Homeಕರ್ನಾಟಕಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ’

- Advertisement -
- Advertisement -

“ಚಾಣಕ್ಯ ವಿಶ್ವವಿದ್ಯಾಲಯ ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್‌ಎಸ್‌ಎಸ್‌ನವರು.
ಸೆಸ್ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ರಾಜ್ಯ ಬಿಜೆಪಿ ಸರ್ಕಾರ ಏಪ್ರಿಲ್ 26 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆಐಎಡಿಬಿಗೆ ಸೇರಿದ 116 ಎಕರೆ 16 ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆಐಎಡಿಬಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ’ ಎಂದು ಆರೋಪಿಸಿದ್ದಾರೆ.

 

’ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.
ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ’ ಎಂದರು.

’ಕೆಐಎಡಿಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ’ ಎಂದಿದ್ದಾರೆ.

’ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

’ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು. ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...