Homeಕರ್ನಾಟಕಝೀರೋ‌ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ಒಂದೆಡೆ... ಒಂದಿಡೀ ಊರಿಗೆ ಬೀಗ ಹಾಕಿಸಿದ ಮಂತ್ರಿ ಇನ್ನೊಂದೆಡೆ...!!

ಝೀರೋ‌ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ಒಂದೆಡೆ… ಒಂದಿಡೀ ಊರಿಗೆ ಬೀಗ ಹಾಕಿಸಿದ ಮಂತ್ರಿ ಇನ್ನೊಂದೆಡೆ…!!

- Advertisement -
- Advertisement -

ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ತನಗೆ ಝೀರೋ‌ ಟ್ರಾಫಿಕ್ ಬೇಡವೆಂದು ಜನತೆಯ ಪ್ರಶಂಸೆಗೆ ಪಾತ್ರವಾಗಿದ್ದರು. ಆ ಬಳಿಕ ಯಾವುದೋ ಒಂದು ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ತನ್ನನ್ನು ತಾನು Common Man (CM) ಎಂದು ಜನರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.‌ ಅದು ಗಿಮಿಕ್ಕೋ, ಇನ್ನೇನೋ ಎನ್ನಿ.. ಆದರೂ ಅವರ ಮಾತಿಗೆ ಅವರ ಅಧಿಕಾರಾವಧಿ ಮುಗಿಯುವವರೆಗೆ ಬದ್ಧರಾಗಿದ್ದರೆ ಅವರು ಆ ವಿಷಯದಲ್ಲಿ ಗೌರವಾರ್ಹರಾಗಿಯೇ ಉಳಿಯುತ್ತಾರೆ.

ನಮ್ಮ ದೇಶದಲ್ಲಿ ಮಾತ್ರ ಆಡಳಿತದಲ್ಲಿರುವವರು More equal than the common man. ಕೆನಡಾ, ಉರುಗ್ವೆ, ಲ್ಯಾಟಿನ್‌ ಅಮೆರಿಕಾದ ಅನೇಕ ದೇಶಗಳಲ್ಲಿ ಅಲ್ಲಿನ ಅಧ್ಯಕ್ಷರು, ಪ್ರಧಾನಿಗಳು ಕಾಮನ್ ಮ್ಯಾನ್‌ನಂತೆಯೇ ಜೀವಿಸುತ್ತಾರೆ. ಉರುಗ್ವೆ ದೇಶದ ಅಧ್ಯಕ್ಷರಾಗಿದ್ದ ಹೊಸೈ ಮುಕ್ಸಿಕ ತನ್ನ ತೋಟದಲ್ಲಿ ಸ್ವಯಂ ದುಡಿಯುತ್ತಿದ್ದರು. ತನ್ನ ಕಾರನ್ನು ತಾನೇ ಚಲಾಯಿಸುತ್ತಾ ಅಧ್ಯಕ್ಷರ ಕಚೇರಿಗೆ ಯಾವುದೇ ಬೆಂಗಾವಲು ವಾಹನವಿಲ್ಲದೇ ಹೋಗುತ್ತಿದ್ದರು. ಅವರೆಲ್ಲರ ಪ್ರಕಾರ ಝೀರೋ‌ ಟ್ರಾಫಿಕ್, ಹತ್ತಾರು ಬೆಂಗಾವಲು ವಾಹನ, ಕೈಗೊಂದು ಕಾಲಿಗೊಂದು ಆಳು ಎಂದರೆ ಅದು ನ್ಯಾಶನಲ್ ವೇಸ್ಟ್.. ಅದು ಪ್ರಜಾಪ್ರಭುತ್ವದ ನಿಜವಾದ ಸೌಂದರ್ಯ ಕೂಡಾ.

ಝೀರೋ‌ ಟ್ರಾಫಿಕನ್ನು, (ನ)ಗಣ್ಯ ವ್ಯಕ್ತಿ ಭೇಟಿ‌ ಕೊಡುವ ಊರಿಗೆ ಬೀಗ ಹಾಕುವುದನ್ನು ಜನರು ತಮ್ಮ ಬೇಡಿಕೆ ಈಡೇರಿಕೆಗಾಗಿ, ತಮ್ಮ ಅಸಮಾಧಾನ ತೋರ್ಪಡಿಕೆಗಾಗಿ ಪ್ರತಿಭಟಿಸುವ ಕಾರಣ ಮುಂದಿಟ್ಟು ಸಮರ್ಥಿಸುತ್ತಾರೆ. ಅಧಿಕಾರದಲ್ಲಿ‌ ಕೂತವ ಟೀಕೆ, ಪ್ರತಿಭಟನೆಗಳನ್ನು ಎದುರಿಸಲು ಸದಾ ತಯಾರಿರಬೇಕು. ಯಾಕೆಂದರೆ ಅವರು ನಮ್ಮಿಂದ ಆಯ್ಕೆಗೊಂಡವರು. ನಮ್ಮ ಹಕ್ಕುಗಳನ್ನು ಕೇಳುವ, ಅದಕ್ಕಾಗಿ‌ ಪ್ರತಿಭಟಿಸುವ ಹಕ್ಕು ನಮಗೆ ನಮ್ಮ ಸಂವಿಧಾನವೇ ಕೊಟ್ಟಿದೆ. ಪ್ರತಿಭಟನೆಗಳನ್ನು ದಮನಿಸುವುದು ಪ್ರಜಾತಂತ್ರಕ್ಕೆಸಗುವ ಅಪಚಾರ.
ಇರಲಿ ವಿಷಯಕ್ಕೆ ಬರುತ್ತೇನೆ.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಹೋರಾಟಗಾರರು

