Homeಕರ್ನಾಟಕಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ’

- Advertisement -
- Advertisement -

“ಚಾಣಕ್ಯ ವಿಶ್ವವಿದ್ಯಾಲಯ ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್‌ಎಸ್‌ಎಸ್‌ನವರು.
ಸೆಸ್ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ರಾಜ್ಯ ಬಿಜೆಪಿ ಸರ್ಕಾರ ಏಪ್ರಿಲ್ 26 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆಐಎಡಿಬಿಗೆ ಸೇರಿದ 116 ಎಕರೆ 16 ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆಐಎಡಿಬಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ’ ಎಂದು ಆರೋಪಿಸಿದ್ದಾರೆ.

 

’ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.
ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ’ ಎಂದರು.

’ಕೆಐಎಡಿಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ’ ಎಂದಿದ್ದಾರೆ.

’ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

’ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು. ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...