Homeಮುಖಪುಟಹೈಕಮಾಂಡ್ ಭೇಟಿಗಾಗಿ ನಾಳೆ ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

ಹೈಕಮಾಂಡ್ ಭೇಟಿಗಾಗಿ ನಾಳೆ ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

- Advertisement -
- Advertisement -

ಹೈಕಮಾಂಡ್ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಲು ಶುಕ್ರವಾರ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೊದಲ ಭೇಟಿಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

“ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ ನಡ್ಡಾ ಅವರ ಆಶೀರ್ವಾದ ಪಡೆಯಲು ನಾಳೆ (ಶುಕ್ರವಾರ) ದೆಹಲಿಗೆ ಭೇಟಿ ನೀಡುತ್ತೇನೆ. ಆದರೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದಿಲ್ಲ” ಎಂದಿದ್ದಾರೆ.

“ಮೊದಲ ಭೇಟಿ ನಂತರ ಎರಡು-ಮೂರು ದಿನಗಳಲ್ಲಿ, ಅವರ ಸಮಯ ತೆಗೆದುಕೊಂಡ ನಂತರ ನಾನು ಮತ್ತೆ ಅವರನ್ನು ಭೇಟಿಯಾಗುತ್ತೇನೆ. ಆಗ ಕ್ಯಾಬಿನೆಟ್ ರಚನೆಯ ಬಗ್ಗೆ ನಾವು ಚರ್ಚಿಸುತ್ತೇವೆ, ನಂತರ ಸಚಿವರ ಆಯ್ಕೆ ಮಾಡಲಾಗುತ್ತದೆ” ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂಪುಟ ಸೇರದಿರುವ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಶೆಟ್ಟರ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಲಿದ್ದೇನೆ ಎಂದಿದ್ದಾರೆ.

“ನಾವು ರಾಜಕೀಯಕ್ಕೆ ಸೇರಿದಾಗಿನಿಂದಲೂ ಸ್ನೇಹಿತರಾಗಿದ್ದೇವೆ. ಬೇರೆ ಬೇರೆ ಪಕ್ಷಗಳಲ್ಲಿದ್ದಾಗಲೂ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದೇವೆ. ಜಗದೀಶ್ ಶೆಟ್ಟರ್ ನಿರ್ಧಾರದ ಬಗ್ಗೆ ಪಕ್ಷದ ಹಿರಿಯ ನಾಯಕರಿಗೆ ತಿಳಿಸುತ್ತೇನೆ. ಈ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

“ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಅವರ ನಾಯಕತ್ವದಲ್ಲಿ ನಾವೆಲ್ಲರೂ ರಾಜಕೀಯದಲ್ಲಿ ಬೆಳೆದಿದ್ದೇವೆ. ಆದ್ದರಿಂದ ಅವರ ಸಂಪುಟದಲ್ಲಿ ಸಚಿವರಾಗಲು ಯಾವುದೇ ಸಮಸ್ಯೆಗಳಿಲ್ಲ. ಆದರೆ, ಬೊಮ್ಮಾಯಿ  ಈ ಹಿಂದೆ ನನ್ನ ಸಚಿವ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಅವರ ಸಂಪುಟದಲ್ಲಿ ಕೆಲಸ ಮಾಡುವುದು ನನಗೆ ಸರಿಯಿಲ್ಲ ಎನಿಸಿದೆ. ಆದ್ದರಿಂದ, ನಾನು ಹೊರಗುಳಿದಿದ್ದೇನೆ ”ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು.


ಇದನ್ನೂ ಓದಿ: ಆಷಾಢದ ಗಾಳಿಯಲ್ಲಿ ಹಾರಿದ ಪಟ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...