿಸಿದ್ದರು.

ಎಲೆಕ್ಟ್ರಾನಿಕ್ ಸ್ವರೂಪದಲ್ಲಿ ಮತದಾರರ ಪಟ್ಟಿಗಳನ್ನು ಒದಗಿಸದಿದ್ದಕ್ಕಾಗಿ ಅವರು ಚುನಾವಣಾ ಆಯೋಗವನ್ನು ಟೀಕಿಸಿದ್ದರು. ಮೆಶಿನ್ ರೀಡೇಬಲ್ ಡೇಟಾದಿಂದ 30 ಸೆಕೆಂಡುಗಳಲ್ಲಿ ಆಪಾದಿತ ವಂಚನೆಯನ್ನು ಬಹಿರಂಗಪಡಿಸಬಹುದಿತ್ತು. ಆದರೆ,ಚುನಾವಣಾ ಆಯೋಗವು ಮೆಶಿನ್ ರೀಡೇಬಲ್ ಅಲ್ಲದ ಮತದಾರರ ಪಟ್ಟಿಗಳನ್ನು ಕೊಟ್ಟಿತ್ತು. ಇದರಿಂದಾಗಿ, ಪರಿಶೀಲನೆಗಾಗಿ ಪಕ್ಷಕ್ಕೆ ಆರು ತಿಂಗಳು ಸಮಯ ಬೇಕಾಯಿತು ಎಂದು ಹೇಳಿದ್ದರು.

ಚುನಾವಣಾ ಆಯೋಗವು ಆರೋಪಗಳನ್ನು ತಿರಸ್ಕರಿಸಿದೆ, ಮೂಲಗಳು ರಾಹುಲ್ ಗಾಂಧಿಯವರನ್ನು ಸಹಿ ಮಾಡಿದ ಪುರಾವೆಗಳನ್ನು ಸಲ್ಲಿಸುವಂತೆ ಅಥವಾ “ಆಧಾರರಹಿತ ಆರೋಪಗಳನ್ನು” ಮಾಡದಂತೆ ಕೇಳಿಕೊಂಡಿವೆ ಎಂದು ಹೇಳಿವೆ. ಕರ್ನಾಟಕ ಚುನಾವಣಾ ಪ್ರಾಧಿಕಾರವು ಅವರ ಹಕ್ಕುಗಳನ್ನು ವಿವರಿಸುವ ಸಹಿ ಮಾಡಿದ ಅಫಿಡವಿಟ್ ಅನ್ನು ಸಹ ಕೋರಿದೆ ಮತ್ತು ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ಪ್ರಶ್ನಿಸಿದೆ.

ಚುನಾವಣಾ ಆಯೋಗವು ರಾಹುಲ್ ಗಾಂಧಿಯ ಆರೋಪಗಳನ್ನು ತಿರಸ್ಕರಿಸಿದೆ. ರಾಹುಲ್ ಗಾಂಧಿಯವರು ತಾವು ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪುರಾವೆಗಳನ್ನು ಸಹಿ ಮಾಡಿ ಸಲ್ಲಿಸುವಂತೆ ಅಥವಾ ಹೇಳಿದೆ ಅಥವಾ ಆಧಾರರಹಿತ ಆರೋಪಗಳನ್ನು ಮಾಡದಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ.ಕರ್ನಾಟಕ ಚುನಾವಣಾ ಆಯೋಗ ಕೂಡ ತಮ್ಮ ಆರೋಪವನ್ನು ಸಹಿ ಮಾಡಿದ ಅಫಿಡವಿಟ್ ಮೂಲಕ ಸಲ್ಲಿಸುವಂತೆ ರಾಹುಲ್ ಗಾಂಧಿಯನ್ನು ಕೋರಿದೆ. ಯಾವುದೇ ಔಪಚಾರಿಕ ದೂರು ಏಕೆ ದಾಖಲಿಸಿಲ್ಲ ಎಂದು ಪ್ರಶ್ನಿಸಿದೆ.

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...