Homeಕರ್ನಾಟಕಕರ್ನಾಟಕ ಸಿಎಂ ಟ್ವಿಟರ್‌ ಖಾತೆ ಹ್ಯಾಕ್‌; ನೂರಕ್ಕೂ ಅಧಿಕ ಟ್ವೀಟ್‌!

ಕರ್ನಾಟಕ ಸಿಎಂ ಟ್ವಿಟರ್‌ ಖಾತೆ ಹ್ಯಾಕ್‌; ನೂರಕ್ಕೂ ಅಧಿಕ ಟ್ವೀಟ್‌!

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್ ಖಾತೆಯಾದ @CMofKarnataka ಕೆಲವು ನಿಮಿಷಗಳ ಕಾಲ ಹ್ಯಾಕ್‌ ಆಗಿರುವ ಅನುಮಾನ ವ್ಯಕ್ತವಾಗಿದೆ. ಕೆಲವೇ ನಿಮಿಷಗಳಲ್ಲಿ ನೂರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.

ಶನಿವಾರ ಬೆಳಿಗ್ಗೆ 6 ಗಂಟೆಯಿಂದ 18 ನಿಮಿಷಗಳ ಕಾಲ ಟ್ವಿಟರ್‌ ಹ್ಯಾಕ್‌ ಆಗಿತ್ತು ಎನ್ನಲಾಗಿದೆ. ಯಾವುದೇ ನಿರ್ದಿಷ್ಟ ವಿಷಯವನ್ನು ಟ್ವೀಟ್ ಮಾಡದಿದ್ದರೂ ಇತ್ತೀಚೆಗೆ ಖಾತೆ ತೆರೆದವರ ಫ್ರೊಪೈಲ್ ಸೇರಿದಂತೆ ಹಲವರನ್ನು ಟ್ಯಾಗ್ ಮಾಡಲಾಗಿತ್ತು.

ಸಿಎಂ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಸಂಬಂಧ ಟ್ವಿಟರ್ ಬಳಕೆದಾರರು ಅನುಮಾನ ವ್ಯಕ್ತಪಡಿಸಿ, ಟ್ವೀಟ್ ಕೂಡ ಮಾಡಿದ್ದಾರೆ. ಟ್ವೀಟ್ ಹ್ಯಾಕ್‌ ಆಗಿರುವುದು ಅಧಿಕಾರಿಗಳ ಗಮನಕ್ಕೆ ಬಂದ ತಕ್ಷಣ ಕೇವಲ ಮೂರೇ ನಿಮಿಷಗಳಲ್ಲಿ ಎಲ್ಲ ಟ್ವೀಟ್‌ಗಳನ್ನು ಅಳಿಸಿಹಾಕಲಾಗಿದೆ.

 

2021ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆಯನ್ನೂ ಹ್ಯಾಕ್ ಮಾಡಲಾಗಿತ್ತು. ಬಿಟ್ಕಾಯಿನ್ ಸಂಬಂಧಪಟ್ಟ ವಿಷಯಗಳನ್ನು ಟ್ವೀಟ್ ಮಾಡಿದ್ದ ಹ್ಯಾಕರ್ಸ್, ಸರ್ಕಾರವೇ ಅಧಿಕೃತವಾಗಿ ಬಿಟ್ಕಾಯಿನ್‌ಗಳನ್ನು ಖರೀದಿ ಮಾಡಿದೆ ಎಂದು ಟ್ವೀಟ್ ಮಾಡಿದ್ದರು.

ಪ್ರಧಾನಿ ಟ್ವಿಟರ್ ಖಾತೆಯನ್ನು ಮರಳಿ ಪಡೆದ ಬಳಿಕ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದ ಪ್ರಧಾನಮಂತ್ರಿ ಕಾರ್ಯಾಲಯ, ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆ ಕೆಲಕಾಲ ಹ್ಯಾಕ್ ಆಗಿತ್ತು ಎಂದು ತಿಳಿಸಿತ್ತು.

“ಭಾರತವು ಅಧಿಕೃತವಾಗಿ ಬಿಟ್‌ಕಾಯಿನ್ ಅನ್ನು ಕಾನೂನುಬದ್ಧ ಟೆಂಡರ್ ಎಂದು ಸ್ವೀಕರಿಸಿದೆ. ಸರ್ಕಾರವು ಅಧಿಕೃತವಾಗಿ 500 BTC ಅನ್ನು ಖರೀದಿಸಿದೆ ಮತ್ತು ಅವುಗಳನ್ನು ದೇಶದ ಎಲ್ಲಾ ನಿವಾಸಿಗಳಿಗೆ ವಿತರಿಸುತ್ತಿದೆ” ಎಂದು ಹ್ಯಾಕ್‌ ಮಾಡಲಾದಾಗ ಟ್ವೀಟ್ ಮಾಡಲಾಗಿತ್ತು. ಜೊತೆಗೆ, ಸಂಭವನೀಯ ಹಗರಣದ ಲಿಂಕ್ ಅನ್ನು ಸಹ ಲಗತ್ತಿಸಲಾಗಿತ್ತು.

ಟ್ವೀಟ್ ಅನ್ನು ಶೀಘ್ರದಲ್ಲೇ ಅಳಿಸಲಾಗಿದ್ದರೂ #Hacked ಹ್ಯಾಷ್‌ಟ್ಯಾಗ್‌ ತಕ್ಷಣವೇ ಟ್ರೆಂಡ್ ಆಗಿತ್ತು. ಬಳಕೆದಾರರು ಈಗ ಅಳಿಸಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್‌ನೊಂದಿಗೆ ಟ್ವೀಟ್ ಮಾಡಿದ್ದರು. “ಗುಡ್ ಮಾರ್ನಿಂಗ್ ಮೋದಿ ಜಿ, ಸಬ್ ಚಂಗಾ ಸಿ?” ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಟ್ವೀಟ್ ಮಾಡಿದ್ದರು.


ಇದನ್ನೂ ಓದಿರಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...