ಇಂದು ನಮ್ಮ ಪಕ್ಕದೂರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಆಗಮಿಸಿದ್ದಾರೆ. ಅದಕ್ಕಾಗಿ ಇಡೀ ಕೊಣಾಜೆಗೆ ಪೋಲೀಸರು ಬೇಲಿ ಹಾಕಿದ್ದಾರೆ. ನನ್ನೂರು ಪಜೀರಿಗೆ ಹೋಗಬೇಕೆಂದರೆ ನಮಗೆ ಸುಲಭ ಮಾರ್ಗ ಯುನಿವರ್ಸಿಟಿ ಕ್ಯಾಂಪಸ್‌ನ ಮಧ್ಯೆ ಹಾದು ಹೋಗುವ ರಸ್ತೆ. ಇಂದು ಬೆಳಗ್ಗೆ ಬಂದ್ ಮಾಡಿದ ಆ ರಸ್ತೆಯನ್ನು ಈ ಬರಹ ಬರೆಯುತ್ತಿರುವವರೆಗೂ ತೆರೆಯಲಾಗಿಲ್ಲ. ಯಾಕೆಂದರೆ ಅಶ್ವಥ್ ನಾರಾಯಣ್ ಯುನಿವರ್ಸಿಟಿಯಲ್ಲಿ‌ ಕಾರ್ಯಕ್ರಮವೊಂದಕ್ಕೆ ಬಂದಿದ್ದಾರೆ. ಕಾರ್ಯಕ್ರಮ ಯಾವತ್ತೋ ಮುಗಿದಾಗಿದೆ. ಆದರೆ ಅವರು ಯುನಿವರ್ಸಿಟಿಯ ಗೆಸ್ಟ್ ಹೌಸ್‌ನಲ್ಲಿ ಮೀಟಿಂಗ್‌ನಲ್ಲಿದ್ದಾರೆ ಎಂಬ ಕಾರಣ ನೀಡಿ ಇನ್ನೂ ಊರಿನ ಬೀಗ ತೆರೆದಿಲ್ಲ.

ಇದರಿಂದಾಗಿ ನಾವು ಪಜೀರಿಗರು ಮೂರು ಕಿಲೋ‌ಮೀಟರ್ ಸುತ್ತಿ ಬಳಸಿ ನಮ್ಮೂರಿಗೆ ಹೋಗಬೇಕು. ಇನ್ನು ಕೊಣಾಜೆಯ ಮತ್ತು ಯುನಿವರ್ಸಿಟಿಯ ಸುತ್ತ ಮುತ್ತಲಿರುವ ಹಳ್ಳಿಗರಿಗೆ ಇಂದು ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಊರಿಂದ ಹೊರ ಹೋಗದಂತೆ ಪೋಲೀಸರು ತಡೆಯುತ್ತಿದ್ದಾರೆ. ಹೊರಗಡೆ ಕೆಲಸಕ್ಕೆ ಹೋದವರು ಮಧ್ಯಾಹ್ನ ತಮ್ಮ ಕೆಲಸ ಮುಗಿಸಿ ಬಂದಿದ್ದರೆ ಅವರು ಅವರ ಮನೆಗೂ ಹೋಗುವಂತಿಲ್ಲ.. ಇದೆಂತಹ ನ್ಯಾಯ ಸ್ವಾಮೀ…? ಅಸೈಗೋಳಿಯಲ್ಲಿ ಇಳಿದು ಆಟೋದಲ್ಲಿ ಹೋಗಲೂ ಅಲ್ಲಿನ ಜನರಿಗೆ ಪೋಲೀಸರು ಬಿಡುತ್ತಿಲ್ಲ. ಇಲ್ಲಿಗೇ ಮುಗಿಯಲಿಲ್ಲ.. ಇನ್ನು ಆ ಮಾರ್ಗವಾಗಿ ಹರೇಕಳ, ಪಾವೂರು, ಇನೋಳಿ, ಮಲಾರ್, ಗ್ರಾಮಚಾವಡಿ ಮುಂತಾದ ಊರುಗಳಿಗೆ ಹೋಗುವ ಬಸ್‌ಗಳು ಮೂರು ಕಿಲೋ ಮೀಟರ್ ಸುತ್ತು ಹೊಡೆದು ನಡುಪದವು ಕ್ರಾಸ್, ಕಂಬಳಪದವು, ಪಜೀರು ದಾರಿಯಾಗಿ ಹೋಗಬೇಕು. ಸ್ವಂತ ವಾಹನವಿರುವವರು, ಬಸ್ಸಲ್ಲಿ ಹೋಗುವವರು ಹೇಗೂ ಸುತ್ತಿ ಬಳಸಿ ಹೋಗುತ್ತಾರೆ.

