Homeಮುಖಪುಟಕರ್ನಾಟಕ ಚರ್ಚ್ ಸ್ಪೋಟ ಅಪರಾಧಿಗಳ ಮಂಧ್ಯಂತರ ಜಾಮೀನು ತಿರಸ್ಕರಿಸಿದ ಸುಪ್ರೀಂಕೋರ್ಟ್

ಕರ್ನಾಟಕ ಚರ್ಚ್ ಸ್ಪೋಟ ಅಪರಾಧಿಗಳ ಮಂಧ್ಯಂತರ ಜಾಮೀನು ತಿರಸ್ಕರಿಸಿದ ಸುಪ್ರೀಂಕೋರ್ಟ್

ದೀಂದರ್ ಅಂಜುಮಾನ್ ಸಂಘಟನೆಯ ಸದಸ್ಯರಾಗಿದ್ದು, ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ಪಿತೂರಿ ನಡೆಸಿ ಸ್ಫೋಟಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

- Advertisement -
- Advertisement -

2000 ರಲ್ಲಿ ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ನಡೆದ ಸರಣಿ ಸ್ಫೋಟಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇಬ್ಬರು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಜಯ್ ರಾಸ್ತೋಗಿ ಮತ್ತು ಅನಿರುದ್ಧ ಬೋಸ್ ಅವರ ನ್ಯಾಯಪೀಠವು ಬಂಧನದ ಅವಧಿ ಸಾಕಷ್ಟು ದೀರ್ಘವಾಗಿದ್ದರೂ, ಅವರ ವಿರುದ್ಧದ ಅಪರಾಧಗಳ ಸ್ವರೂಪದಿಂದಾಗಿ ಅವರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಕೆಲವು ವಿಶೇಷ ಸಂದರ್ಭಗಳು ಎದುರಾದರೆ ಮಾತ್ರ ಜಾಮೀನು ಅರ್ಜಿಯ ಮೇಲ್ಮನವಿಗಳಿಗೆ ಅನುಮತಿ ಇದೆ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಅಪರಾಧಿಯಾದ ಶಂಶುಜಾಮಾ ಆಂಧ್ರಪ್ರದೇಶದ ಖಾಯಂ ನಿವಾಸಿಯಾಗಿದ್ದು, ಅವರ ಕುಟುಂಬದವರೆಲ್ಲರೂ ಒಂದೇ ವಿಳಾಸದಲ್ಲಿ ವಾಸಿಸುತ್ತಿದ್ದಾರೆ. ಜಾಮೀನು ನೀಡುವಾಗ ಹೇರಿದ ಯಾವುದೇ ಷರತ್ತುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಮನವಿ ಮಾಡಿದ್ದರು.

ಮತ್ತೊಂದು ಜಾಮೀನು ಅರ್ಜಿಯಲ್ಲಿ ಅಪರಾಧಿ ಶೇಕ್ ಫರ್ದೀನ್ ವಲ್ಲಿ ಅಲಿಯಾಸ್ ಫರೀದ್ ಜುಲೈ 16, 2000 ರಿಂದ ಬಂಧನದಲ್ಲಿದ್ದಾರೆ ಎಂದು ಅವರ ತಾಯಿ ಅರ್ಜಿ ಸಲ್ಲಿಸಿದ್ದರು. ಅವರ ತಂದೆ ಮರಣ ಶಯ್ಯೆಯಲ್ಲಿದ್ದರಿಂದ ಹಾಗೂ 86% ಶಾಶ್ವತ ಅಂಗವೈಕಲ್ಯದಿಂದ ಬಳಲುತ್ತಿದ್ದರಿಂದ ಮಾನವೀಯ ಆಧಾರದ ಮೇಲೆ ಮಧ್ಯಂತರ ಜಾಮೀನು ಕೋರಿದ್ದರು.

ಅರ್ಜಿದಾರರನ್ನು ವಕೀಲ ಕಾಮಿನಿ ಜೈಸ್ವಾಲ್ ಮತ್ತು ರಾಜ್ಯ ಸರ್ಕಾರವನ್ನು ವಕೀಲ ವಿ. ಎನ್. ರಘುಪತಿ ಪ್ರತಿನಿಧಿಸಿದ್ದರು.

ಆರೋಪಿಗಳು ದೀಂದರ್ ಅಂಜುಮಾನ್ ಸಂಘಟನೆಯ ಸದಸ್ಯರಾಗಿದ್ದು, ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ಪಿತೂರಿ ನಡೆಸಿ ಸ್ಫೋಟಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 8, 2000 ರಂದು, ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯ ಸೇಂಟ್ ಆನ್ ಕ್ಯಾಥೊಲಿಕ್ ಚರ್ಚ್‌ನಲ್ಲಿ ಸತತ ಎರಡು ಸ್ಫೋಟಗಳು ನಡೆದಿದ್ದವು. ಎರಡನೇ ಸ್ಫೋಟವು ಜುಲೈ 8, 2000 ರಂದು ಹುಬ್ಬಳ್ಳಿಯ ಸೇಂಟ್ ಲುಥೆರನ್ ಚರ್ಚ್‌ನಲ್ಲಿ ಮುಂಜಾನೆ 3:30 ರಿಂದ 4:30 ರವರೆಗೆ ನಡೆಯಿತು. ಮೂರನೇ ಬಾಂಬ್ ಸ್ಫೋಟವನ್ನು ಜುಲೈ 9, 2000 ರಂದು ರಾತ್ರಿ 10: 15 ಕ್ಕೆ ಬೆಂಗಳೂರಿನ ಜೆಜೆ ನಗರ ಮುಖ್ಯ ರಸ್ತೆಯಲ್ಲಿರುವ ಸೇಂಟ್ ಪೀಟರ್ ಮತ್ತು ಪಾಲ್ ಚರ್ಚ್‌ನಲ್ಲಿ ನಡೆಸಲಾಗಿತ್ತು.


ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...