Homeಕರ್ನಾಟಕಝೀರೋ‌ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ಒಂದೆಡೆ... ಒಂದಿಡೀ ಊರಿಗೆ ಬೀಗ ಹಾಕಿಸಿದ ಮಂತ್ರಿ ಇನ್ನೊಂದೆಡೆ...!!

ಝೀರೋ‌ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ಒಂದೆಡೆ… ಒಂದಿಡೀ ಊರಿಗೆ ಬೀಗ ಹಾಕಿಸಿದ ಮಂತ್ರಿ ಇನ್ನೊಂದೆಡೆ…!!

- Advertisement -
- Advertisement -

ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ತನಗೆ ಝೀರೋ‌ ಟ್ರಾಫಿಕ್ ಬೇಡವೆಂದು ಜನತೆಯ ಪ್ರಶಂಸೆಗೆ ಪಾತ್ರವಾಗಿದ್ದರು. ಆ ಬಳಿಕ ಯಾವುದೋ ಒಂದು ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ತನ್ನನ್ನು ತಾನು Common Man (CM) ಎಂದು ಜನರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.‌ ಅದು ಗಿಮಿಕ್ಕೋ, ಇನ್ನೇನೋ ಎನ್ನಿ.. ಆದರೂ ಅವರ ಮಾತಿಗೆ ಅವರ ಅಧಿಕಾರಾವಧಿ ಮುಗಿಯುವವರೆಗೆ ಬದ್ಧರಾಗಿದ್ದರೆ ಅವರು ಆ ವಿಷಯದಲ್ಲಿ ಗೌರವಾರ್ಹರಾಗಿಯೇ ಉಳಿಯುತ್ತಾರೆ.

ನಮ್ಮ ದೇಶದಲ್ಲಿ ಮಾತ್ರ ಆಡಳಿತದಲ್ಲಿರುವವರು More equal than the common man. ಕೆನಡಾ, ಉರುಗ್ವೆ, ಲ್ಯಾಟಿನ್‌ ಅಮೆರಿಕಾದ ಅನೇಕ ದೇಶಗಳಲ್ಲಿ ಅಲ್ಲಿನ ಅಧ್ಯಕ್ಷರು, ಪ್ರಧಾನಿಗಳು ಕಾಮನ್ ಮ್ಯಾನ್‌ನಂತೆಯೇ ಜೀವಿಸುತ್ತಾರೆ. ಉರುಗ್ವೆ ದೇಶದ ಅಧ್ಯಕ್ಷರಾಗಿದ್ದ ಹೊಸೈ ಮುಕ್ಸಿಕ ತನ್ನ ತೋಟದಲ್ಲಿ ಸ್ವಯಂ ದುಡಿಯುತ್ತಿದ್ದರು. ತನ್ನ ಕಾರನ್ನು ತಾನೇ ಚಲಾಯಿಸುತ್ತಾ ಅಧ್ಯಕ್ಷರ ಕಚೇರಿಗೆ ಯಾವುದೇ ಬೆಂಗಾವಲು ವಾಹನವಿಲ್ಲದೇ ಹೋಗುತ್ತಿದ್ದರು. ಅವರೆಲ್ಲರ ಪ್ರಕಾರ ಝೀರೋ‌ ಟ್ರಾಫಿಕ್, ಹತ್ತಾರು ಬೆಂಗಾವಲು ವಾಹನ, ಕೈಗೊಂದು ಕಾಲಿಗೊಂದು ಆಳು ಎಂದರೆ ಅದು ನ್ಯಾಶನಲ್ ವೇಸ್ಟ್.. ಅದು ಪ್ರಜಾಪ್ರಭುತ್ವದ ನಿಜವಾದ ಸೌಂದರ್ಯ ಕೂಡಾ.

ಝೀರೋ‌ ಟ್ರಾಫಿಕನ್ನು, (ನ)ಗಣ್ಯ ವ್ಯಕ್ತಿ ಭೇಟಿ‌ ಕೊಡುವ ಊರಿಗೆ ಬೀಗ ಹಾಕುವುದನ್ನು ಜನರು ತಮ್ಮ ಬೇಡಿಕೆ ಈಡೇರಿಕೆಗಾಗಿ, ತಮ್ಮ ಅಸಮಾಧಾನ ತೋರ್ಪಡಿಕೆಗಾಗಿ ಪ್ರತಿಭಟಿಸುವ ಕಾರಣ ಮುಂದಿಟ್ಟು ಸಮರ್ಥಿಸುತ್ತಾರೆ. ಅಧಿಕಾರದಲ್ಲಿ‌ ಕೂತವ ಟೀಕೆ, ಪ್ರತಿಭಟನೆಗಳನ್ನು ಎದುರಿಸಲು ಸದಾ ತಯಾರಿರಬೇಕು. ಯಾಕೆಂದರೆ ಅವರು ನಮ್ಮಿಂದ ಆಯ್ಕೆಗೊಂಡವರು. ನಮ್ಮ ಹಕ್ಕುಗಳನ್ನು ಕೇಳುವ, ಅದಕ್ಕಾಗಿ‌ ಪ್ರತಿಭಟಿಸುವ ಹಕ್ಕು ನಮಗೆ ನಮ್ಮ ಸಂವಿಧಾನವೇ ಕೊಟ್ಟಿದೆ. ಪ್ರತಿಭಟನೆಗಳನ್ನು ದಮನಿಸುವುದು ಪ್ರಜಾತಂತ್ರಕ್ಕೆಸಗುವ ಅಪಚಾರ.
ಇರಲಿ ವಿಷಯಕ್ಕೆ ಬರುತ್ತೇನೆ.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಹೋರಾಟಗಾರರು

ಇಂದು ನಮ್ಮ ಪಕ್ಕದೂರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಆಗಮಿಸಿದ್ದಾರೆ. ಅದಕ್ಕಾಗಿ ಇಡೀ ಕೊಣಾಜೆಗೆ ಪೋಲೀಸರು ಬೇಲಿ ಹಾಕಿದ್ದಾರೆ. ನನ್ನೂರು ಪಜೀರಿಗೆ ಹೋಗಬೇಕೆಂದರೆ ನಮಗೆ ಸುಲಭ ಮಾರ್ಗ ಯುನಿವರ್ಸಿಟಿ ಕ್ಯಾಂಪಸ್‌ನ ಮಧ್ಯೆ ಹಾದು ಹೋಗುವ ರಸ್ತೆ. ಇಂದು ಬೆಳಗ್ಗೆ ಬಂದ್ ಮಾಡಿದ ಆ ರಸ್ತೆಯನ್ನು ಈ ಬರಹ ಬರೆಯುತ್ತಿರುವವರೆಗೂ ತೆರೆಯಲಾಗಿಲ್ಲ. ಯಾಕೆಂದರೆ ಅಶ್ವಥ್ ನಾರಾಯಣ್ ಯುನಿವರ್ಸಿಟಿಯಲ್ಲಿ‌ ಕಾರ್ಯಕ್ರಮವೊಂದಕ್ಕೆ ಬಂದಿದ್ದಾರೆ. ಕಾರ್ಯಕ್ರಮ ಯಾವತ್ತೋ ಮುಗಿದಾಗಿದೆ. ಆದರೆ ಅವರು ಯುನಿವರ್ಸಿಟಿಯ ಗೆಸ್ಟ್ ಹೌಸ್‌ನಲ್ಲಿ ಮೀಟಿಂಗ್‌ನಲ್ಲಿದ್ದಾರೆ ಎಂಬ ಕಾರಣ ನೀಡಿ ಇನ್ನೂ ಊರಿನ ಬೀಗ ತೆರೆದಿಲ್ಲ.

ಇದರಿಂದಾಗಿ ನಾವು ಪಜೀರಿಗರು ಮೂರು ಕಿಲೋ‌ಮೀಟರ್ ಸುತ್ತಿ ಬಳಸಿ ನಮ್ಮೂರಿಗೆ ಹೋಗಬೇಕು. ಇನ್ನು ಕೊಣಾಜೆಯ ಮತ್ತು ಯುನಿವರ್ಸಿಟಿಯ ಸುತ್ತ ಮುತ್ತಲಿರುವ ಹಳ್ಳಿಗರಿಗೆ ಇಂದು ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಊರಿಂದ ಹೊರ ಹೋಗದಂತೆ ಪೋಲೀಸರು ತಡೆಯುತ್ತಿದ್ದಾರೆ. ಹೊರಗಡೆ ಕೆಲಸಕ್ಕೆ ಹೋದವರು ಮಧ್ಯಾಹ್ನ ತಮ್ಮ ಕೆಲಸ ಮುಗಿಸಿ ಬಂದಿದ್ದರೆ ಅವರು ಅವರ ಮನೆಗೂ ಹೋಗುವಂತಿಲ್ಲ.. ಇದೆಂತಹ ನ್ಯಾಯ ಸ್ವಾಮೀ…? ಅಸೈಗೋಳಿಯಲ್ಲಿ ಇಳಿದು ಆಟೋದಲ್ಲಿ ಹೋಗಲೂ ಅಲ್ಲಿನ ಜನರಿಗೆ ಪೋಲೀಸರು ಬಿಡುತ್ತಿಲ್ಲ. ಇಲ್ಲಿಗೇ ಮುಗಿಯಲಿಲ್ಲ.. ಇನ್ನು ಆ ಮಾರ್ಗವಾಗಿ ಹರೇಕಳ, ಪಾವೂರು, ಇನೋಳಿ, ಮಲಾರ್, ಗ್ರಾಮಚಾವಡಿ ಮುಂತಾದ ಊರುಗಳಿಗೆ ಹೋಗುವ ಬಸ್‌ಗಳು ಮೂರು ಕಿಲೋ ಮೀಟರ್ ಸುತ್ತು ಹೊಡೆದು ನಡುಪದವು ಕ್ರಾಸ್, ಕಂಬಳಪದವು, ಪಜೀರು ದಾರಿಯಾಗಿ ಹೋಗಬೇಕು. ಸ್ವಂತ ವಾಹನವಿರುವವರು, ಬಸ್ಸಲ್ಲಿ ಹೋಗುವವರು ಹೇಗೂ ಸುತ್ತಿ ಬಳಸಿ ಹೋಗುತ್ತಾರೆ.

