Homeಕರ್ನಾಟಕಕರ್ನಾಟಕ ಸಿಎಂ ಟ್ವಿಟರ್‌ ಖಾತೆ ಹ್ಯಾಕ್‌; ನೂರಕ್ಕೂ ಅಧಿಕ ಟ್ವೀಟ್‌!

ಕರ್ನಾಟಕ ಸಿಎಂ ಟ್ವಿಟರ್‌ ಖಾತೆ ಹ್ಯಾಕ್‌; ನೂರಕ್ಕೂ ಅಧಿಕ ಟ್ವೀಟ್‌!

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್ ಖಾತೆಯಾದ @CMofKarnataka ಕೆಲವು ನಿಮಿಷಗಳ ಕಾಲ ಹ್ಯಾಕ್‌ ಆಗಿರುವ ಅನುಮಾನ ವ್ಯಕ್ತವಾಗಿದೆ. ಕೆಲವೇ ನಿಮಿಷಗಳಲ್ಲಿ ನೂರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.

ಶನಿವಾರ ಬೆಳಿಗ್ಗೆ 6 ಗಂಟೆಯಿಂದ 18 ನಿಮಿಷಗಳ ಕಾಲ ಟ್ವಿಟರ್‌ ಹ್ಯಾಕ್‌ ಆಗಿತ್ತು ಎನ್ನಲಾಗಿದೆ. ಯಾವುದೇ ನಿರ್ದಿಷ್ಟ ವಿಷಯವನ್ನು ಟ್ವೀಟ್ ಮಾಡದಿದ್ದರೂ ಇತ್ತೀಚೆಗೆ ಖಾತೆ ತೆರೆದವರ ಫ್ರೊಪೈಲ್ ಸೇರಿದಂತೆ ಹಲವರನ್ನು ಟ್ಯಾಗ್ ಮಾಡಲಾಗಿತ್ತು.

ಸಿಎಂ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಸಂಬಂಧ ಟ್ವಿಟರ್ ಬಳಕೆದಾರರು ಅನುಮಾನ ವ್ಯಕ್ತಪಡಿಸಿ, ಟ್ವೀಟ್ ಕೂಡ ಮಾಡಿದ್ದಾರೆ. ಟ್ವೀಟ್ ಹ್ಯಾಕ್‌ ಆಗಿರುವುದು ಅಧಿಕಾರಿಗಳ ಗಮನಕ್ಕೆ ಬಂದ ತಕ್ಷಣ ಕೇವಲ ಮೂರೇ ನಿಮಿಷಗಳಲ್ಲಿ ಎಲ್ಲ ಟ್ವೀಟ್‌ಗಳನ್ನು ಅಳಿಸಿಹಾಕಲಾಗಿದೆ.

 

2021ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆಯನ್ನೂ ಹ್ಯಾಕ್ ಮಾಡಲಾಗಿತ್ತು. ಬಿಟ್ಕಾಯಿನ್ ಸಂಬಂಧಪಟ್ಟ ವಿಷಯಗಳನ್ನು ಟ್ವೀಟ್ ಮಾಡಿದ್ದ ಹ್ಯಾಕರ್ಸ್, ಸರ್ಕಾರವೇ ಅಧಿಕೃತವಾಗಿ ಬಿಟ್ಕಾಯಿನ್‌ಗಳನ್ನು ಖರೀದಿ ಮಾಡಿದೆ ಎಂದು ಟ್ವೀಟ್ ಮಾಡಿದ್ದರು.

ಪ್ರಧಾನಿ ಟ್ವಿಟರ್ ಖಾತೆಯನ್ನು ಮರಳಿ ಪಡೆದ ಬಳಿಕ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದ ಪ್ರಧಾನಮಂತ್ರಿ ಕಾರ್ಯಾಲಯ, ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆ ಕೆಲಕಾಲ ಹ್ಯಾಕ್ ಆಗಿತ್ತು ಎಂದು ತಿಳಿಸಿತ್ತು.

“ಭಾರತವು ಅಧಿಕೃತವಾಗಿ ಬಿಟ್‌ಕಾಯಿನ್ ಅನ್ನು ಕಾನೂನುಬದ್ಧ ಟೆಂಡರ್ ಎಂದು ಸ್ವೀಕರಿಸಿದೆ. ಸರ್ಕಾರವು ಅಧಿಕೃತವಾಗಿ 500 BTC ಅನ್ನು ಖರೀದಿಸಿದೆ ಮತ್ತು ಅವುಗಳನ್ನು ದೇಶದ ಎಲ್ಲಾ ನಿವಾಸಿಗಳಿಗೆ ವಿತರಿಸುತ್ತಿದೆ” ಎಂದು ಹ್ಯಾಕ್‌ ಮಾಡಲಾದಾಗ ಟ್ವೀಟ್ ಮಾಡಲಾಗಿತ್ತು. ಜೊತೆಗೆ, ಸಂಭವನೀಯ ಹಗರಣದ ಲಿಂಕ್ ಅನ್ನು ಸಹ ಲಗತ್ತಿಸಲಾಗಿತ್ತು.

ಟ್ವೀಟ್ ಅನ್ನು ಶೀಘ್ರದಲ್ಲೇ ಅಳಿಸಲಾಗಿದ್ದರೂ #Hacked ಹ್ಯಾಷ್‌ಟ್ಯಾಗ್‌ ತಕ್ಷಣವೇ ಟ್ರೆಂಡ್ ಆಗಿತ್ತು. ಬಳಕೆದಾರರು ಈಗ ಅಳಿಸಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್‌ನೊಂದಿಗೆ ಟ್ವೀಟ್ ಮಾಡಿದ್ದರು. “ಗುಡ್ ಮಾರ್ನಿಂಗ್ ಮೋದಿ ಜಿ, ಸಬ್ ಚಂಗಾ ಸಿ?” ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಟ್ವೀಟ್ ಮಾಡಿದ್ದರು.


ಇದನ್ನೂ ಓದಿರಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...