ಆದರೆ, ಪೋಲೀಸರು ಬೀಗ ಹಾಕಿದ ಊರಿನ ವೃದ್ಧರು, ರೋಗಿಗಳು ನಡೆದುಕೊಂಡೇ ಹೋಗಬೇಕು.. ಆಕಸ್ಮಾತ್ ಯಾರಾದರೂ, ಗರ್ಬಿಣಿಯರನ್ನು, ರೋಗಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಬೇಕಾದರೆ ಅವರನ್ನು ಹೊತ್ತುಕೊಂಡೇ ಹೋಗಬೇಕಷ್ಟೇ..?

ತನ್ನನ್ನು ತಾನು ಕಾಮನ್ ಮ್ಯಾನ್ ಎಂದು ಘೋಷಿಸಿದ, ಝೀರೋ ಟ್ರಾಫಿಕ್ ಬೇಡವೆಂದ ಮುಖ್ಯಮಂತ್ರಿ ತನ್ನ ಕೈ ಕೆಳಗಿನ ಮಂತ್ರಿಯ ಈ ಘನಂದಾರಿ ಕೆಲಸಕ್ಕೇನೆನ್ನುತ್ತಾರೆ…? ನಮ್ಮೂರಲ್ಲಿ ನಾನು ಹುಟ್ಟಿದಂದಿನಿಂದಲೂ ಯುನಿವರ್ಸಿಟಿ ಇರುವುದರಿಂದ ನಮ್ಮೂರಿಗೆ ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರು ಬರುವುದು ಸಾಮಾನ್ಯ. ನಾನು ನನ್ನ ಈವರೆಗಿನ ಬದುಕಲ್ಲಿ ಯಾವೊಬ್ಬ ಮಂತ್ರಿಯಾಗಲೀ, ಮುಖ್ಯಮಂತ್ರಿಯಾಗಲೀ, ರಾಜ್ಯಪಾಲನಾಗಲೀ ಊರಿಗೆ ಬೀಗ ಹಾಕಿಸಿದ್ದನ್ನು ನೋಡಿಲ್ಲ. ಯುನಿವರ್ಸಿಟಿ ಕ್ಯಾಂಪಸ್ ಒಳಗಡೆ ಈ ಹಿಂದೆಯೂ ಮಂತ್ರಿಗಳು ಬಂದಾಗ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸಿದ್ದಾರೆ. ಇಂದು ಕ್ಯಾಂಪಸ್ ಫ್ರಂಟ್‌ನ ಹುಡುಗರು ಪ್ರತಿಭಟಿಸಿದ್ದು ಮೊದಲಲ್ಲ. ಪ್ರಜಾಪ್ರಭುತ್ವದಲ್ಲಿ ಅಧಿಕಾರದಲ್ಲಿ‌ ಕೂತವನು ಪ್ರತಿಭಟನಾಕಾರರ ಅಹವಾಲು ಆಲಿಸಬೇಕೇ ಹೊರತು ಹೇಡಿಯಂತೆ ಊರಿಗೆ ಬೀಗ ಹಾಕುವುದಲ್ಲ.
ಹಿಂದೆಲ್ಲಾ ಗಣ್ಯ ವ್ಯಕ್ತಿಗಳು ಕ್ಯಾಂಪಸ್‌ಗೆ ಬರುವುದಕ್ಕಿಂತ ಐದು ನಿಮಿಷ ಮುಂಚೆ ವಾಹನಗಳನ್ನು ತಡೆಯುತ್ತಿದ್ದರು.. ಈ ರೀತಿ ಊರಿಗೇ ಬೀಗ ಹಾಕಿದ ಮೊದಲ ಮಂತ್ರಿ ನಮ್ಮ ಸನ್ಮಾನ್ಯ ಅಶ್ವಥ್ ನಾರಾಯಣರೊಬ್ಬರೇ.. ಇದನ್ನು ಹೀಗೇ ಮುಂದುವರಿಯಲು ಬಿಟ್ಟರೆ ಇನ್ನು ಈ ಪರಿಪಾಠವನ್ನು ಎಲ್ಲರೂ ಮುಂದುವರಿಸುತ್ತಾರೆ.

ಇಸ್ಮತ್ ಪಜೀರ್


ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಶಾಸಕರು, ಮಂತ್ರಿಗಳು ರಾಜಮಹಾರಾಜರನ್ನು ಮೀರಿಸುವಂತೆ ದರ್ಬಾರು ನಡೆಸುತ್ತಿದ್ದಾರೆ. ಇದನ್ನು ಮುಸ್ಲಿಮರು ವಿರೋದಿಸಿದರೆ, ಅವರು ತಾಲಿಬಾನ್! ಈ ರೀತಿಯ ಮೂರ್ಕರ ಬೋಪರಾಕಿನಿಂದ ಈ ದೇಶ ಇಂದು ಅದೋಗತಿಗೆ ಇಳಿದಿದೆ.

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...