Homeಕರ್ನಾಟಕಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ’

- Advertisement -
- Advertisement -

“ಚಾಣಕ್ಯ ವಿಶ್ವವಿದ್ಯಾಲಯ ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್‌ಎಸ್‌ಎಸ್‌ನವರು.
ಸೆಸ್ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ರಾಜ್ಯ ಬಿಜೆಪಿ ಸರ್ಕಾರ ಏಪ್ರಿಲ್ 26 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆಐಎಡಿಬಿಗೆ ಸೇರಿದ 116 ಎಕರೆ 16 ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆಐಎಡಿಬಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ’ ಎಂದು ಆರೋಪಿಸಿದ್ದಾರೆ.

 

’ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.
ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ’ ಎಂದರು.

’ಕೆಐಎಡಿಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ’ ಎಂದಿದ್ದಾರೆ.

’ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

’ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು. ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...