Homeಮುಖಪುಟಕರ್ನಾಟಕ ಚರ್ಚ್ ಸ್ಪೋಟ ಅಪರಾಧಿಗಳ ಮಂಧ್ಯಂತರ ಜಾಮೀನು ತಿರಸ್ಕರಿಸಿದ ಸುಪ್ರೀಂಕೋರ್ಟ್

ಕರ್ನಾಟಕ ಚರ್ಚ್ ಸ್ಪೋಟ ಅಪರಾಧಿಗಳ ಮಂಧ್ಯಂತರ ಜಾಮೀನು ತಿರಸ್ಕರಿಸಿದ ಸುಪ್ರೀಂಕೋರ್ಟ್

ದೀಂದರ್ ಅಂಜುಮಾನ್ ಸಂಘಟನೆಯ ಸದಸ್ಯರಾಗಿದ್ದು, ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ಪಿತೂರಿ ನಡೆಸಿ ಸ್ಫೋಟಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

- Advertisement -
- Advertisement -

2000 ರಲ್ಲಿ ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ನಡೆದ ಸರಣಿ ಸ್ಫೋಟಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇಬ್ಬರು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಜಯ್ ರಾಸ್ತೋಗಿ ಮತ್ತು ಅನಿರುದ್ಧ ಬೋಸ್ ಅವರ ನ್ಯಾಯಪೀಠವು ಬಂಧನದ ಅವಧಿ ಸಾಕಷ್ಟು ದೀರ್ಘವಾಗಿದ್ದರೂ, ಅವರ ವಿರುದ್ಧದ ಅಪರಾಧಗಳ ಸ್ವರೂಪದಿಂದಾಗಿ ಅವರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಕೆಲವು ವಿಶೇಷ ಸಂದರ್ಭಗಳು ಎದುರಾದರೆ ಮಾತ್ರ ಜಾಮೀನು ಅರ್ಜಿಯ ಮೇಲ್ಮನವಿಗಳಿಗೆ ಅನುಮತಿ ಇದೆ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಅಪರಾಧಿಯಾದ ಶಂಶುಜಾಮಾ ಆಂಧ್ರಪ್ರದೇಶದ ಖಾಯಂ ನಿವಾಸಿಯಾಗಿದ್ದು, ಅವರ ಕುಟುಂಬದವರೆಲ್ಲರೂ ಒಂದೇ ವಿಳಾಸದಲ್ಲಿ ವಾಸಿಸುತ್ತಿದ್ದಾರೆ. ಜಾಮೀನು ನೀಡುವಾಗ ಹೇರಿದ ಯಾವುದೇ ಷರತ್ತುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಮನವಿ ಮಾಡಿದ್ದರು.

ಮತ್ತೊಂದು ಜಾಮೀನು ಅರ್ಜಿಯಲ್ಲಿ ಅಪರಾಧಿ ಶೇಕ್ ಫರ್ದೀನ್ ವಲ್ಲಿ ಅಲಿಯಾಸ್ ಫರೀದ್ ಜುಲೈ 16, 2000 ರಿಂದ ಬಂಧನದಲ್ಲಿದ್ದಾರೆ ಎಂದು ಅವರ ತಾಯಿ ಅರ್ಜಿ ಸಲ್ಲಿಸಿದ್ದರು. ಅವರ ತಂದೆ ಮರಣ ಶಯ್ಯೆಯಲ್ಲಿದ್ದರಿಂದ ಹಾಗೂ 86% ಶಾಶ್ವತ ಅಂಗವೈಕಲ್ಯದಿಂದ ಬಳಲುತ್ತಿದ್ದರಿಂದ ಮಾನವೀಯ ಆಧಾರದ ಮೇಲೆ ಮಧ್ಯಂತರ ಜಾಮೀನು ಕೋರಿದ್ದರು.

ಅರ್ಜಿದಾರರನ್ನು ವಕೀಲ ಕಾಮಿನಿ ಜೈಸ್ವಾಲ್ ಮತ್ತು ರಾಜ್ಯ ಸರ್ಕಾರವನ್ನು ವಕೀಲ ವಿ. ಎನ್. ರಘುಪತಿ ಪ್ರತಿನಿಧಿಸಿದ್ದರು.

ಆರೋಪಿಗಳು ದೀಂದರ್ ಅಂಜುಮಾನ್ ಸಂಘಟನೆಯ ಸದಸ್ಯರಾಗಿದ್ದು, ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ಪಿತೂರಿ ನಡೆಸಿ ಸ್ಫೋಟಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 8, 2000 ರಂದು, ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯ ಸೇಂಟ್ ಆನ್ ಕ್ಯಾಥೊಲಿಕ್ ಚರ್ಚ್‌ನಲ್ಲಿ ಸತತ ಎರಡು ಸ್ಫೋಟಗಳು ನಡೆದಿದ್ದವು. ಎರಡನೇ ಸ್ಫೋಟವು ಜುಲೈ 8, 2000 ರಂದು ಹುಬ್ಬಳ್ಳಿಯ ಸೇಂಟ್ ಲುಥೆರನ್ ಚರ್ಚ್‌ನಲ್ಲಿ ಮುಂಜಾನೆ 3:30 ರಿಂದ 4:30 ರವರೆಗೆ ನಡೆಯಿತು. ಮೂರನೇ ಬಾಂಬ್ ಸ್ಫೋಟವನ್ನು ಜುಲೈ 9, 2000 ರಂದು ರಾತ್ರಿ 10: 15 ಕ್ಕೆ ಬೆಂಗಳೂರಿನ ಜೆಜೆ ನಗರ ಮುಖ್ಯ ರಸ್ತೆಯಲ್ಲಿರುವ ಸೇಂಟ್ ಪೀಟರ್ ಮತ್ತು ಪಾಲ್ ಚರ್ಚ್‌ನಲ್ಲಿ ನಡೆಸಲಾಗಿತ್ತು.


ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...