ಆದರೆ, ಪೋಲೀಸರು ಬೀಗ ಹಾಕಿದ ಊರಿನ ವೃದ್ಧರು, ರೋಗಿಗಳು ನಡೆದುಕೊಂಡೇ ಹೋಗಬೇಕು.. ಆಕಸ್ಮಾತ್ ಯಾರಾದರೂ, ಗರ್ಬಿಣಿಯರನ್ನು, ರೋಗಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಬೇಕಾದರೆ ಅವರನ್ನು ಹೊತ್ತುಕೊಂಡೇ ಹೋಗಬೇಕಷ್ಟೇ..?

ತನ್ನನ್ನು ತಾನು ಕಾಮನ್ ಮ್ಯಾನ್ ಎಂದು ಘೋಷಿಸಿದ, ಝೀರೋ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ತನ್ನ ಕೈ ಕೆಳಗಿನ ಮಂತ್ರಿಯ ಈ ಘನಂದಾರಿ ಕೆಲಸಕ್ಕೇನೆನ್ನುತ್ತಾರೆ…? ನಮ್ಮೂರಲ್ಲಿ ನಾನು ಹುಟ್ಟಿದಂದಿನಿಂದಲೂ ಯುನಿವರ್ಸಿಟಿ ಇರುವುದರಿಂದ ನಮ್ಮೂರಿಗೆ ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರು ಬರುವುದು ಸಾಮಾನ್ಯ. ನಾನು ನನ್ನ ಈವರೆಗಿನ ಬದುಕಲ್ಲಿ ಯಾವೊಬ್ಬ ಮಂತ್ರಿಯಾಗಲೀ, ಮುಖ್ಯಮಂತ್ರಿಯಾಗಲೀ, ರಾಜ್ಯಪಾಲನಾಗಲೀ ಊರಿಗೆ ಬೀಗ ಹಾಕಿಸಿದ್ದನ್ನು ನೋಡಿಲ್ಲ. ಯುನಿವರ್ಸಿಟಿ ಕ್ಯಾಂಪಸ್ ಒಳಗಡೆ ಈ ಹಿಂದೆಯೂ ಮಂತ್ರಿಗಳು ಬಂದಾಗ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸಿದ್ದಾರೆ. ಇಂದು ಕ್ಯಾಂಪಸ್ ಫ್ರಂಟ್‌ನ ಹುಡುಗರು ಪ್ರತಿಭಟಿಸಿದ್ದು ಮೊದಲಲ್ಲ. ಪ್ರಜಾಪ್ರಭುತ್ವದಲ್ಲಿ ಅಧಿಕಾರದಲ್ಲಿ‌ ಕೂತವನು ಪ್ರತಿಭಟನಾಕಾರರ ಅಹವಾಲು ಆಲಿಸಬೇಕೇ ಹೊರತು ಹೇಡಿಯಂತೆ ಊರಿಗೆ ಬೀಗ ಹಾಕುವುದಲ್ಲ.
ಹಿಂದೆಲ್ಲಾ ಗಣ್ಯ ವ್ಯಕ್ತಿಗಳು ಕ್ಯಾಂಪಸ್‌ಗೆ ಬರುವುದಕ್ಕಿಂತ ಐದು ನಿಮಿಷ ಮುಂಚೆ ವಾಹನಗಳನ್ನು ತಡೆಯುತ್ತಿದ್ದರು.. ಈ ರೀತಿ ಊರಿಗೇ ಬೀಗ ಹಾಕಿದ ಮೊದಲ ಮಂತ್ರಿ ನಮ್ಮ ಸನ್ಮಾನ್ಯ ಅಶ್ವಥ್ ನಾರಾಯಣರೊಬ್ಬರೇ.. ಇದನ್ನು ಹೀಗೇ ಮುಂದುವರಿಯಲು ಬಿಟ್ಟರೆ ಇನ್ನು ಈ ಪರಿಪಾಠವನ್ನು ಎಲ್ಲರೂ ಮುಂದುವರಿಸುತ್ತಾರೆ.

ಇಸ್ಮತ್ ಪಜೀರ್


ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಶಾಸಕರು, ಮಂತ್ರಿಗಳು ರಾಜಮಹಾರಾಜರನ್ನು ಮೀರಿಸುವಂತೆ ದರ್ಬಾರು ನಡೆಸುತ್ತಿದ್ದಾರೆ. ಇದನ್ನು ಮುಸ್ಲಿಮರು ವಿರೋದಿಸಿದರೆ, ಅವರು ತಾಲಿಬಾನ್! ಈ ರೀತಿಯ ಮೂರ್ಕರ ಬೋಪರಾಕಿನಿಂದ ಈ ದೇಶ ಇಂದು ಅದೋಗತಿಗೆ ಇಳಿದಿದೆ.

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...